AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krishna Janmashtami 2024: ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ

ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಬೆಣ್ಣೆ ಸೇವನೆ ಎಂದರೆ ಬಲು ಪ್ರೀತಿ. ಕೃಷ್ಣನಿಗೆ ಇದು ಪ್ರೀಯವಾಗಿದ್ದು ಇದರಿಂದ ಮಾಡಿದ ಖಾದ್ಯಗಳು ಸಹ ಬೆಣ್ಣೆಯಂತೆ ರುಚಿಯಾಗಿರುತ್ತದೆ. ಇದು ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ನಿಯಮಿತವಾಗಿ ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024: ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 26, 2024 | 1:05 PM

Share

ಬೆಣ್ಣೆ ಎಂದರೆ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ದೊಡ್ಡವರ ವರೆಗೂ ಇದರ ಸೇವನೆ ಎಂದರೆ ಬಲು ಪ್ರೀತಿ. ಕೃಷ್ಣನಿಗೆ ಇದು ಪ್ರೀಯವಾಗಿದ್ದು ಇದರಿಂದ ಮಾಡಿದ ಖಾದ್ಯಗಳು ಸಹ ಬೆಣ್ಣೆಯಂತೆ ರುಚಿಯಾಗಿರುತ್ತದೆ. ಇದು ರುಚಿ ಹೆಚ್ಚಿಸುವುದು ಮಾತ್ರವಲ್ಲ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಹಾಗಾದರೆ ನಿಯಮಿತವಾಗಿ ಬೆಣ್ಣೆ ಸೇವನೆ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಬೆಣ್ಣೆಯನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಆದರೆ ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
  • ಮಕ್ಕಳಿಗೆ ವಾರದಲ್ಲಿ ಮೂರು ಬಾರಿಯಾದರೂ ಶುದ್ಧ ಬೆಣ್ಣೆಯನ್ನು ಸೇವನೆ ಮಾಡಲು ಕೊಡುವುದರಿಂದ ಅವರ ಮೂಳೆಗಳು ಗಟ್ಟಿಯಾಗುತ್ತದೆ ಜೊತೆಗೆ ಅವರ ಬೆಳವಣಿಗೆಯೂ ಚೆನ್ನಾಗಿ ಆಗುತ್ತದೆ.
  • ಬೆಣ್ಣೆಯಲ್ಲಿ ಖನಿಜಾಂಶ, ಆಂಟಿ ಆಕ್ಸಿಡೆಂಟ್, ವಿಟಮಿನ್ ಮತ್ತು ಉತ್ತಮ ಕೊಬ್ಬಿನಾಂಶವಿದ್ದು ಇದು ಹೃದಯ ಸಂಬಂಧಿ ಕಾಯಿಲೆಗಳನ್ನು, ಜೊತೆಗೆ ಕಣ್ಣಿನ ದೃಷ್ಟಿಯನ್ನು, ಹಾರ್ಮೋನ್‌ಗಳ ಸಮತೋಲನವನ್ನು ಗುಣಪಡಿಸುವ ಶಕಿಯನ್ನು ಹೊಂದಿದೆ.
  • ಶುದ್ಧ ಬೆಣ್ಣೆಯಲ್ಲಿ ಸೆಲೆನಿಯಂ ಅಂಶವಿದ್ದು, ಇದು ಪುರುಷರು ಹಾಗೂ ಮಹಿಳೆಯರ ಫಲವತ್ತತೆತನ್ನು ಹೆಚ್ಚಿಸುತ್ತದೆ. ಹಾಗಾಗಿ ಮಕ್ಕಳು ಬೇಕೆಂದು ಹಂಬಲಿಸುತ್ತಿರುವ ದಂಪತಿ ಹೆಚ್ಚು ಬೆಣ್ಣೆ ತಿನ್ನುವುದು ತುಂಬಾ ಒಳ್ಳೆಯದು.
  • ಬೆಣ್ಣೆಯಲ್ಲಿ ವಿಟಮಿನ್ ಕೆ ಅಂಶ ಹೆಚ್ಚಾಗಿದ್ದು, ಇದು ಹೃದಯಾಘಾತ, ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುತ್ತದೆ.
  • ಬೆಣ್ಣೆಯಲ್ಲಿ ಲೌರಿಕ್ ಆಸಿಡ್ ಉತ್ತಮವಾಗಿದ್ದು ಜೊತೆಗೆ ಆಂಟಿ ಫಂಗಲ್ ಬೆಣ್ಣೆಯಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ಫಂಗಲ್ ಇನ್ಫೆಕ್ಷನ್ ಆಗುವುದನ್ನು ತಡೆಯುತ್ತದಲ್ಲದೆ, ಕ್ಯಾಂಡಿಡಾ ಬೆಳವಣಿಗೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  • ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಕಳಪೆ ಗುಣಪಟ್ಟದ ಬೆಣ್ಣೆ ಸಿಗುತ್ತವೆ. ಅದರಲ್ಲಿ ಟ್ರಾನ್ಸ್ ಕೊಬ್ಬುಗಳು ಮತ್ತು ಬಣ್ಣಗಳಿರುತ್ತವೆ ಇವು ಯಾವುದೇ ರೀತಿಯ ಆರೋಗ್ಯಕ್ಕೆ ಪ್ರಯೋಜನಗಳನ್ನೂ ನೀಡುವುದಿಲ್ಲ.
  • ನಿಮ್ಮ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ನೈಸರ್ಗಿಕ ಬೆಣ್ಣೆಯನ್ನು ಸೇವನೆ ಮಾಡುವುದು ಒಳ್ಳೆಯದು. ಜೊತೆಗೆ ಮನೆಯಲ್ಲೇ ಹಾಲಿನ ಕೆನೆ ತೆಗೆದು ಅದರಿಂದ ಬೆಣ್ಣೆ ಮಾಡುವುದು ಉತ್ತಮ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!