AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹುಣಸೆ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಹುಣಸೆ ಹಣ್ಣು: ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.

Health Tips: ಹುಣಸೆ ಹಣ್ಣಿನ ಸೇವನೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
ಹುಣಸೆ ಹಣ್ಣು
TV9 Web
| Updated By: ಆಯೇಷಾ ಬಾನು|

Updated on: Jul 15, 2021 | 6:58 AM

Share

ಹುಣಸೆ ಹಣ್ಣನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ರುಚಿ ಹೆಚ್ಚಿಸಲು ಬಳಸುತ್ತೇವೆ. ಅದೊಂದೇ ಅಲ್ಲದೇ ಹುಣಸೆ ಹಣ್ಣಿನ ಚಟ್ಣಿ, ಸಾಂಬಾರ್​ ಮಾಡಿ ಸವಿಯಲೂಬಹುದು. ಜತೆಜತೆಗೆ ಆರೋಗ್ಯ ಪ್ರಯೋಜನಗಳೂ ಕೂಡಾ ಸಾಕಷ್ಟಿವೆ. ನಾವು ಪ್ರತಿ ನಿತ್ಯ ಸೇವಿಸುವ ಆಹಾರ ಪದಾರ್ಥಗಳಿಂದ ನಮ್ಮ ಆರೋಗ್ಯ ಸುಧಾರಣೆಯ ಬಗ್ಗೆ ನಾವು ತಿಳಿದುಕೊಳ್ಳಲೇ ಬೇಕು. ಹಾಗಾಗಿ ಹುಣಸೆ ಹಣ್ಣಿನಲ್ಲಿ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ.

ತೂಕ ನಷ್ಟಕ್ಕೆ ಸಹಾಯಕ ಹುಣಸೆ ಹಣ್ಣು ಫೈಬರ್​ ಸಂಯುಕ್ತದಿಂದ ಸಮೃದ್ಧವಾಗಿರುತ್ತದೆ. ಇದು ಕಡಿಮೆ ಕೊಬ್ಬಿನಾಂಶವನ್ನು ಹೊಂದಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲಿ ಹೆಚ್ಚಿನ ಫೈಬರ್​ ಪ್ರಮಾಣವಿದ್ದು ನಿಮ್ಮ ಹಸಿವಿನ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹುಣಸೆ ಹಣ್ಣು ವಿಟಮಿನ್​ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಯಾವುದೇ ರೀತಿಯ ಬ್ಯಾಕ್ಟೀರಿಯಾಗಳನ್ನು ತಡೆಯಲು ಸಹಾಯಕವಾಗಿದೆ. ಇದು ಆ್ಯಂಟಿ- ಸಫ್ಟಿಕ್​ ಗುಣಗಳನ್ನು ಹೊಂದಿರುತ್ತದೆ. ಅಸ್ತಮಾ, ಕೆಮ್ಮು ಮತ್ತು ಶೀತ ಸಮಸ್ಯೆಯನ್ನು ತಡೆಯಲು ಸಹಾಯಕವಾಗಿದೆ.

ಹೃದಯಕ್ಕೆ ಒಳ್ಳೆಯದು ಹುಣಸೆ ಹಣ್ಣು ಹೃದಯಕ್ಕೆ ಒಳ್ಳೆಯದು. ಇದು ಕೊಲೆಸ್ಟ್ರಾಲ್​ ಮಟ್ಟವನ್ನು ಕಡಿಮೆ ಮಾಡುತ್ತದೆ. ಜತೆಗೆ ಉತ್ತಮ ಕೊಲೆಸ್ಟ್ರಾಲ್​ಅನ್ನು ಹೆಚ್ಚಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಹೃದ್ರೋಗ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹುಣಸೆ ಹಣ್ಣಿನಲ್ಲಿದೆ.

ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್​ ಎಂಬ ಆ್ಯಂಟಿ ಆಕ್ಸಿಡೆಂಟ್​ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಆಹಾರವು ಸರಿಯಾಗಿ ಜೀರ್ಣವಾಗುವಂತೆ ನೋಡಿಕೊಳ್ಳುತ್ತದೆ.

ಯಾವುದೇ ಆಹಾರ ಪದಾರ್ಥವನ್ನು ಅತಿಯಾಗಿ ಬಳಸುವುದು ಅನಾರೋಗ್ಯವನ್ನು ಉಂಟು ಮಾಡುತ್ತದೆ. ಗರ್ಭಿಣಿಯರು ಅಥವಾ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರು ಹುಣಸೆ ಹಣ್ಣು ಸೇವನೆಯ ಬಗ್ಗೆ ಎಚ್ಚರಿಕೆಯಿಂದಿರಿ. ಪ್ರತಿಯೊಬ್ಬರೂ ಕೂಡಾ ಆರೋಗ್ಯದಲ್ಲಿ ಏನೇ ಏರು-ಪೇರು ಉಂಟಾದರೂ ಹತ್ತಿರದ ವೈದ್ಯರಲ್ಲಿ ಸಲಹೆ ಪಡೆಯಿರಿ. ನಿಮ್ಮ ಆರೋಗ್ಯದ ಕುರಿತಾಗಿ ಕಾಳಜಿ ಇರಲಿ.

ಇದನ್ನೂ ಓದಿ:

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ