AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿದ್ರಾಹೀನತೆ ಹೃದಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ? ನಿದ್ರಾಹೀನತೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

ದೀರ್ಘಕಾಲದ ನಿದ್ರಾಹೀನತೆಯು ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್, ಹೃದಯಾಘಾತ, ಬೊಜ್ಜು, ಮಧುಮೇಹ ಮತ್ತು ಪಾರ್ಶ್ವವಾಯು ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಕಾಣವಾಗಬಹುದು. ನಿದ್ರಾಹೀನತೆ ತಪ್ಪಿಸಲು ಇಲ್ಲಿವೆ ಕೆಲವು ಸಲಹೆಗಳು.

Health Tips: ನಿದ್ರಾಹೀನತೆ ಹೃದಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ? ನಿದ್ರಾಹೀನತೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Jul 08, 2022 | 6:59 AM

ಒಂದು ಮುಷ್ಟಿ ಗಾತ್ರದಷ್ಟು ಇರುವ ಹೃದಯದ ಆರೋಗ್ಯವು ದೇಹದಾದ್ಯಂತ ರಕ್ತವನ್ನು ಪಂಪ್ ಮಾಡಲು ಅವಶ್ಯಕವಾಗಿದೆ. ಕಳಪೆ ಆಹಾರ, ಸೀಮಿತ ವ್ಯಾಯಾಮ ಮತ್ತು ಧೂಮಪಾನವು ಹೃದಯಕ್ಕೆ ಅತ್ಯಂತ ಹಾನಿಕಾರಕವಾಗಿದೆ ಎಂಬುದು ನೆನಪಿನಲ್ಲಿ ಇಡಬೇಕಾದ ಅಂಶ. ಅದಾಗ್ಯೂ ಅನೇಕರಿಗೆ ತಿಳಿಯದ ಸಂಗತಿಯೆಂದರೆ, ನಿದ್ರೆಯನ್ನು ಕಳೆದುಕೊಳ್ಳುವುದು ಹೃದಯದ ಸಮಸ್ಯೆಗೆ ಕಾರಣವಾಗಬಹುದು. ಮಾತ್ರವಲ್ಲದೆ ಅಧಿಕ ರಕ್ತದೊತ್ತಡ, ಹೆಚ್ಚಿನ ಒತ್ತಡದ ಮಟ್ಟಗಳು ಮತ್ತು ಹೃದಯದ ಇತರೆ ಕಾಯಿಲೆಗಳಿಗೆ ಗುರಿಮಾಡುತ್ತದೆ. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಾರ, ದೀರ್ಘಕಾಲದ ನಿದ್ರಾಹೀನತೆ (insomnia)ಯು ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ (Cholesterol), ಹೃದಯಾಘಾತ(Heart Attack), ಬೊಜ್ಜು(Obesity), ಮಧುಮೇಹ (Diabetes) ಮತ್ತು ಪಾರ್ಶ್ವವಾಯು(stroke) ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆ (Health problem)ಗಳಿಗೆ ಕಾಣವಾಗಬಹುದು.

ಇದನ್ನೂ ಓದಿ: ಕಳೆದೊಂದು ದಶಕದಲ್ಲಿ ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಕರ ಸಂಖ್ಯೆ ದ್ವಿಗುಣಗೊಂಡಿದೆ!

ಇತ್ತೀಚೆಗೆ, ಬಿಎಲ್​ಕೆ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷ ಮತ್ತು ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ಸುಭಾಷ್ ಚಂದ್ರ ಅವರು ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಮಾಹಿತಿ ಪ್ರಕಾರ, “ಬೆಳಿಗ್ಗೆ ಅತಿಯಾದ ಕ್ಯಾಟೆಕೊಲಮೈನ್‌ಗಳನ್ನು ಸ್ರವಿಸುವ ಜನರು 4-8 ಗಂಟೆಯ ನಡುವೆ ಪಾರ್ಶ್ವವಾಯು ಅಥವಾ ಹೃದಯಾಘಾತದಿಂದ ಬಳಲುತ್ತಾರೆ. ವ್ಯಕ್ತಿಯೊಬ್ಬರು ದಿನನಿತ್ಯ ಕನಿಷ್ಟ ಮಾಡಬೇಕಾದ ನಿದ್ರೆಯನ್ನು ಕಳೆದುಕೊಂಡರೆ ದೀರ್ಘಾವಧಿಯಲ್ಲಿ ಇದು ಹೃದಯ ರಕ್ತನಾಳದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಬಗ್ಗೆ ಹೆಚ್ಚಿನ ಎಚ್ಚರಿಕೆವಹಿಸಬೇಕಿದೆ.

ಹದಿಹರೆಯದಿಂದ ಪ್ರೌಢಾವಸ್ಥೆಯವರೆಗೆ ನಿದ್ರೆಯ ಅವಧಿಯು ಸಮಯದೊಂದಿಗೆ ಕಡಿಮೆಯಾಗುತ್ತದೆ ಎಂದು ಡಾ.ಸುಭಾಷ್ ಚಂದ್ರ ಅವರು ಹೇಳಿದರು. ವಯಸ್ಕರು 7-9 ಗಂಟೆಗಳ ಕಾಲ ನಿದ್ರಿಸುವುದು ಅತ್ಯಗತ್ಯ, ಆದರೆ 5-6 ವರ್ಷ ವಯಸ್ಸಿನ ಮಗುವಿಗೆ 12-14 ಗಂಟೆಗಳ ನಿದ್ರೆ ಬೇಕಾಗುತ್ತದೆ.

ಇದನ್ನೂ ಓದಿ: Mood Swings: ಭಾವನೆಗಳ ಸುನಾಮಿ ಮೂಡ್​ಸ್ವಿಂಗ್ ಬಗ್ಗೆ ನಿಮಗೆಷ್ಟು ಗೊತ್ತು?

ಹಾಗಾದರೆ ನಿದ್ರಾಹೀನತೆ ತಪ್ಪಿಸಲು ಮಾಡಬೇಕಾದ ಉಪಾಯಗಳೇನು? ಇಲ್ಲಿವೆ ನೋಡಿ:

  • ದಿನವಿಡೀ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ದೇಹವು ಹೆಚ್ಚು ದಣಿದಂತೆ ರಾತ್ರಿ ವೇಳೆ ಬೇಗನೇ ನಿದ್ರೆಗೆ ಜಾರಬಹುದು. ಆದರೆ ಮಲಗುವ ಮುನ್ನ ಅಂದರೆ ಮೂರ್ನಾಲ್ಕು ಗಂಟೆಗಳ ಕಾಲ ಕೆಲಸ ಮಾಡುವುದನ್ನು ತಪ್ಪಿಸಬೇಕು.
  • ವಾರಾಂತ್ಯಗಳು ಸೇರಿದಂತೆ ಸ್ಥಿರವಾದ ಮಲಗುವ ದಿನಚರಿಯನ್ನು ಬೆಳೆಸಿಕೊಳ್ಳಿ. ಪ್ರತಿ ರಾತ್ರಿ ಒಂದೇ ಸಮಯದಲ್ಲಿ ಮಲಗುವ ಮತ್ತು ಅದೇ ಸಮಯದಲ್ಲಿ ಏಳುವ ಪರಿಪಾಠವನ್ನು ಬೆಳೆಸಿಕೊಳ್ಳಿ.
  • ಸಾಕಷ್ಟು ನೈಸರ್ಗಿಕ ಬೆಳಕನ್ನು ಪಡೆಯಲು ಬೆಳಗ್ಗೆ ವಾಕಿಂಗ್ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ.
  • ಮಲಗುವ ಸಮಯದ ಕೆಲವು ಗಂಟೆಗಳ ಒಳಗೆ ಮದ್ಯಪಾನ ಸೇವಿಸುವುದನ್ನು ತಪ್ಪಿಸಿ.

ಇದನ್ನೂ ಓದಿ: Trip:ಪ್ರವಾಸದಲ್ಲಿರುವಾಗಲೂ ಫಿಟ್ ಆಗಿರಲು ಮಾರ್ಗಗಳು ಇಲ್ಲಿವೆ

ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ಆಂಧ್ರಪ್ರದೇಶ ಮೂಲದ ಕಳ್ಳನಿಂದ ₹ 11 ಲಕ್ಷದ ವಾಹನಗಳು ವಶಕ್ಕೆ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ರಾಕೇಶ್ ಪೂಜಾರಿ ನೋಡಲು ರಿಷಬ್ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
ನಾಗರಹೊಳೆಯಲ್ಲಿ ಕುಟುಂಬಸ್ಥರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಫಾರಿ
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ