AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ

ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಕೆಲವು ಅಂಶಗಳು ಗಮನದಲ್ಲಿರಲಿ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on: Sep 03, 2021 | 8:29 AM

Share

ಕೆಲವರು ದೀರ್ಘಕಾಲದವರೆಗೆ ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಾರೆ. ಮಾನಸಿಕ ಕಿರಿಕಿರಿ, ತಲೆನೋವು ಮತ್ತು ಆಯಾಸದಂತಹ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದು ರಕ್ತಹೀನತೆ ಸಮಸ್ಯೆ ಲಕ್ಷಣವಾಗಿರಬಹುದು. ದೇಹದಲ್ಲಿ ಸಾಕಷ್ಟು ರಕ್ತವಿಲ್ಲದಿದ್ದರೆ ಇಂತಹ ಸಮಸ್ಯೆಗಳು ಎದುರಾಗುತ್ತವೆ. ಹಾಗಿರುವಾಗ ರಕ್ತಹೀನೆತೆ ಸಮಸ್ಯೆಯಿಂದ ಬಳಲುತ್ತಿರುವವರು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬ ಮಾಹಿತಿ ಈ ಕೆಳಗಿನಂತಿದೆ.

ಪ್ರಸ್ತುತ ಸಮಯದಲ್ಲಿ ಮಕ್ಕಳಲ್ಲಿಯೇ ರಕ್ತಹೀನತೆ ಸಮಸ್ಯೆ ಕಂಡು ಬರುತ್ತಿರುವುದು ಹೆಚ್ಚುತ್ತಿದೆ. ಚಿಕ್ಕ ವಯಸ್ಸಿನಲ್ಲಿರುವಾಗಲೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡು ಬರುತ್ತಿದೆ. ಪೌಷ್ಟಿಕ ಆಹಾರ ಇಲ್ಲದಿರುವುದು, ಜೀವನ ಶೈಲಿಯ ಬದಲಾವಣೆಗಳಿಂದ ದೇಹ ದುರ್ಬಲವಾಗುತ್ತಿದೆ. ಆರೋಗ್ಯಕರ ಆಹಾರ, ಪೌಷ್ಟಿಕಯುಕ್ತ ತರಕಾರಿಗಳು, ಹಣ್ಣುಗಳ ಸೇವನೆ ಮಾಡದಿರುವುದಿಂದ ರಕ್ತಹೀನತೆ ಸಮಸ್ಯೆ ಜನರನ್ನು ಬಾಧಿಸುತ್ತಿದೆ. ಹೀಗಿರುವಾಗ ಆರೋಗ್ಯದ ಕುರಿತಾಗಿ ಜನರು ಹೆಚ್ಚು ಲಕ್ಷವಹಿಸಲೇಬೇಕು.

ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ನಿರ್ಲಕ್ಷ್ಯ ಬೇಡ. ಕೆಲವು ಸಣ್ಣ ಸಮಸ್ಯೆಯೆಂದು ನಿರ್ಲಕ್ಷ್ಯ ತೋರಿದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನು ತಂದೊಡ್ಡಬಹುದು. ಹಾಗಾಗಿ ಆರೋಗ್ಯದ ಕುರಿತಾಗಿ ಹೆಚ್ಚು ಗಮನವಿರಲಿ. ಇದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳುವುದರ ಜತೆಗೆ ಕಾಳಜಿಯಿಂದ ನೋಡಿಕೊಳ್ಳಬಹುದು.

ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವ ಜನರು ಸಿಟ್ರಸ್ ಹಣ್ಣುಗಳನ್ನು ಹೆಚ್ಚು ಸೇವಿಸಬೇಕು. ಕಿತ್ತಳೆ ಮತ್ತು ಬೀನ್ಸ್ ನಿಮ್ಮ ದೈನಂದಿನ ಆಹಾರದ ಭಾಗವಾಗಿರಲಿ. ವಿಟಮಿನ್ ಸಿ ಇರುವ ಆಹಾರವನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣ ಹೆಚ್ಚಾಗುತ್ತದೆ.

ಹಸಿರು ತರಕಾರಿಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಅವುಗಳಲ್ಲಿ ಕಬ್ಬಣವು ದೇಹಕ್ಕೆ ತುಂಬಾ ಒಳ್ಳೆಯದು.

ಅಗಸೆ ಬೀಜಗಳು, ಕುಂಬಳಕಾಯಿ ಬೀಜಗಳು, ಗೋಡಂಬಿ, ಪಿಸ್ತಾ, ಧಾನ್ಯಗಳನ್ನು ನಿಯಮಿತವಾಗಿ ಸೇವಿಸಬೇಕು

ನಿಮಗೆ ಅಗತ್ಯವಿರುವ ಕಬ್ಬಿಣದ ಅಂಶವನ್ನು ಪಡೆಯಲು ಬಿಟ್ರೂಟ್​ನಂತಹ ಕೆಂಪು ತರಕಾರಿಗಳನ್ನು ಸೇವಿಸಿ. ಇದು ದೇಹದಲ್ಲಿ ರಕ್ತದ ಉತ್ಪತ್ತಿಗೆ ಸಹಾಯಕವಾಗಿದೆ

ಇದನ್ನೂ ಓದಿ:

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

Health Tips: ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡುವುದರಿಂದ ಅನೇಕ ಆರೋಗ್ಯಕರ ಪ್ರಯೋಜನಗಳಿವೆ

(Know about remedies for anemia problem check in kannada)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ