AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ

ಪುದೀನಾ ಎಲೆ ಶೀತದ ಸಮಯದಲ್ಲಿ ಗಂಟಲು ನೋವು ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ. ಮಳೆಗಾಲದಲ್ಲಿ ಪುದೀನಾದಿಂದ ತಯಾರಿಸಿದ ಚಹಾ ಮಾಡಿ ಸವಿಯುವ ಮೂಲಕ ರುಚಿಯ ಜತೆಗೆ ಆರೋಗ್ಯ ಪ್ರಯೋಜನಗಳನ್ನೂ ಸಹ ಪಡೆಯಬಹುದು.

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Oct 03, 2021 | 10:26 AM

Share

ಸಾಮಾನ್ಯವಾಗಿ ಮನೆಗಳಲ್ಲಿ ಪುದೀನ ಸಸ್ಯವನ್ನು ಬೆಳೆದಿರುತ್ತೀರಿ. ಪುದೀನಾದಿಂದ ತಯಾರಿಸುವ ಅಡುಗೆ ಪದಾರ್ಥಗಳು ಹೆಚ್ಚು ರುಚಿಕರವಾಗಿರುತ್ತದೆ. ಪುದೀನಾ ಚಟ್ನಿ, ಪುದೀನಾ ಸಾಂಬಾರ್ ಸೇರಿದಂತೆ ಪಕೋಡಾದಂತಹ ಸ್ನ್ಯಾಕ್ಸ್​ಗಳನ್ನೂ ಸಹ ಮಾಡಿ ಸವಿಯುತ್ತೇವೆ. ಹೀಗಿರುವಾಗ ಪುದೀನಾ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ? ಪುದೀನಾ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂಬೆಲ್ಲಾ ಮಾಹಿತಿ ಈ ಕೆಳಗಿನಂತಿದೆ ತಿಳಿಯಿರಿ.

ಪುದೀನಾ ಹೊಟ್ಟೆ ನೋವು, ಕೆಟ್ಟ ಮನಸ್ಥಿತಿ, ಶಕ್ತಿಯ ನಷ್ಟ ಮತ್ತು ಶೀತದಂತಹ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಶೀತದ ಸಮಯದಲ್ಲಿ ಗಂಟಲು ನೋವು ಸಮಸ್ಯೆಗೆ ಉತ್ತಮ ಪರಿಹಾರವಾಗಿದೆ. ಮಳೆಗಾಲದಲ್ಲಿ ಪುದೀನಾದಿಂದ ತಯಾರಿಸಿದ ಚಹಾ ಮಾಡಿ ಸವಿಯುವ ಮೂಲಕ ರುಚಿಯ ಜತೆಗೆ ಆರೋಗ್ಯ ಪ್ರಯೋಜನಗಳನ್ನೂ ಸಹ ಪಡೆಯಬಹುದು.

ದೇಹದಲ್ಲಿ ಉಂಟಾದ ಅಲರ್ಜಿಗಳನ್ನು ಗುಣಪಡಿಸಲು ಬೇಕಾದ ಉತ್ಕರ್ಷಣ ನಿರೋಧಕವನ್ನು ಪುದೀನಾ ಹೊಂದಿರುತ್ತದೆ. ಹೊಟ್ಟೆ ನೋವಿನಿಂದ ಪರಿಹಾರ ಕಂಡುಕೊಳ್ಳಲು ಜತೆಗೆ ಹೊಟ್ಟೆ ಉಬ್ಬುವುದು, ಗ್ಯಾಸ್ ಮತ್ತು ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ಸೆಳೆತದ ಸಮಸ್ಯೆಯನ್ನು ನಿವಾರಿಸುತ್ತದೆ.

ಪುದೀನಾ ಎಲೆ ಸೇವನೆಯು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯಕವಾಗಿದೆ. ತಲೆನೋವನ್ನು ನಿಯಂತ್ರಿಸುತ್ತದೆ. ಜತೆಗೆ ಬಾಯಿಯ ಉಸಿರಾಟ ಮತ್ತು ಬಾಯಿಯಿಂದ ಹೊರ ಬರುವ ಕೆಟ್ಟ ವಾಸೆನೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ.

ಪುದೀನಾ ಎಲೆ ಸೇವನೆ ಅಸ್ತಮಾ ರೋಗಿಗಳಿಗೆ ಸಹಾಯಕವಾಗಿದೆ. ಪುದೀನಾದಲ್ಲಿರುವ ಮೆಂಥಾಲ್ ಮೂಗು ಕಟ್ಟುವುದು ಮತ್ತು ಶೀತದ ಸಮಸ್ಯೆಗೆ ಪರಿಹಾರ ನೀಡುತ್ತದೆ. ಪುದೀನಾ ತೂಕ ನಷ್ಟಕ್ಕೆ ಅನುಕೂಲವಾಗಿದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ ಜತೆಗೆ ಆಹಾರದಿಂದ ಪೋಷಕಾಂಶಗಳನ್ನು ಹೀರಿಕೊಳ್ಳುತ್ತದೆ. ಜತೆಗೆ ಖಿನ್ನತೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ ಹಾಗೂ ಚರ್ಮದ ಆರೈಕೆಗೆ ಸಹಾಯಕವಾಗಿದೆ.

ಇದನ್ನೂ ಓದಿ:

Mint Benefits: ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಕಾಯಿಲೆಗೂ ಪುದೀನಾ ರಾಮಬಾಣ

Benefits of Mint Leaves: ಸುವಾಸನೆಯುಕ್ತ ಮೂಲಿಕೆ ಪುದೀನಾದಿಂದ ಇರುವ ವೈದ್ಯಕೀಯ ಉಪಯೋಗಗಳು ಒಂದೆರಡಲ್ಲ..!

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ