AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಸಿಒಡಿ ಎಂದರೇನು? ಲಕ್ಷಣಗಳು, ಕಾರಣಗಳು ಮತ್ತು ಚಿಕಿತ್ಸೆಯ ಬಗ್ಗೆ ಯುವತಿಯರು ತಿಳಿಯಲೇಬೇಕು

ಪಿಸಿಒಡಿಯ ಲಕ್ಷಣಗಳೆಂದರೆ ಮೊಡವೆಗಳು, ತಲೆಯ ನೆತ್ತಿಯ ಭಾಗದಲ್ಲಿ ಕೂದಲು ಉದುರುವುದು, ಮುಖ್ಯವಾಗಿ ಹೆಣ್ಣಿಗೆ ಗರ್ಭಾವಸ್ಥೆಗೆ ತೊಂದರೆಯಾಗುತ್ತದೆ. ಇದರಿಂದ ಹೆಣ್ಣು ಗರ್ಭಧರಿಸಲು ಕಷ್ಟವಾಗುತ್ತದೆ.

ಪಿಸಿಒಡಿ ಎಂದರೇನು? ಲಕ್ಷಣಗಳು, ಕಾರಣಗಳು ಮತ್ತು ಚಿಕಿತ್ಸೆಯ ಬಗ್ಗೆ ಯುವತಿಯರು ತಿಳಿಯಲೇಬೇಕು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 09, 2021 | 9:58 AM

Share

ಪಿಸಿಒಡಿ ಅಂದರೆ ಪಾಲಿಸಿಸ್ಟಿಕ್​ ಓವರಿ ಡಿಸಾರ್ಡರ್​ ಎಂದರ್ಥ. ಸಾಮಾನ್ಯವಾಗಿ 12-45 ವರ್ಷದೊಳಿಗಿನ ಮಹಿಳೆಯರಲ್ಲಿ ಕಂಡು ಬರುವ ಒಂದು ಸ್ಥಿತಿ. ದೇಹದಲ್ಲಿ ಉತ್ಪತ್ತಿಯಾಗುವ ಹಾರ್ಮೋನುಗಳ ಅಸಮತೋಲನದಿಂದ ಉಂಟಾಗುವ ಒಂದು ಸಮಸ್ಯೆಯಾಗಿದೆ. ದೇಹದ ಅಸ್ವಸ್ಥತೆಯಿಂದ ಅಂಡಾಶಗಳು ಹಿಗ್ಗುತ್ತವೆ. ಜತೆಗೆ ಹೊರ ಪರದೆಯ ಅಂಚಿನಲ್ಲಿ ಸಣ್ಣ ಚೀಲಗಳು ಬೆಳೆಯುತ್ತವೆ. ಪಿಸಿಒಡಿಯ ಲಕ್ಷಣಗಳೆಂದರೆ ಮೊಡವೆಗಳು, ಅತಿಯಾಗಿ ದೇಹದಲ್ಲಿ ಕೂದಲು ಬೆಳೆಯುವುದು, ತಲೆಯ ನೆತ್ತಿಯ ಭಾಗದಲ್ಲಿ ಕೂದಲು ಉದುರುವುದು, ಮುಖ್ಯವಾಗಿ ಹೆಣ್ಣಿಗೆ ಗರ್ಭಾವಸ್ಥೆಗೆ ತೊಂದರೆಯಾಗುತ್ತದೆ. ಇದರಿಂದ ಹೆಣ್ಣು ಗರ್ಭಧರಿಸಲು ಕಷ್ಟವಾಗುತ್ತದೆ.

ಪಿಸಿಒಡಿಯ ಮೂಲ ಕಾರಣವೆಂದರೆ ಹಾರ್ಮೋನುಗಳ ಅಸಮತೋಲನ. ಸಾಮಾನ್ಯವಾಗಿ ಅಂಡಾಂಶಗಳು ಈಸ್ಟರೊಜೆನ್​, ಪ್ರೊಜೆಸ್ಟರಾನ್​ ಮತ್ತು ಟೆಸ್ಟೋಸ್ಟೆರಾನ್​ ಅನ್ನು ಉತ್ಪಾದಿಸುತ್ತವೆ. ಪಿಸಿಒಡಿಯಲ್ಲಿ ಆಂಡ್ರೊಜೆನ್​ ಅಂಡಾಂಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತದೆ. ಇದನ್ನು ಹೈಪರಾಂಡ್ರೊಜೆನಿಸಮ್​ ಎಂದು ಕರೆಯಲಾಗುತ್ತದೆ. ಇದು ಋತು ಚಕ್ರಕ್ಕೆ ತೊಂದರೆಯನ್ನು ಉಂಟು ಮಾಡುತ್ತದೆ. ಹಾಗಿರುವಾಗ ಹೆಣ್ಣು ಮಕ್ಕಳು ಅಥವಾ ಯುವತಿಯರು ಇದರ ಬಗ್ಗೆ ಹೆಚ್ಚು ಗಮನಹರಿಸಲೇ ಬೇಕು.

ಪಿಸಿಒಡಿ ಹೆಚ್ಚಿನ ಸಂದರ್ಭದಲ್ಲಿ ಆಯುರ್ವೇದದ ಮೂಲಕವಾಗಿ ಪರಿಹಾರ ಕಂಡುಕೊಳ್ಳಬಹುದು ಎಂದು ಅಧ್ಯಯನಗಳು ತಿಳಿಸಿವೆ. ಜತೆಗೆ ವೈದ್ಯರೂ ಸಹ ಸಲಹೆ ನೀಡುತ್ತಾರೆ. ಆಯುರ್ವೇದ ಔಷಧದಿಂದ ಸ್ತ್ರೀರೋಗ ಅಸ್ವಸ್ಥತೆಗಳನ್ನು ತಡೆಗಟ್ಟಲು ಜತೆಗೆ ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಮುನ್ನೆಚ್ಚರಿಕೆ ಕ್ರಮಗಳು *ದೇಹದ ತೂಕದ ಪರಿಶೀಲನೆ *ಪೌಷ್ಠಿಕ ಆಹಾರವನ್ನು ಸೇವಿಸಿ *ನಿಯಮಿತವಾಗಿ ಯೋಗಾಭ್ಯಾಸವನ್ನು ಮಾಡಿ *ಒತ್ತಡವನ್ನು ಉಂಟು ಮಾಡುವ ಕೆಲಸದಲ್ಲಿ ತೊಡಗದಿರಿ

ಇದನ್ನೂ ಓದಿ:

Menstrual Hygiene Day: ಮೌಢ್ಯ-ಮೈಲಿಗೆಗಳು ಮುಖ್ಯವಲ್ಲ, ಆರೋಗ್ಯ-ಸ್ವಚ್ಛತೆಯೇ ಮುಖ್ಯ; ಮುಟ್ಟಿನ ಗುಟ್ಟು ಹೇಳಿದ ಜ್ಯೋತಿ ಇ ಹಿಟ್ನಾಳ್

Pregnancy Care: ಕೊವಿಡ್​ ಸಮಯದಲ್ಲಿ ಗರ್ಭಿಣಿಯರಿಗಾಗಿ ಆರೋಗ್ಯ ಸಲಹೆಗಳು; ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಿ

Published On - 9:55 am, Fri, 9 July 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್