AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sapota Benefits: ಸಪೋಟ ಗಾತ್ರದಲ್ಲಿ ಚಿಕ್ಕದಾಗಿರಬಹುದು ಆದರೆ ಆರೋಗ್ಯಕ್ಕಿದೆ ದೊಡ್ಡ ಪ್ರಯೋಜನ

ಚಿಕ್ಕೂ ಹಣ್ಣು ನೋಡಲು ಚಿಕ್ಕದಾಗಿರಬಹುದು ಆದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಚಿಕ್ಕೂ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.

Sapota Benefits: ಸಪೋಟ ಗಾತ್ರದಲ್ಲಿ ಚಿಕ್ಕದಾಗಿರಬಹುದು ಆದರೆ ಆರೋಗ್ಯಕ್ಕಿದೆ ದೊಡ್ಡ ಪ್ರಯೋಜನ
Sapota
TV9 Web
| Edited By: |

Updated on:Aug 28, 2022 | 9:47 AM

Share

ಚಿಕ್ಕೂ ಹಣ್ಣು ನೋಡಲು ಚಿಕ್ಕದಾಗಿರಬಹುದು ಆದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಚಿಕ್ಕೂ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಸಪೋಟದಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಅನೇಕ ಪೋಷಕಾಂಶಗಳನ್ನು ಹೊಂದಿದೆ, ಇದು ಅನೇಕ ರೋಗಗಳಿಗೆ ಪ್ರಯೋಜನಕಾರಿಯಾಗಿದೆ. ಚಿಕ್ಕೂ ಬೀಜದಿಂದ ತೊಗಟೆಯವರೆಗಿನ ಎಲ್ಲಾ ಭಾಗಗಳು ಉಪಯುಕ್ತವಾಗಿವೆ.

ಜ್ವರ ಗುಣಪಡಿಸುತ್ತೆ ಚಿಕ್ಕು ತೊಗಟೆಯನ್ನು ಬೇಯಿಸಿ ಕಷಾಯ ಮಾಡಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ. ಚಿಕ್ಕೂ ಕಷಾಯವು ಅಧಿಕ ಜ್ವರವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಜ್ವರವನ್ನು ಕಡಿಮೆ ಮಾಡಲು, ನೀವು 5-10 ಮಿಲಿ ಕಷಾಯವನ್ನು ತಯಾರಿಸಿ ಕುಡಿಯಬಹುದು.

ನೋವು ಮತ್ತು ಊತವನ್ನು ನಿವಾರಿಸುತ್ತೆ ಚಿಕ್ಕೂ ನೋವು ಮತ್ತು ಊತದ ಸಮಸ್ಯೆಯನ್ನು ಸಹ ತೆಗೆದುಹಾಕುತ್ತದೆ. ಚಿಕ್ಕುವಿನ ತಿರುಳನ್ನು ನೋವಿರುವ ಜಾಗಕ್ಕೆ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಚಿಕ್ಕುವಿನ ತಿರುಳು ಊತವನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಚಿಕ್ಕೂ ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾದ ಫೈಬರ್ ಅನ್ನು ಹೊಂದಿರುತ್ತದೆ. ಚಿಕ್ಕೂ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಮಲಬದ್ಧತೆ ಮತ್ತು ಅಜೀರ್ಣದ ಸಮಸ್ಯೆಯನ್ನು ತೆಗೆದುಹಾಕುತ್ತದೆ.

ತೂಕ ಇಳಿಕೆಗೆ ಸಹಕಾರಿ ಚಿಕ್ಕೂ ಚಯಾಪಚಯವನ್ನು ನಿಧಾನಗೊಳಿಸುತ್ತದೆ, ಇದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಿಕ್ಕೂ ಶೇಕ್ ಅಥವಾ ಚಿಕ್ಕೂ ಹಣ್ಣನ್ನು ಪ್ರತಿದಿನ ತಿನ್ನುವುದು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದೃಷ್ಟಿ ಹೆಚ್ಚಿಸುತ್ತವೆ ಚಿಕ್ಕೂನಲ್ಲಿ ವಿಟಮಿನ್‌ಗಳು ಹೇರಳವಾಗಿ ಕಂಡುಬರುತ್ತವೆ. ವಿಟಮಿನ್ ಎ ಚಿಕ್ಕೂನಲ್ಲಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ಪ್ರಯೋಜನಕಾರಿಯಾಗಿದೆ. ವಯಸ್ಸಾದವರ ಕಣ್ಣುಗಳಿಗೆ ಚಿಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ದೇಹದಲ್ಲಿ ಚೈತನ್ಯ ಮೂಡಿಸುತ್ತದೆ ದೇಹದಲ್ಲಿರುವ ದೌರ್ಬಲ್ಯವನ್ನು ಹೋಗಲಾಡಿಸುವ ಅನೇಕ ಪೋಷಕಾಂಶಗಳು ಚಿಕ್ಕೂನಲ್ಲಿದೆ. ನೀವು ತೆಳ್ಳಗೆ ಮತ್ತು ದುರ್ಬಲರಾಗಿರುವಾಗ, ಚಿಕ್ಕುವನ್ನು ಪ್ರತಿದಿನ ಸೇವಿಸಬೇಕು. ದುರ್ಬಲರಿಗೆ ಚಿಕ್ಕೂ ತಿನ್ನಲು ವೈದ್ಯರು ಸಲಹೆ ನೀಡುತ್ತಾರೆ. ಚಿಕ್ಕೂವಿನಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶವಿದ್ದು ಮೂಳೆಗಳನ್ನು ಗಟ್ಟಿಗೊಳಿಸುತ್ತದೆ.

ಚಿಕ್ಕೂ ಬ್ಯಾಕ್ಟೀರಿಯಾದ ಸೋಂಕನ್ನು ತೆಗೆದುಹಾಕುತ್ತದೆ. ಪ್ರತಿದಿನ ಚಿಕ್ಕೂ ತಿನ್ನುವುದರಿಂದ ಯಕೃತ್ತಿನ ಸೋಂಕು ನಿವಾರಣೆಯಾಗುತ್ತದೆ ಮತ್ತು ಯಕೃತ್ತು ಬಲಗೊಳ್ಳುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:46 am, Sun, 28 August 22

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ