Beetroot Juice: ಬೆಳಿಗ್ಗೆ ಬೀಟ್ರೂಟ್ ಜ್ಯೂಸ್​​ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಬೀಟ್ರೂಟ್ ಜ್ಯೂಸ್​​​ ನಿಮ್ಮ ಆಹಾರದಲ್ಲಿ ಸೇರಿಸಬಹುದಾದ ಅತ್ಯುತ್ತಮ ಪಾನೀಯಗಳಲ್ಲಿ ಒಂದಾಗಿದೆ. ಇದರಲ್ಲಿ ಜೀವಸತ್ವಗಳು, ಖನಿಜಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಬೆಳಗ್ಗಿನ ಉಪಹಾರದ ಸಮಯದಲ್ಲಿ ಬೀಟ್ರೂಟ್ ಜ್ಯೂಸ್​​ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Beetroot Juice: ಬೆಳಿಗ್ಗೆ ಬೀಟ್ರೂಟ್ ಜ್ಯೂಸ್​​ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
Beetroot JuiceImage Credit source: Pinterest
Follow us
|

Updated on: Sep 26, 2023 | 11:50 AM

ಬೀಟ್ರೂಟ್(Beetroot) ಅದರ ಬಣ್ಣದ ಜೊತೆಗೆ ಅತ್ಯಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಲ್ಲಿ ಅಧಿಕವಾಗಿರುವ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಪೌಷ್ಟಿಕ ತರಕಾರಿಗಳಲ್ಲಿ ಒಂದಾಗಿದೆ. ಬೀಟ್‌ರೂಟ್‌ನಲ್ಲಿರುವ ಪ್ರಮುಖ ಪೋಷಕಾಂಶಗಳು ತಾಮ್ರ, ಫೋಲೇಟ್ ಮತ್ತು ಮ್ಯಾಂಗನೀಸ್ ಇರುವುದರಿಂದ ಬೆಳಗ್ಗಿನ ಉಪಹಾರದ ಸಮಯದಲ್ಲಿ ಬೀಟ್ರೂಟ್ ಜ್ಯೂಸ್ (Beetroot juice)​​ ಕುಡಿಯುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಮುಂಬೈನ ಮುಲುಂಡ್‌ನ ಫೋರ್ಟಿಸ್ ಆಸ್ಪತ್ರೆಯ ಹಿರಿಯ ಆಹಾರ ತಜ್ಞರಾದ ಮೈಟ್ರಿ ಗಾಲಾ ವಿವರಿಸುತ್ತಾರೆ.

ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು:

1. ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ:

ನೀವು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ನಿಮ್ಮ ಆಹಾರದಲ್ಲಿ ಬೀಟ್ರೂಟ್ ಜ್ಯೂಸ್​​ ಸೇರಿಸಿಕೊಳ್ಳಬಹುದು. ಬೀಟ್ರೂಟ್ ರಸವು ಹೆಚ್ಚಿನ ಪ್ರಮಾಣದ ನೈಟ್ರಿಕ್ ಆಕ್ಸೈಡ್ ಅನ್ನು ಹೊಂದಿರುತ್ತದೆ ಎಂದು ಗಾಲಾ ವಿವರಿಸುತ್ತಾರೆ, ಇದು ರಕ್ತನಾಳಗಳನ್ನು ಹಿಗ್ಗಿಸುವ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡಲು ಕಾರಣವಾಗುವ ಅಣುವಾಗಿದೆ. ಜರ್ನಲ್ ಆಫ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನವು ಬೀಟ್ರೂಟ್ ರಸವನ್ನು ನಿಯಮಿತವಾಗಿ ಕುಡಿಯುವುದರಿಂದ ನಿಮ್ಮ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಕಂಡುಹಿಡಿದಿದೆ .

2.ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಬೀಟ್ರೂಟ್ ಜ್ಯೂಸ್​​ನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಗಾಲಾ ಹೇಳುತ್ತಾರೆ.

3.ಚರ್ಮಕ್ಕೆ ಒಳ್ಳೆಯದು:

ಬೀಟ್ರೂಟ್ ಜ್ಯೂಸ್​​ನಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ನೀವು ಶುಷ್ಕ ಮತ್ತು ಒಣಗಿದ ಚರ್ಮವನ್ನು ಹೊಂದಿದ್ದರೆ, ನಿಮ್ಮ ಆಹಾರದಲ್ಲಿ ಬೀಟ್ರೂಟ್ ರಸವನ್ನು ಸೇರಿಸಿಕೊಳ್ಳಬಹುದು.

4. ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ:

ಬೀಟ್ರೂಟ್​​​​​​​​ನಲ್ಲಿ  ಉತ್ಕರ್ಷಣ ನಿರೋಧಕಗಳು ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ನೈಸರ್ಗಿಕ ಬಣ್ಣ ಹೊಂದಿರುತ್ತವೆ. ಇದು ಉರಿಯೂತಕ್ಕೆ ಕಾರಣವಾಗುವ ದೇಹದಲ್ಲಿನ ರೋಗಲಕ್ಷಣಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಮೇಲೆ ಬೀಟ್ರೂಟ್ ರಸವನ್ನು ಕುಡಿಯುವುದರಿಂದ ಧನಾತ್ಮಕ ಪರಿಣಾಮಗಳನ್ನು ಸಹ ಅಧ್ಯಯನಗಳು ತೋರಿಸಿವೆ.

ಇದನ್ನೂ ಓದಿ: ಹದಿಹರೆಯದವರಲ್ಲಿ ಪಿಸಿಓಎಸ್​​​​​ನ ಆರಂಭಿಕ ಚಿಹ್ನೆಗಳು ಹೀಗಿರುತ್ತದೆ

5. ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸುತ್ತದೆ:

ನೀವು ಅಜೀರ್ಣದಿಂದ ಬಳಲುತ್ತಿದ್ದೀರಾ? ಬೀಟ್ರೂಟ್ನಲ್ಲಿ ಫೈಬರ್ ಅಂಶ ಹೊಂದಿದ್ದು, ಇದು ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಇದಲ್ಲದೇ ಕರುಳಿನ ಕ್ಯಾನ್ಸರ್, ಹೃದ್ರೋಗ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ವೈದ್ಯರು ಹೇಳುತ್ತಾರೆ. ಆದ್ದರಿಂದ, ಜೀರ್ಣಕಾರಿ ಸಮಸ್ಯೆಗಳಿರುವ ಜನರು ತಮ್ಮ ಆಹಾರದಲ್ಲಿ ಬೀಟ್ರೂಟ್ ರಸವನ್ನು ಸೇರಿಸಿಕೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ