AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಚಹಾ ಸೇವನೆಯ ಆರೋಗ್ಯ ಪ್ರಯೋಜಗಳನ್ನು ತಿಳಿಯಿರಿ

ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಚಹಾ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Health Tips: ಚಹಾ ಸೇವನೆಯ ಆರೋಗ್ಯ ಪ್ರಯೋಜಗಳನ್ನು ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 06, 2021 | 8:39 AM

Share

ಸಾಮಾನ್ಯವಾಗಿ ಹೆಚ್ಚಿನವರಿಗೆ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಚಹಬೇಕು. ಚಹಾ ಸೇವನೆಯಿಂದ ಆರೋಗ್ಯ ಪ್ರಯೋಜನಗಳೂ ಸಹ ಇವೆ. ಚಹಾ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. ಬಿಸಿ ಬಿಸಿ ಚಹಾ ಸೇವಿಸುತ್ತಿದ್ದರೆ ಶೀತ, ಜ್ವರದಂತಹ ಸಣ್ಣ ಪುಟ್ಟ ಸಮಸ್ಯೆಗಳು ಬಹುಬೇಗ ಕಡಿಮೆಯಾಗುತ್ತದೆ. ಆದರೆ ದಿನಕ್ಕೆ ಎಷ್ಟು ಚಹ ಸೇವಿಸಬೇಕು? ಎಂಬುದು ಮುಖ್ಯ. ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ನಿಯಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಹೆಚ್ಚಿನವರು ಆಹಾರದ ಮುಂಚೆಯೇ ಚಹ ಸೇವಿಸುತ್ತಾರೆ. ಆದರೆ ಆಹಾರದ ನಂತರ ಚಹ ಸೇವಿಸುವುದು ಒಳ್ಳೆಯದು ಎನ್ನುತ್ತಾರೆ ತಜ್ಞರು. ಉಪಹಾರದ 20 ನಿಮಿಷಗಳ ಬಳಿಕ ಚಹಾ ಸೇವನೆಯ ಅಭ್ಯಾಸವನ್ನು ಮಾಡಿಕೊಳ್ಳಬಹುದು. ಇದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ.

ಚಹಾದ ಇನ್ನೊಂದು ಕುತೂಹಲಕಾರಿ ವಿಷಯವೇನೆಂದರೆ ಹೆಚ್ಚು ನೀರಿನಿಂದ ಕೂಡಿರುವುದರಿಂದ ಹೈಡ್ರೇಟ್ ಮಾಡುತ್ತದೆ. ನೀರಿನ ಅಂಶ ದೇಹಕ್ಕೆ ಹೋಗುವುದರಿಂದ ಆರೊಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇದು ಹೃದಯನಾಳದ ಖಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜತೆಗೆ ಟೈಪ್ 2 ಮಧುಮೇಹ, ಕ್ಯಾನ್ಸರ್ ಅಪಾಯವನ್ನು ತಡೆಗಟ್ಟಲು ಇದು ಸಹಾಯಕವಾಗಿದೆ.

ದಿನದಲ್ಲಿ ಹೆಚ್ಚು ಅಂದರೆ 2 ರಿಂದ 3 ಕಪ್ ಟೀ ಕುಡಿಯುವ ಅಭ್ಯಾಸ ಒಳ್ಳೆಯದು. ಅದಕ್ಕೂ ಹೆಚ್ಚಿನ ಕೆಫೀನ್ ಅಂಶ ದೇಹಕ್ಕೆ ಹೋಗುವುದು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಹುದು ಎಂದು ತಜ್ಞರು ಹೇಳುತ್ತಾರೆ. ನೈಸರ್ಗಿಕ ಸಸ್ಯ ಸಂಯುಕ್ತಗಳಿಂದ ತಯಾರಾಗಿರುವುದರಿಂದ ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಚಹಾ ಸೇವಿಸುವ ಜನರು ಹೃದಯ ಸಂಬಂಧಿ ಖಾಯಿಲೆಗಳಿಗೆ ತುತ್ತಾಗುವುದು ಕಡಿಮೆ.

ಇದನ್ನೂ ಓದಿ:

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

(Know About tea health tips check in kannada)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?