AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ

ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ.

Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 21, 2021 | 8:53 AM

Share

ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ. ಹಲಸಿನ ಹಣ್ನು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ.

ಹಲಸಿನ ಹಣ್ಣು ಕ್ಯಾನ್ಸರ್​ಅನ್ನು ತಡೆಯುತ್ತದೆ ಹಲಸಿನ ಹಣ್ಣುಗಳಲ್ಲಿ ಫ್ಲೇವನಾಯ್ಡಗಳು, ಫೈಟೊನ್ಯೂಟ್ರಿಯಂಟ್​ಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತದೆ. ಇದು ದೇಹದಲ್ಲಿ ಉತ್ಪತ್ತಿಯಾಗುವ ಆಮೂಲಾಗ್ರಗಳನ್ನು ನಾಶ ಪಡಿಸಲು ಸಹಾಯಕವಾಗಿದೆ. ಹಾಗಾಗಿ ಕ್ಯಾನ್ಸರ್ ಸಮಸ್ಯೆಯನ್ನು ತಡೆಯಲು ಇದು ಹೆಚ್ಚು ಸಹಾಯಕಾರಿಯಾಗಿದೆ.

ರೋಗ ನಿರೋಧಕವನ್ನು ಹೆಚ್ಚಿಸುತ್ತದೆ ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ. ಜತೆಗೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಹಲಸಿನ ಹಣ್ಣಿನಲ್ಲಿ ಫೈಬರ್ ಇರುವುದು ಹಲವು ರೀತಿಯಲ್ಲಿ ಪ್ರಯೋಜನಕಾರಿ. ಕರುಳಿನ ಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜತೆಗೆ ಕಾರ್ಸಿನೋಜೆಕ್ ರಾಸಾಯನಿಕಗಳನ್ನು ತೆಗೆದುಹಾಕುತ್ತದೆ. ಈ ರಾಸಾಯನಿಕಗಳು ದೊಡ್ಡ ಕರುಳಿನಲ್ಲಿ ಕಂಡು ಬರುತ್ತದೆ, ಇದನ್ನು ತೆಗೆದು ಹಾಕುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಆರೋಗ್ಯಕರ ಚರ್ಮ ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಯಂತಹ ಶಕ್ತಿಯುವ ಪದಾರ್ಥಗಳು ತುಂಬಿರುತ್ತವೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸೂರ್ಯನ ಶಾಖದಿಂದ ಹಾನಿಗೊಳಗಾದ ಚರ್ಮ ಮತ್ತು ಸುಕ್ಕುಗಳಿಂದ ಪರಿಹಾರ ಸಿಗುತ್ತದೆ ಮತ್ತು ಚರ್ಮವನ್ನು ಹೆಚ್ಚು ಪೋಷಿಸುತ್ತದೆ.

ಇದನ್ನೂ ಓದಿ:

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

Health Tips: ನಿಮ್ಮ ಪಾದಗಳು ಆರೋಗ್ಯವಾಗಿರಲು ಈ ಕೆಲವು ಸಲಹೆಗಳು ನಿಮಗಾಗಿ

(Know about health benefits of jackfruits check in Kannada)

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು