AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಒಣ ಕೆಮ್ಮಿನಿಂದ ಸುಸ್ತಾಗಿದ್ದೀರಾ? ಜೇಷ್ಠ ಮಧುವಿನ ಸೇವನೆ ಉತ್ತಮ ಔಷಧ

ಜೇಷ್ಠ ಮಧು ಕಡ್ಡಿಯನ್ನು ನಿರಿನಲ್ಲಿ ಬೆರೆಸಿ ಕುದಿಸಿ ನಂತರ ಕಷಾಯದ ರೂಪದಲ್ಲಿಯೂ ಸೇವಿಸಬಹುದು. ಜತೆಗೆ ಚೂರೇ ಚೂರು ನಿಂಬೆ ರಸ ಮಿಶ್ರಣ ಮಾಡಿ ಸೇವಿಸಬಹುದು

Health Tips: ಒಣ ಕೆಮ್ಮಿನಿಂದ ಸುಸ್ತಾಗಿದ್ದೀರಾ? ಜೇಷ್ಠ ಮಧುವಿನ ಸೇವನೆ ಉತ್ತಮ ಔಷಧ
ಜೇಷ್ಠ ಮಧು
TV9 Web
| Edited By: |

Updated on: Jun 29, 2021 | 9:36 AM

Share

ನಮ್ಮ ಸುತ್ತಮುತ್ತಲೇ ಸಿಗುವ ಅದೆಷ್ಟೋ ಆಹಾರ ಪದಾರ್ಥಗಳಿಂದ ನಾವು ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದು. ಮಳೆಗಾಲದ ಸಮಯದಲ್ಲಂತೂ ಕೆಮ್ಮು, ನೆಗಡಿ ಮಾಮೂಲಿ. ಅದರಲ್ಲಿಯೂ ಕೊರೊನಾ ಮಹಾಮಾರಿಯ ಆರ್ಭಟ ಬೇರೆ ಇರುವುದರಿಂದ ಕೊಂಚ ಭಯವಾದರೂ ಹೆಚ್ಚು ಆರೋಗ್ಯದ ಕುರಿತಾಗಿ ಜಾಗೃತಿ ಮಾಡುತ್ತಿದ್ದೇವೆ. ಹಾಗಾಗಿ ಮಕ್ಕಳಿಗೆ ಒಣ ಕೆಮ್ಮು, ಶೀತವಾದಾಗ ಜೇಷ್ಠ ಮಧು ನೀಡುವ ಮೂಲಕ ಕೆಮ್ಮು ಬಹುಬೇಗ ವಾಸಿಯಾಗುತ್ತವೆ.

ಜೇಷ್ಠ ಮಧು ನೋಡಲು ಸಣ್ಣ ಕಡ್ಡಿಯಷ್ಟೆ. ಸಣ್ಣ ಸಸಿಯ ಕಾಂಡದಂತೆ ಇರುತ್ತದೆ. ಇದನ್ನು ಜಗಿಯುವುದರಿಂದ ಕೆಮ್ಮು ವಾಸಿಯಾಗುತ್ತದೆ. ಬಹುಬೇಗ ಉಸಿರಾಟ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದ ಅಂಗಡಿಗಳಲ್ಲಿ ಸಾಮಾನ್ಯವಾಗಿ ಜೇಷ್ಠ ಮಧು ಸಿಗುತ್ತದೆ. ತಿನ್ನಲು ಸ್ವಲ್ಪ ಸಿಹಿಯಾಗಿರುವುದರಿಂದ ಮಕ್ಕಳು ಈ ಔಷಧವನ್ನು ಇಷ್ಟಪಟ್ಟು ತಿನ್ನುತ್ತಾರೆ.

ಈ ಕಡ್ಡಿಯನ್ನು ನೀರಿನಲ್ಲಿ ಬೆರೆಸಿ ಕುದಿಸಿ ನಂತರ ಕಷಾಯದ ರೂಪದಲ್ಲಿಯೂ ಸೇವಿಸಬಹುದು. ಜತೆಗೆ ಚೂರೇ ಚೂರು ನಿಂಬೆ ರಸ ಮಿಶ್ರಣ ಮಾಡಿ ಸೇವಿಸಬಹುದು. ನಿಂಬೆ ರಸದಲ್ಲಿಯೂ ಸಹ ಒಣ ಕೆಮ್ಮಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳನ್ನು ನಾಶ ಪಡಿಸುವ ಸಾಮರ್ಥ್ಯ ಇರುವುದರಿಂದ ಆರೋಗ್ಯ ಸಮಸ್ಯೆಯಿಂದ ಬಹುಬೇಗ ಗುಣಮುಖರಾಗಲು ಸಹಾಯಕವಾಗುತ್ತದೆ.

ಮಕ್ಕಳಲ್ಲಿ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಜೇಷ್ಠಮಧು ಸಹಾಯಕವಾಗಿದೆ. ಕಷಾಯ ಮಾಡಿ ಸೇವಿಸುವುದರ ಮೂಲಕ ಅಥವಾ ತೇಯ್ದು ಜೇಷ್ಠ ಮಧುವಿನ ಪೇಸ್ಟ್​ ಅನ್ನು ನೀರಿಗೆ ಬೆರೆಸಿ ಸೇವಿಸುವುದರ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಚರ್ಮದ ಅಲರ್ಜಿ, ಆಮಶಂಕೆ ಮತ್ತು ಅಸ್ತಮಾ ರೋಗಿಗಳಿಗೆ ಜೇಷ್ಠ ಮಧು ಸಹಾಯಕವಾಗಿದೆ. ಗಂಟಲಲ್ಲಿ ಅಥವಾ ಶ್ವಾಸಕೋಶದಲ್ಲಿ ಕಟ್ಟಿಕೊಂಡಿರುವ ಕಫವನ್ನು ಕರಗಿಸಲು ಇದು ಸಹಾಯ ಮಾಡುತ್ತದೆ. ನೋಡಲು ಸಣ್ಣ ಕಡ್ಡಿಯಾಗಿದ್ದರೂ ಸಹ ಆರೋಗ್ಯಕ್ಕೆ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ.

ಇದನ್ನೂ ಓದಿ:

ಸಂಸ್ಕರಿಸಿದ ಹಾಗೂ ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

Health Tips: ಕೊರೊನಾ ಸೋಂಕಿನ ಮಧ್ಯೆ ಮತ್ತೆ ನೆನಪಾಯಿತು ಈ ಗಿಡ! ‘ನೆಲನೆಲ್ಲಿ’ ಸಸ್ಯದಲ್ಲಿ ಅಡಗಿದೆ ಔಷಧೀಯ ಗುಣ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ