AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Benefits Of Pomegranate: ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣು ಸೇವಿಸಿ; ರೋಗಗಳಿಂದ ದೂರವಿರಿ

Health Tips: ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹದಲ್ಲಿ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿನ ಹೆಚ್ಚುವರಿ ಬೊಜ್ಜು ನಿವಾರಣೆಗೆ ಇದು ಸಹಾಯ ಮಾಡುತ್ತದೆ.

Benefits Of Pomegranate: ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣು ಸೇವಿಸಿ; ರೋಗಗಳಿಂದ ದೂರವಿರಿ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Oct 19, 2021 | 8:43 AM

Share

ದೇಹಕ್ಕೆ ಪೌಷ್ಟಿಕಾಂಶಯುಕ್ತ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಿರುವಾಗ ದಾಳಿಂಬೆ ಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. ಇದು ನಿಮ್ಮ ದೇಹವನ್ನು ಸದೃಢವಾಗಿಡುವುದರ ಜತೆಗೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಿರಿ.

ದಾಳಿಂಬೆ ಹಣ್ಣನ್ನು ನಿಯಮಿತವಾಗಿ ಸೇವಿಸುವ ಮೂಲಕ ದೇಹದಲ್ಲಿ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜತೆಗೆ ದೇಹದಲ್ಲಿನ ಹೆಚ್ಚುವರಿ ಬೊಜ್ಜು ನಿವಾರಣೆಗೆ ಇದು ಸಹಾಯ ಮಾಡುತ್ತದೆ. ದಾಳಿಂಬೆಯಲ್ಲಿ ನಾರಿನಾಂಶ ಹೆಚ್ಚಿರುತ್ತದೆ. ಜತೆಗೆ ಕಡಿಮೆ ಪ್ರಮಾಣದ ಕ್ಯಾಲೊರಿ ಹೊಂದಿರುತ್ತದೆ. ಇದರಿಂದ ದೇಹದ ತೂಕ ಇಳಿಸಿಕೊಳ್ಳಲು ಸಹಾಯಕ.

ದಾಳಿಂಬೆಯಲ್ಲಿ ಹೆಚ್ಚಿನ ಫೈಬರ್ ಇರುತ್ತದೆ ಜತೆಗೆ, ದಾಳಿಂಬೆಯಲ್ಲಿ ನೀರಿನಾಂಶ ಹೆಚ್ಚಿರುವುದರಿಂದ ದೇಹದಲ್ಲಿ ನೀರಿನ ಕೊರತೆ ಹೋಗಲಾಡಿಸಲು ಸಹಾಯಕವಾಗಿದೆ. ಅದಕ್ಕಾಗಿಯೇ ಪ್ರತಿನಿತ್ಯ ಒಂದು ದಾಳಿಂಬೆ ಹಣ್ಣನ್ನು ಸವಿಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ.

ದಾಳಿಂಬೆ ಸೇವನೆಯು ನಿಮ್ಮ ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಿಂದ ಮುಖದ ಕಾಂತಿ ಹೆಚ್ಚಿಸಿಕೊಳ್ಳಬಹುದಾಗಿದೆ. ದಾಳಿಂಬೆ, ಚರ್ಮದಲ್ಲಿನ ಕಪ್ಪು ಕಲೆ, ಮುಖದಲ್ಲಿ ಎಣ್ಣೆಯಾಂಶವನ್ನು ಹೋಗಲಾಡಿಸಲು ಸಹಾಯಕವಾಗಿದೆ. ನೀವು ಚರ್ಮದ ಸಮಸ್ಯೆಗಳನ್ನು ಹೊಂದಿದ್ದರೆ ದಾಳಿಂಬೆ ಹಣ್ಣು ಸೇವನೆಯನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ಬಹುಬೇಗ ಪರಿಹಾರ ಕಂಡುಕೊಳ್ಳಬಹುದು. ದಾಳಿಂಬೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ಬಾಯಿಯಲ್ಲಿ ಸೋಂಕು ಮತ್ತು ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:

Health Tips: ನಿಮ್ಮ ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

Health Tips: ನಿಮ್ಮ ಹಲ್ಲುಗಳನ್ನು ಬಿಳುಪಾಗಿಸಲು ಇಲ್ಲಿವೆ ಸಲಹೆಗಳು​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ