AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಕಾಂತಿ ಬೀಜಗಳ ಸೇವನೆಯ ಆರೋಗ್ಯ ಪ್ರಯೋಜನಗಳು; ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಉತ್ತಮ ಮಾರ್ಗ

Sunflower Seeds: ಸೂರ್ಯಕಾಂತಿ ಎಣ್ಣೆಯನ್ನು ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುತ್ತೇವೆ. ಆದರೆ ಸೂರ್ಯಕಾಂತಿ ಬೇಜವನ್ನೂ ಸಹ ನೇರವಾಗಿ ಆಹಾರದಲ್ಲಿ ಬಳಸಬಹುದು. ಇದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಸಹ ಇವೆ.

ಸೂರ್ಯಕಾಂತಿ ಬೀಜಗಳ ಸೇವನೆಯ ಆರೋಗ್ಯ ಪ್ರಯೋಜನಗಳು; ಮಧುಮೇಹ ಸಮಸ್ಯೆ ನಿಯಂತ್ರಣಕ್ಕೆ ಉತ್ತಮ ಮಾರ್ಗ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 30, 2021 | 8:20 AM

ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆಗಳು ಜನರನ್ನು ಬಾಧಿಸುತ್ತಿದೆ. ಆಹಾರದಲ್ಲಿ ಪೌಷ್ಟಿಕತೆಯ ಕೊರತೆ ಇದಕ್ಕೆ ಮುಖ್ಯ ಕಾರಣವಾಗಿದೆ. ದೇಹದಲ್ಲಿ ಗ್ಲೂಕೋಸ್ ಮಟ್ಟ ಏರುಪೇರಾದರೆ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಮಧುಮೇಹ ಸಮಸ್ಯೆ ಕಾಡುತ್ತದೆ. ನಿಮ್ಮ ಆಹಾರ ಸೇವನೆ ಮತ್ತು ಜೀವನ ಶೈಲಿಯಲ್ಲಿ ಕೆಲವು ಬದಲಾವಣೆಗಳಿಂದ ದೇಹದಲ್ಲಿ ಸಕ್ಕರೆ ಮಟ್ಟದ ಏರುಪೇರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. ಇದಕ್ಕೆ ಉತ್ತಮ ಮಾರ್ಗ ಸೂರ್ಯಕಾಂತಿ ಬೀಜ.

ಸೂರ್ಯಕಾಂತಿ ಎಣ್ಣೆಯನ್ನು ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುತ್ತೇವೆ. ಆದರೆ ಸೂರ್ಯಕಾಂತಿ ಬೇಜವನ್ನೂ ಸಹ ನೇರವಾಗಿ ಆಹಾರದಲ್ಲಿ ಬಳಸಬಹುದು. ಇದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಸಹ ಇವೆ. ಸೇವಿಸಲೂ ಸಹ ತುಂಬಾ ರುಚಿಕರವಾಗಿರುವ ಸೂರ್ಯಕಾಂತಿ ಬೀಜವನ್ನು ಎಲ್ಲರೂ ಇಷ್ಟಪಟ್ಟು ಸೇವಿಸುತ್ತಾರೆ.

ಸೂರ್ಯಕಾಂತಿ ಬೀಜದಲ್ಲಿ ಕೊಬ್ಬಿನಾಮ್ಲಗಳು, ಜೀವಸತ್ವಗಳು ಮತ್ತು ಖನಿಜಗಳಿರುತ್ತವೆ. ಜತೆಗೆ ಫೈಬರ್ ಅಂಶ ಕೂಡ ಅಧಿಕಾವಾಗಿರುತ್ತವೆ. ಮಧುಮೇಹಿಗಳಿಗೆ ಸೂರ್ಯಕಾಂತಿ ಬೀಜ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮಧುಮೇಹ ಸಮಸ್ಯೆ ಇರುವವರು ಆಹಾರದ ಭಾಗವಾಗಿ ಸೂರ್ಯಕಾಂತಿ ಬೀಜವನ್ನು ಸೇವಿಸುವ ಮೂಲಕ ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದಾಗಿದೆ.

ಸೂರ್ಯಕಾಂತಿ ಬೀಜಗಳನ್ನು ನೇರವಾಗಿ ತಿನ್ನಬಹುದು. ಇಲ್ಲವೇ ನೀರಿನಲ್ಲಿ ನೆನೆಸಿ ಸೇವಿಸಬಹುದು. ಇಲ್ಲವೇ ಸೂರ್ಯಕಾಂತಿ ಎಣ್ಣೆ ತಯಾರಿಸಿ ಅದರಿಂದ ಆಹಾರ ತಯಾರಿಸಿ ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಆರೋಗ್ಯ ಪ್ರಯೋಜನಗಳು

ಅವುಗಳಲ್ಲಿರುವ ಕೊಬ್ಬಿನಾಮ್ಲಗಳು ದೇಹದಲ್ಲಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವರಿಗೆ ಸೂರ್ಕಾಂತಿ ಬೀಜ ಸೇವನೆ ಉತ್ತಮ ಮಾರ್ಗ.

ಸೂರ್ಯಕಾಂತಿ ಬೀಜ ಸಂಧಿವಾತ, ಅಸ್ತಮಾದಂತಹ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.

ವಿಟಮಿನ್ ಇ ಅಧಿಕಾವಾಗಿರುತ್ತದೆ. ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ.

ವಿಟಮಿನ್ ಸಿ ಅಂಶವಿದ್ದು ಇದು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಿ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಸೂರ್ಯಕಾಂತಿ ಬೀಜಗಳು ಕೊಲೊನ್ ಕ್ಯಾನ್ಸರ್ ತಡೆಯಲು ಸಹಾಯಕವಾಗಿದೆ.

ಅವುಗಳಲ್ಲಿರುವ ಮ್ಯಾಂಗನೀಸ್ ಮೂಳೆಗಳನ್ನು ಬಲಿಷ್ಠಗೊಳಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ದೇಹ ತೂಕ ಕಡಿಮೆ ಮಾಡಲು ರಾತ್ರಿ ಈ ಆಹಾರಗಳನ್ನು ಸೇವಿಸಿ

Women Health: ಯಾವುದೇ ಡಯಟ್​ ಇಲ್ಲದೇ ತೂಕ ಇಳಿಸಿಕೊಳ್ಳುವುದು ಹೇಗೆ? ಮಹಿಳೆಯರಿಗಾಗಿ ಇಲ್ಲಿದೆ ಸಲಹೆಗಳು

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ