AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸಲು ನೃತ್ಯವು ಅತ್ಯುತ್ತಮ ಮಾರ್ಗವಾಗಿದೆ. ಇದು ನಿಮ್ಮ ಹೃದಯ ಬಡಿತವನ್ನು ಸ್ಥಿರವಾಗಿರಿಸುತ್ತದೆ. ಜತೆಗೆ ಹೃದಯದ ಅಪಾಯವನ್ನು ತಡೆಗಟ್ಟುತ್ತದೆ.

Dance Benefits: ಪ್ರತಿನಿತ್ಯ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Updated By: Skanda|

Updated on: Jul 30, 2021 | 7:31 AM

Share

ನೃತ್ಯ ಮಾಡುವ ಕಲೆ ಎಲ್ಲರಿಗೂ ಒಲಿದು ಬರುವುದಿಲ್ಲ. ಆದರೆ ಜನರೆದುರು ನೃತ್ಯ(Dance) ಮಾಡುವುದು ಒಂದು ಪ್ರತಿಭೆಯಾದರೆ ತಮ್ಮ ಪಾಡಿಗೆ ತಾವು ಒಂದು ನಿರ್ದಿಷ್ಟ ಸಮಯದವರೆಗೆ ನೃತ್ಯ ಮಾಡುವ ಅಭ್ಯಾಸ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಮಾನಸಿಕ ನೆಮ್ಮದಿ(Mental Health), ರಕ್ತದೊತ್ತಡದ ಸಮಸ್ಯೆಗೆ ಪರಿಹಾರ ಹಾಗೂ ದಿನನಿತ್ಯ ಹೆಚ್ಚು ಚಟುವಟಿಕೆಯಿಂದ ಕೂಡಿರಲು ಸಹಾಯಕವಾಗಿದೆ. ಹಾಗಿರುವಾಗ ನೃತ್ಯ ಮಾಡುವುದರಿಂದ ಆರೋಗ್ಯ ಪ್ರಯೋಜನಗಳು (Health Tips) ಎಷ್ಟಿವೆ ತಿಳಿಯಿರಿ.

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸಲು ನೃತ್ಯವು ಅತ್ಯುತ್ತಮ ಮಾರ್ಗವಾಗಿದೆ. ಇದು ನಿಮ್ಮ ಹೃದಯ ಬಡಿತವನ್ನು ಸ್ಥಿರವಾಗಿರಿಸುತ್ತದೆ. ಜತೆಗೆ ಹೃದಯದ ಅಪಾಯವನ್ನು ತಡೆಗಟ್ಟುತ್ತದೆ. ಜತೆಗೆ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ. ಉಸಿರಾಟವನ್ನು ಸುಧಾರಿಸುತ್ತದೆ.

ಕೀಲು ನೋವಿನಿಂದ ಪರಿಹಾರ ಪ್ರತಿನಿತ್ಯ ನೃತ್ಯ ಮಾಡುವುದರಿಂದ ಸ್ನಾಯು ಬಲಗೊಳ್ಳುತ್ತದೆ. ಮೂಳೆಗಳು ಬಲಿಷ್ಠವಾಗುತ್ತವೆ. ಜತೆಗೆ ಸೊಂಟನೋವು, ಕಾಲುನೋವು, ಬೆನ್ನಿನ ಹುರಿ ಭಾಗ, ಕೀಲು ಮತ್ತು ಸಂಧಿ ನೋವುಗಳಿಂದ ಪರಿಹಾರ ಪಡೆಯಬಹುದು.

ಮೆದುಳಿಗೆ ಅತ್ಯುತ್ತಮ ವ್ಯಾಯಾಮ ನತ್ಯವು ನಿಮ್ಮ ಸ್ಮರಣ ಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಮಾನಸಿಕ ಅರೋಗ್ಯಕ್ಕೆ ಸಹಾಯಕವಾಗಿದೆ. ಜತೆಗೆ ದೇಹದ ಸುಸ್ತು, ಹೃದಯ, ರಕ್ತನಾಳ, ಮೈಕೈ ನೋವಿನಂತಹ ಸಮಸ್ಯೆಗಳು ಬಾರದಂತೆ ತಡೆಗಟ್ಟಲು ಉತ್ತಮ ವ್ಯಾಯಾಮ ನೃತ್ಯ.

ಒತ್ತಡವನ್ನು ಕಡಿಮೆ ಮಾಡುತ್ತದೆ ನಿಮ್ಮ ಮನಸ್ಸಿನಲ್ಲಿ ತಳಮಳ, ಆತಂಕ, ಗಾಬರಿಯ ಲಕ್ಷಣಗಳು ಕಂಡು ಬರುತ್ತಿದ್ದರೆ ನೃತ್ಯ ಮಾಡಬಹುದು. ಇದು ನಿಮ್ಮೆಲ್ಲಾ ಒತ್ತಡವನ್ನು ಸುಧಾರಿಸುವುದಲ್ಲದೇ ಮಾನಸಿಕವಾಗಿ ಸದೃಢರಾಗಿರುವಂತೆ ನೋಡಿಕೊಳ್ಳುತ್ತದೆ.

ತೂಕ ನಷ್ಟಕ್ಕೆ ಸಹಾಯಕ ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಪಡಿಸುವುದರ ಜತೆಗೆ ದೇಹದಲ್ಲಿನ ಹೆಚ್ಚುವರಿ ಕೊಲೆಸ್ಟ್ರಾಲ್ಅನ್ನು ಕರಗಿಸಲು ಸಹಾಯಕವಾಗಿದೆ. ಜತೆಗೆ ನಿಮ್ಮ ಅರ್ಧದಷ್ಟು ಸಮಸ್ಯೆಗಳನ್ನು ದೂರಮಾಡುತ್ತದೆ. ಯಾವಾಗಲೂ ಸಂತೋಷದಿಂದಿರಲು ಸಹಾಯಕವಾಗಿದೆ.

ಇದನ್ನೂ ಓದಿ:

Health Tips: ಸ್ಟ್ರಾಬೆರಿ ವಿಶೇಷತೆ ಏನು? ಒಡೆದ ಹಿಮ್ಮಡಿಗೆ ಈ ಹಣ್ಣಿನ ರಸವನ್ನು ಹಾಕುವುದರಿಂದ ಚರ್ಮದ ಕಾಂತಿ ಹೆಚ್ಚಾಗುತ್ತದೆ

Health Tips: ಕಂಪನಿಗಳಲ್ಲಿ ನೈಟ್​ ಡ್ಯೂಟಿ ಮಾಡುತ್ತಿದ್ದೀರಾ? ಆರೋಗ್ಯ ಕಾಳಜಿಗೆ ಈ ಕೆಲವು ವಿಷಯಗಳನ್ನು ಮರೆಯದಿರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ