AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Low Blood Pressure: ಲೋ ಬಿಪಿ ಸಮಸ್ಯೆಯೇ? ಆಹಾರ ಪದ್ಧತಿ ಹೀಗಿರಲಿ

ಲೋ ಬಿಪಿ: ಕಡಿಮೆ ಬಿಪಿ ಸಮಸ್ಯೆ ಹೊಂದಿರುವವರು ಅತಿವೇಗದಿಂದ ಊಟ ಮಾಡುವುದನ್ನು ತಪ್ಪಿಸಬೇಕು. ಜತೆಗೆ ಒಂದೇ ಬಾರಿ ಹೊಟ್ಟೆ ತುಂಬಿ ಬಿಗಿಯುವಷ್ಟು ಊಟ ಮಾಡುವುದಕ್ಕಿಂತ ಸ್ವಲ್ಪವೇ ಆಹಾರವನ್ನು ನಿಧಾನವಾಗಿ ಸೇವಿಸಿ.

Low Blood Pressure: ಲೋ ಬಿಪಿ ಸಮಸ್ಯೆಯೇ? ಆಹಾರ ಪದ್ಧತಿ ಹೀಗಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 25, 2021 | 11:03 AM

Share

ರಕ್ತದೊತ್ತಡ ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವುದರಿಂದ ಹೈಪೊಟೆನ್ಷನ್​ ಉಂಟಾಗುತ್ತದೆ. ಕಡಿಮೆ ರಕ್ತದೊತ್ತಡ ಸಮಸ್ಯೆಯಿಂದ ತಲೆಭಾರ, ಆಯಾಸ ಮತ್ತು ತಲೆತಿರುಗುವಿಕೆ, ದೃಷ್ಟಿ ದೋಷದಂತಹ ಸಮಸ್ಯೆಗಳು ಕಾಡತೊಡಗುತ್ತದೆ. ಕಡಿಮೆ ರಕ್ತದೊತ್ತಡದಿಂದ ಉಸಿರಾಟ ತೊಂದರೆಯು ಉಂಟಾಗುವ ಸಂಭವವಿರುತ್ತದೆ. ಹೀಗಿರುವಾಗ ನಿಮ್ಮ ಆಹಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗಬೇಕಿದೆ. ಈ ಕುರಿತಂತೆ ಲೋ ಬಿಪಿ ಅಥವಾ ಕಡಿಮೆ ರಕ್ತದೊತ್ತಡದಿಂದ ಉಂಟಾಗುವ ಸಮಸ್ಯೆಯಿಂದ ಪರಿಹಾರ ಪಡೆಯಲು ಕೆಲವು ವಿಧದ ಆಹಾರ ಪದ್ಧತಿಗಳು ಹೀಗಿವೆ.

ಉಪ್ಪು ನಮ್ಮ ರಕ್ತದೊತ್ತಡವನ್ನು ಹೆಚ್ಚಿಸಲು ಉಪ್ಪು ಸಹಾಯ ಮಾಡುತ್ತದೆ. ಕಡಿಮೆ ರಕ್ತದೊತ್ತಡ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ ಮಧ್ಯಮ ಪ್ರಮಾಣದಲ್ಲಿ ಸೋಡಿಯಂ ಸೇವನೆಯನ್ನು ಹೆಚ್ಚಿಸಬೇಕಾಗುತ್ತದೆ.

ನೀರು ದ್ರವ ರೂಪದ ಆಹಾರವನ್ನು ಸೇವಿಸಬೇಕು. ನೀರು ಅಥವಾ ಹಣ್ಣುಗಳ ಜ್ಯೂಸ್​ಅನ್ನು ಸೇವಿಸುವದರಿಂದ ನಿರ್ಜಲೀಕರಣವನ್ನು ಎದರಿಸಲು ಸಹಾಯ ಮಾಡುತ್ತದೆ. ವೈದ್ಯರ ಪ್ರಕಾರ ಕಡಿಮೆ ಬಿಪಿ ಸಮಸ್ಯೆ ಹೊಂದಿರುವವರು ದಿನಕ್ಕೆ ಕನಿಷ್ಟ 8 ಕಪ್​ ನೀರನ್ನಾದರೂ ಸೇವಿಸಲೇಬೇಕು. ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಆಲ್ಕೋಹಾಲ್​ ಅಥವಾ ಮದ್ಯ ಸೇವನೆಯನ್ನು ತ್ಯಜಿಸಬೇಕು.

ಕೆಫೀನ್​ ಕಾಫಿ ಅಥವಾ ಕೆಫೀನ್​ ಚಹಾವು ಹೃದಯದ ರಕ್ತನಾಳದ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹೃದಯ ಬಡಿತವನ್ನು ಹೆಚ್ಚಿಸುತ್ತದೆ. ಕೆಫೀನ್​ ಸೇವನೆಯು ಅಲ್ಪಾವಧಿಯಲ್ಲಿಯೇ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಸಾಬೀತುಪಡಿಸಲಾಗಿದೆ.

ವಿಟಮಿನ್​ ಬಿ12 ಪೌಷ್ಟಿಕಾಂಶವುಳ್ಳ ಆಹಾರ ದೇಹದಲ್ಲಿ ವಿಟಮಿನ್​ ಬಿ12 ಕೊರತೆಯು ರಕ್ತಹೀನತೆಗೆ ಕಾರಣವಾಗುತ್ತದೆ. ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ವಿಟಮಿನ್​ ಬಿ12 ಸಮೃದ್ಧವಾಗಿರುವ ಆಹಾರಗಳಾದ ಧಾನ್ಯಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಮಾಂಸಹಾರಿಗಳಾಗಿದ್ದರೆ ಮಾಂಸವನ್ನು ಸೇವಿಸುವುದರಿಂದ ವಿಟಮಿನ್​ ಬಿ12 ಪೌಷ್ಟಿಕಾಂಶವನ್ನು ಪಡೆಯಬಹುದಾಗಿದೆ.

ಪ್ರೊಟೀನ್​ಯುಕ್ತ ಆಹಾರ ದೇಹಕ್ಕೆ ಪ್ರೊಟೀನ್ ಇಲ್ಲದಿರುವುದು ರಕ್ತಹೀನತೆಗೆ ಕಾರಣವಾಗುತ್ತದೆ. ದೈನಂದಿನ ಆಹಾರದಲ್ಲಿ ಬೀನ್ಸ್​, ಸಿಟ್ರಸ್​ ಹಣ್ಣುಗಳು, ಸೊಪ್ಪು, ಮೊಟ್ಟೆ ಈತರಹದ ಆಹಾರ ಸೇವನೆ ನಿಮ್ಮದಾಗಿರಲಿ. ಲೋ ಬಿಪಿ ಅಥವಾ ಕಡಿಮೆ ಬಿಪಿ ಸಮಸ್ಯೆ ಹೊಂದಿರುವವರು ಅತಿವೇಗದಿಂದ ಊಟ ಮಾಡುವುದನ್ನು ತಪ್ಪಿಸಬೇಕು. ಜತೆಗೆ ಒಂದೇ ಬಾರಿ ಹೊಟ್ಟೆ ತುಂಬಿ ಬಿಗಿಯುವಷ್ಟು ಊಟ ಮಾಡುವುದಕ್ಕಿಂತ ಸ್ವಲ್ಪವೇ ಆಹಾರವನ್ನು ನಿಧಾನವಾಗಿ ಸೇವಿಸಿ. ಆಹಾರವು ಜೀರ್ಣವಾಗಲು ಸಹಾಯವಾಗುತ್ತದೆ.

ಇದನ್ನೂ ಓದಿ:

World Hypertension Day 2021: ವಿಶ್ವ ಹೈಪರ್​ಟೆನ್ಶನ್​ ದಿನದ ಉದ್ದೇಶವೇನು? ಅಧಿಕ ರಕ್ತದೊತ್ತಡ ನಿಯಂತ್ರಣ ಹೇಗೆ?

Apple watch | ರಕ್ತದೊತ್ತಡ, ಆಲ್ಕೋಹಾಲ್ ಮಟ್ಟ, ಗ್ಲುಕೋಸ್ ಅಳೆಯುವ ಫೀಚರ್ ಜತೆಗೆ ಬರಲಿದೆ ಆಪಲ್ ವಾಚ್

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ