Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ

ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ.

Health Tips: ಹಲಸಿನ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ; ಈ ಕೆಲವು ಸಲಹೆಗಳು ನಿಮಗಾಗಿ
ಸಾಂದರ್ಭಿಕ ಚಿತ್ರ
Follow us
| Updated By: preethi shettigar

Updated on: Sep 21, 2021 | 8:53 AM

ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ. ಹಲಸಿನ ಹಣ್ನು ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ? ನೀವು ತಿಳಿದುಕೊಳ್ಳಬೇಕಾದ ಕೆಲವೊಂದಿಷ್ಟು ಮಾಹಿತಿ ಇಲ್ಲಿದೆ.

ಹಲಸಿನ ಹಣ್ಣು ಕ್ಯಾನ್ಸರ್​ಅನ್ನು ತಡೆಯುತ್ತದೆ ಹಲಸಿನ ಹಣ್ಣುಗಳಲ್ಲಿ ಫ್ಲೇವನಾಯ್ಡಗಳು, ಫೈಟೊನ್ಯೂಟ್ರಿಯಂಟ್​ಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತದೆ. ಇದು ದೇಹದಲ್ಲಿ ಉತ್ಪತ್ತಿಯಾಗುವ ಆಮೂಲಾಗ್ರಗಳನ್ನು ನಾಶ ಪಡಿಸಲು ಸಹಾಯಕವಾಗಿದೆ. ಹಾಗಾಗಿ ಕ್ಯಾನ್ಸರ್ ಸಮಸ್ಯೆಯನ್ನು ತಡೆಯಲು ಇದು ಹೆಚ್ಚು ಸಹಾಯಕಾರಿಯಾಗಿದೆ.

ರೋಗ ನಿರೋಧಕವನ್ನು ಹೆಚ್ಚಿಸುತ್ತದೆ ಹಲಸಿನ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಇದರಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇಂತಹ ಪ್ರಮುಖ ವಿಟಮಿನ್​ಗಳು ದೇಹದಲ್ಲಿರುವ ಕೆಟ್ಟ ಬ್ಯಾಕ್ಟೀಯಾಗಳನ್ನು ನಾಶ ಪಡಿಸುತ್ತವೆ. ಜತೆಗೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಹಲಸಿನ ಹಣ್ಣಿನಲ್ಲಿ ಫೈಬರ್ ಇರುವುದು ಹಲವು ರೀತಿಯಲ್ಲಿ ಪ್ರಯೋಜನಕಾರಿ. ಕರುಳಿನ ಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜತೆಗೆ ಕಾರ್ಸಿನೋಜೆಕ್ ರಾಸಾಯನಿಕಗಳನ್ನು ತೆಗೆದುಹಾಕುತ್ತದೆ. ಈ ರಾಸಾಯನಿಕಗಳು ದೊಡ್ಡ ಕರುಳಿನಲ್ಲಿ ಕಂಡು ಬರುತ್ತದೆ, ಇದನ್ನು ತೆಗೆದು ಹಾಕುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಆರೋಗ್ಯಕರ ಚರ್ಮ ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಯಂತಹ ಶಕ್ತಿಯುವ ಪದಾರ್ಥಗಳು ತುಂಬಿರುತ್ತವೆ. ಇದು ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸೂರ್ಯನ ಶಾಖದಿಂದ ಹಾನಿಗೊಳಗಾದ ಚರ್ಮ ಮತ್ತು ಸುಕ್ಕುಗಳಿಂದ ಪರಿಹಾರ ಸಿಗುತ್ತದೆ ಮತ್ತು ಚರ್ಮವನ್ನು ಹೆಚ್ಚು ಪೋಷಿಸುತ್ತದೆ.

ಇದನ್ನೂ ಓದಿ:

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

Health Tips: ನಿಮ್ಮ ಪಾದಗಳು ಆರೋಗ್ಯವಾಗಿರಲು ಈ ಕೆಲವು ಸಲಹೆಗಳು ನಿಮಗಾಗಿ

(Know about health benefits of jackfruits check in Kannada)

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ