ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?

Tamarind Seeds: ಇದರಲ್ಲಿರುವ ಔಷಧೀಯ ಗುಣಗಳು ಮೂಳೆಗಳನ್ನು ಬಲಪಡಿಸುತ್ತದೆ. ಜತೆಗೆ ಅತಿಸಾರ, ಚರ್ಮ ರೋಗ, ಹಲ್ಲಿನ ತೊಂದರೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಗುಣಪಡಿಸುವ ಔಷಧೀಯ ಗುಣಗಳನ್ನು ಹೊಂದಿದೆ.

ಹುಣಸೆ ಬೀಜ: ನೀವು ಮೊಣಕಾಲು ನೋವು ಮತ್ತು ಕೀಲು ನೋವಿನಿಂದ ಬಳಲುತ್ತಿದ್ದೀರಾ?
ಹುಣಸೆ ಬೀಜಗಳು
Follow us
| Updated By: ಆಯೇಷಾ ಬಾನು

Updated on: Jun 23, 2021 | 9:58 AM

ಸಾಮಾನ್ಯವಾಗಿ ಹುಣಸೆ ಹಣ್ಣನ್ನು ಅಡುಗೆಯಲ್ಲಿ ಬಳಸುತ್ತೇವೆ. ಜತೆಗೆ ಮರದಲ್ಲಿ ಬಿಟ್ಟಿರುವ ಹುಣಸೆ ಕಾಯಿಯಿಂದ ಚಟ್ನಿ, ಉಪ್ಪಿನಕಾಯಿ ಹೀಗೆ ನಾನಾವಿಧದ ಅಡುಗೆ ಪದಾರ್ಥದಲ್ಲಿ ಬಳಸುತ್ತೇವೆ. ಹಾಗೆಯೇ ಹುಣಸೆ ಬೀಜವನ್ನು ಬಿಸಾಡುವುದು ಸಾಮಾನ್ಯ. ಹುಣಸೇ ಬೀಜದಲ್ಲಿರುವ ಪೌಷ್ಟಿಕಾಂಶ ನಿಮ್ಮ ದೇಹವನ್ನು ಸದೃಢವಾಗಿರಿಸಲು ಸಹಾಯ ಮಾಡುತ್ತದೆ. ಹಾಗೆಯೇ ಗಂಟು ನೋವು, ಕಾಲು ನೋವುಗಳನ್ನು ಪರಿಹರಿಸುವ ಶಕ್ತಿಯನ್ನು ಹೊಂದಿದೆ.

ಕೆಲವರ ಮನೆಯಲ್ಲಿ ಹುಣಸೆ ಬೀಜಗಳನ್ನು ಸಂಗ್ರಹಿಸಿ ಇಡುತ್ತಾರೆ. ಜತೆಗೆ ಅವುಗಳನ್ನು ಉತ್ತಮ ಬೆಲೆಗೆ ಮಾರುಕಟ್ಟೆಯಲ್ಲಿ ಮಾರುತ್ತಾರೆ. ಇನ್ನು ಕೆಲವರ ಮನೆಯಲ್ಲಿ ಬೀಜವನ್ನು ಬೆಂಕಿಯಲ್ಲಿ ಸುಟ್ಟು, ಹೊರಗಿನ ಕೆಂಪು ಬಣ್ಣದ ಸಿಪ್ಪೆ ಒಡೆದು ಒಳಗಿನ ಗಟ್ಟಿ ಬೀಜವನ್ನು ತಿನ್ನುತ್ತಾರೆ. ಇನ್ನು ಕೆಲವರು ಹಣ್ಣಿನ ಸ್ವಾದ ಪಡೆದು ಬೀಜವನ್ನು ಬಿಸಾಡುತ್ತಾರೆ. ಹಾಗಿದ್ದರೆ ಹುಣಸೆ ಹಣ್ಣಿನ ಬೀಜದ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಕೀಲು ನೋವುಗಳಿಂದ ಬಳಲುತ್ತಿರುವವರು ಹುಣಸೆ ಹಣ್ಣಿನ ಬೀಜ ಉತ್ತಮ ಔಷಧವಾಗಿದೆ. ಹುಣಸೆ ಬೀಜಗಳನ್ನು ಚೆನ್ನಾಗಿ ತೊಳೆದು 2-3 ದಿನಗಳ ಕಾಲ ನೀರಿನಲ್ಲಿ ನೆನೆಸಿಡಿ. ಪ್ರತಿನಿತ್ಯವೂ ಸಹ ನೀರು ಬದಲಾಯಿಸುತ್ತಿರಿ. ನಂತರ ಮೇಲಿನ ಕೆಂಪು ಬಣ್ಣದ ಸಿಪ್ಪೆಯನ್ನು ಬಿಡಿಸಿ, ಒಳಗಿರುವ ಮತ್ತೊಂದು ಬೀಜವನ್ನು ಸಣ್ಣ ತುಂಡುಗಳನ್ನಾಗಿ ಮಾಡಿ ನೆರಳಿನಲ್ಲಿ ಒಣ ಹಾಕಿ. ನಂತರ ಒಣಗಿದ ಬೀಜಗಳನ್ನು ಮಿಕ್ಸಿಯಲ್ಲಿ ನುಣ್ಣಗೆ ಪುಡಿ ಮಾಡಿ ಗಾಜಿನ ಪಾತ್ರೆಯಲ್ಲಿ ಶೇಖರಿಸಿಟ್ಟುಕೊಳ್ಳಿ. ನೀರಿನೊಂದಿಗೆ ಅಥವಾ ಹಾಲಿನೊಂದಿಗೆ ಅರ್ಧ ಚಮಚ ಪುಡಿಯನ್ನು ಸೇವಿಸುವುದರಿಂದ ಕೀಲು ನೋವು ಅಥವಾ ಮೊಣಕಾಲು ನೋವು ಬಹು ಬೇಗ ಗುಣವಾಗುತ್ತದೆ.

3-4 ವಾರಗಳವರೆಗೆ ನಿಮಗೆ ಚೇತರಿಕೆಯ ಗುಣಲಕ್ಷಣಗಳು ಕಂಡು ಬರುತ್ತವೆ. ಇದರಲ್ಲಿರುವ ಔಷಧೀಯ ಗುಣಗಳು ಮೂಳೆಗಳನ್ನು ಬಲಪಡಿಸುತ್ತದೆ. ಜತೆಗೆ ಅತಿಸಾರ, ಚರ್ಮ ರೋಗ, ಹಲ್ಲಿನ ತೊಂದರೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಗುಣಪಡಿಸುವ ಔಷಧೀಯ ಗುಣಗಳನ್ನು ಹೊಂದಿದೆ. ಕೆಮ್ಮು, ಗಂಟಲು ನೋವು, ಮಧುಮೇಹ, ಹೃದ್ರೋಗಗಳಿಗೂ ಇದು ಉತ್ತಮ ಔಷಧಿಯಾಗಿದೆ. ಹುಣಸೆ ಹಣ್ಣನ್ನು ಸಾಮಾನ್ಯವಾಗಿ ಚಾಕಲೇಟ್​-ಬಿಸ್ಕೇಟ್​ ತಯಾರಿಸಲು ಬಳಸುತ್ತಾರೆ. ಅಂಟು ತಯಾರಿಕೆಯಲ್ಲಿಯೂ ಹುಣಸೆ ಹಣ್ಣನ್ನು ಬಳಸುತ್ತಾರೆ.

ಇದನ್ನೂ ಓದಿ:

ಹುಣಸೆ ಹಣ್ಣಿಗೆ ಬಂಪರ್ ಬೆಲೆ; ಕೊರೊನಾದಿಂದ ಕಂಗೆಟ್ಟ ರೈತರ ಮೊಗದಲ್ಲಿ ಮಂದಹಾಸ

ಆಯಾಸವಿಲ್ಲದೆ ಆದಾಯ ತರುವ ಹುಣಸೆ ಬೆಳೆಗೆ ರಾಜ್ಯದಾದ್ಯಂತ ಉತ್ತಮ ಬೇಡಿಕೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ