AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 56 ಸಾವಿರಕ್ಕೂ ಹೆಚ್ಚು ಜನರಿಗೆ ತಮಗೇ ತಿಳಿಯದಂತೆ ಹರಡಿದೆ ಹೆಚ್‌ಐವಿ; ಪತ್ತೆಹಚ್ಚಲು ಅಭಿಯಾನ ಪ್ರಾರಂಭಿಸಿದ ಆರೋಗ್ಯ ಇಲಾಖೆ

ಕರ್ನಾಟಕದಲ್ಲಿ ಹೆಚ್‌ಐವಿ ಮುಕ್ತ ಸಮಾಜಕ್ಕಾಗಿ KSAPS 'ಮೊಬಿಲೈಸೇಶನ್ ಫಾರ್ ಏಡ್ಸ್ ಸುರಕ್ಷಾ' (MAS) ಅಭಿಯಾನಕ್ಕೆ ವೇಗ ನೀಡಿದೆ. 56,406 ಅಜ್ಞಾತ ಹೆಚ್‌ಐವಿ ಪೀಡಿತರನ್ನು ಪತ್ತೆಹಚ್ಚಿ ART ಚಿಕಿತ್ಸೆಗೆ ಒಳಪಡಿಸುವುದು ಗುರಿ. "ನಿಮ್ಮ ಸ್ಥಿತಿಯನ್ನು ತಿಳಿಯಿರಿ" ಹಾಗೂ 'ಪತ್ತೆಯಾಗದಿದ್ದರೆ + ಹರಡುವುದಿಲ್ಲ' (U=U) ಸಂದೇಶ ಸಾರುತ್ತಿದೆ. 'ಬ್ರೇಕ್‌ಫ್ರೀ ಕ್ಯೂಆರ್' ಮೂಲಕ ಮಾಹಿತಿ ಮತ್ತು ಗೌಪ್ಯ ತಪಾಸಣೆ ಲಭ್ಯ.

ಕರ್ನಾಟಕದಲ್ಲಿ 56 ಸಾವಿರಕ್ಕೂ ಹೆಚ್ಚು ಜನರಿಗೆ ತಮಗೇ ತಿಳಿಯದಂತೆ ಹರಡಿದೆ ಹೆಚ್‌ಐವಿ; ಪತ್ತೆಹಚ್ಚಲು ಅಭಿಯಾನ ಪ್ರಾರಂಭಿಸಿದ ಆರೋಗ್ಯ ಇಲಾಖೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2026 | 10:13 AM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಹೆಚ್‌ಐವಿ ಮುಕ್ತ ಸಮಾಜ ನಿರ್ಮಾಣ ಮಾಡುವ ಅಭಿಯಾನ
  • ‘ಮೊಬಿಲೈಸೇಶನ್ ಫಾರ್ ಏಡ್ಸ್ ಸುರಕ್ಷಾ’ ಅಭಿಯಾನಕ್ಕೆ ಮತ್ತಷ್ಟು ವೇಗ
  • ಸಮಾಜದಲ್ಲಿ ಹೆಚ್‌ಐವಿ ಕುರಿತಾದ ತಾರತಮ್ಯ ಹಾಗೂ ಕೀಳರಿಮೆಯನ್ನು ಹೋಗಲಾಡಿಸಲು ಈ ಅಭಿಯಾನ

ಬೆಂಗಳೂರು, ಜೂ.6: ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯು (KSAPS) ರಾಜ್ಯದಲ್ಲಿ ಹೆಚ್‌ಐವಿ (HIV) ಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ‘ಮೊಬಿಲೈಸೇಶನ್ ಫಾರ್ ಏಡ್ಸ್ ಸುರಕ್ಷಾ’ (MAS) ಅಭಿಯಾನಕ್ಕೆ ಮತ್ತಷ್ಟು ವೇಗವನ್ನು ನೀಡಿದೆ . ಜೂನ್ 28, 2026ರ ವರೆಗಿನ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ 2,05,350 ಹೆಚ್‌ಐವಿ ಪೀಡಿತರು ಆಂಟಿರೆಟ್ರೋವೈರಲ್ ಥೆರಪಿ (ART) ಚಿಕಿತ್ಸೆ ಪಡೆಯುತ್ತಾ ಆರೋಗ್ಯವಾಗಿದ್ದಾರೆ. ಆದರೆ, ಇನ್ನು ಸುಮಾರು 56,406 ಜನರು ತಮ್ಮ ಹೆಚ್‌ಐವಿ ಸ್ಥಿತಿಯ ಬಗ್ಗೆ ಅರಿವಿಲ್ಲದೆ ಇರುವ ಸಾಧ್ಯತೆಯಿದ್ದು, ಅವರನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಸಮಾಜದಲ್ಲಿ ಹೆಚ್‌ಐವಿ ಕುರಿತಾದ ತಾರತಮ್ಯ ಹಾಗೂ ಕೀಳರಿಮೆಯನ್ನು ಹೋಗಲಾಡಿಸಲು ಈ ಅಭಿಯಾನವು “ನಿಮ್ಮ ಸ್ಥಿತಿಯನ್ನು ತಿಳಿಯಿರಿ” (Know Your Status) ಎಂಬ ಸಂದೇಶವನ್ನು ಸಾರುತ್ತಿದೆ. ಸ್ವಯಂಪ್ರೇರಿತ ಮತ್ತು ಅತ್ಯಂತ ರಹಸ್ಯವಾದ ಹೆಚ್‌ಐವಿ ತಪಾಸಣೆಯನ್ನು ಇದು ಪ್ರೋತ್ಸಾಹಿಸುತ್ತದೆ. ಹೆಚ್‌ಐವಿಯನ್ನು ಈಗ ಆರಂಭದಲ್ಲೇ ಪತ್ತೆಹಚ್ಚಿ ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಮತ್ತು ಸೂಕ್ತ ಚಿಕಿತ್ಸೆ ನೀಡಬಹುದು ಎಂದು ಸಂಸ್ಥೆ ತಿಳಿಸಿದೆ.

ಅಭಿಯಾನದಲ್ಲಿ ಪತ್ತೆಯಾಗದಿದ್ದರೆ + ಹರಡುವುದಿಲ್ಲ ಎಂಬ ಮಹತ್ವದ ವೈಜ್ಞಾನಿಕ ಮಾದರಿಯ ಹಂಚಿಕೊಳ್ಳಲಾಗುತ್ತಿದೆ. ಇದರರ್ಥ, ಹೆಚ್‌ಐವಿ ಹೊಂದಿರುವ ವ್ಯಕ್ತಿಯು ನಿಯಮಿತವಾಗಿ ‘ಎಆರ್‌ಟಿ’ (ART) ಚಿಕಿತ್ಸೆ ಪಡೆದು ವೈರಸ್ ಅನ್ನು ನಿಯಂತ್ರಣದಲ್ಲಿಟ್ಟುಕೊಂಡರೆ, ಆತನಿಂದ ಲೈಂಗಿಕ ಸಂಗಾತಿಗೆ ವೈರಸ್ ಹರಡುವುದಿಲ್ಲ. ಇದರಿಂದ ಸೋಂಕಿತರು ದೀರ್ಘಕಾಲದವರೆಗೆ ಉತ್ಪಾದಕ ಮತ್ತು ಆರೋಗ್ಯಕರ ಜೀವನ ನಡೆಸಬಹುದು.

ಇದನ್ನೂ ಓದಿ: 15 ವರ್ಷಗಳ ಕಾಲ ಕತ್ತಲೆ ಕೋಣೆಯಲ್ಲಿ ಕಳೆದ ಮಹಿಳೆ, ಜೇಡಿಮಣ್ಣಿನಲ್ಲೇ ಹೊಸ ಜಗತ್ತು ಸೃಷ್ಟಿಸಿ ಇತಿಹಾಸ ಬರೆದ ಸೋನಾಬಾಯಿ

ಡಿಜಿಟಲ್ ಜಾಗೃತಿಗೆ ‘BreakFree QR ಕೋಡ್’:

ಈ ಅಭಿಯಾನದ ಪ್ರಮುಖ ಆಕರ್ಷಣೆಯೆಂದರೆ ‘ಬ್ರೇಕ್‌ಫ್ರೀ ಕ್ಯೂಆರ್ ಕೋಡ್’. ಇದನ್ನು ಸ್ಕ್ಯಾನ್ ಮಾಡುವ ಮೂಲಕ ಸಾರ್ವಜನಿಕರು ಹೆಚ್‌ಐವಿ ಅಪಾಯದ ಮಾಹಿತಿಗಳನ್ನು ಪಡೆಯಬಹುದು ಹಾಗೂ ಗೌಪ್ಯ ಆಪ್ತಸಮಾಲೋಚನೆ ಮತ್ತು ತಪಾಸಣಾ ಕೇಂದ್ರಗಳ ಸಂಪರ್ಕವನ್ನು ಸುಲಭವಾಗಿ ಸಾಧಿಸಬಹುದು. ಪ್ರತಿ ವಯಸ್ಕರು ತಮ್ಮ ಹೆಚ್‌ಐವಿ ಸ್ಥಿತಿಯನ್ನು ತಿಳಿದುಕೊಳ್ಳಬೇಕು, ಗರ್ಭಿಣಿಯರು ಕಡ್ಡಾಯವಾಗಿ ಹೆಚ್‌ಐವಿ ಮತ್ತು ಸಿಫಿಲಿಸ್ ತಪಾಸಣೆಗೆ ಒಳಗಾಗಬೇಕು ಹಾಗೂ ಲೈಂಗಿಕ ಸೋಂಕಿನ (STI) ಲಕ್ಷಣಗಳಿದ್ದರೆ ತಕ್ಷಣವೇ ಆರಂಭಿಕ ಚಿಕಿತ್ಸೆ ಪಡೆಯಬೇಕು ಎಂದು KSAPS ಮನವಿ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ಸಿಪಿ ಯೋಗೇಶ್ವರ್ ಪುತ್ರನಿಗೆ ಶುಭ ಹಾರೈಸಿದ ಸಿಎಂ ಹೇಳಿದ್ದೇನು? ವಿಡಿಯೋ ನೋಡಿ
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ರಾಮ ಮಂದಿರದ ದೇಣಿಗೆ ಲೂಟಿ: ಕದ್ದ ಹಣದಲ್ಲಿ ಪ್ರೇಮ ಪುರಾಣ, ಲವರ್​ಗೆ ಗಿಫ್ಟ್!
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ಕೆ ಸುಧಾಕರ್‌ ಜೊತೆಗಿನ ವೈಮನಸಿನ ಬಗ್ಗೆ ಬಿಜೆಪಿ ಸಭೆಯಲ್ಲಿ ಚರ್ಚೆ ಆಯ್ತಾ?
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!