AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insomnia: ರಾತ್ರಿ 2 ಗಂಟೆಯಾದರೂ ನಿದ್ರೆ ಬರುತ್ತಿಲ್ಲವೇ? ಪರಿಹಾರ ಇಲ್ಲಿದೆ

ಒಟ್ಟಾರೆ ನಿದ್ರಾಹೀನತೆಯ ಸಮಸ್ಯೆಗೆ ಸಹಜವಾಗಿಯೇ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಣ್ಣ ಜೀವನಶೈಲಿಯನ್ನು ಬದಲಾಯಿಸುವ ಮೂಲಕ ನೀವು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

Insomnia: ರಾತ್ರಿ 2 ಗಂಟೆಯಾದರೂ ನಿದ್ರೆ ಬರುತ್ತಿಲ್ಲವೇ? ಪರಿಹಾರ ಇಲ್ಲಿದೆ
InsomniaImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Jan 30, 2024 | 8:11 PM

ನಿದ್ರೆಯ ಕೊರತೆ– ಭವಿಷ್ಯದಲ್ಲಿ ಮಧುಮೇಹ, ಬೊಜ್ಜು, ಗ್ಯಾಸ್ಟ್ರಿಕ್, ಸಂಧಿವಾತದಂತಹ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗಬಹುದು. ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಕಾಯಿಲೆಗಳೂ ಹೆಚ್ಚಾಗುತ್ತವೆ. ನಿದ್ರಾಹೀನತೆಗೆ ಸಮಸ್ಯೆಯನ್ನು ಹೋಗಲಾಡಿಸಲು ನಿದ್ದೆಯ ಮಾತ್ರೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ.ಅಗತ್ಯವಿದ್ದರೆ, ವೈದ್ಯರನ್ನು ಸಂಪರ್ಕಿಸುವ ಮೂಲಕ ನೀವು ನಿದ್ದೆಯ ಮಾತ್ರೆಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಆದರೆ ಒಟ್ಟಾರೆ ನಿದ್ರಾಹೀನತೆಯ ಸಮಸ್ಯೆಗೆ ಸಹಜವಾಗಿಯೇ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಣ್ಣ ಜೀವನಶೈಲಿಯನ್ನು ಬದಲಾಯಿಸುವ ಮೂಲಕ ನೀವು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

ಕೆಫೀನ್ ಸೇವನೆ ತಪ್ಪಿಸಿ:

ಸಂಜೆಯ ನಂತರ ಚಹಾ ಮತ್ತು ಕಾಫಿ ತೆಗೆದುಕೊಳ್ಳಬೇಡಿ. ಚಹಾ ಮತ್ತು ಕಾಫಿಯಂತಹ ಪಾನೀಯಗಳು ಕೆಫೀನ್ ಎಂಬ ಸಂಯುಕ್ತವನ್ನು ಹೊಂದಿರುತ್ತವೆ. ಇದು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಟೀ, ಕಾಫಿ ಕುಡಿದರೆ ಸುಲಭವಾಗಿ ನಿದ್ದೆ ಬರುವುದಿಲ್ಲ.

ಮಲಗುವ ಸಮಯ ನಿಗದಿಪಡಿಸಿ:

ಸರಿಯಾದ ಸಮಯಕ್ಕೆ ಮಲಗಿ ಏಳುವುದನ್ನು ರೂಢಿಸಿಕೊಳ್ಳಿ. ಮಲಗುವ ಮುನ್ನ ನಿಮ್ಮ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಬಳಸುವ ಅಭ್ಯಾಸವನ್ನು ಸಹ ತಪ್ಪಿಸಿ. ಮಲಗುವ ಒಂದು ಗಂಟೆ ಮೊದಲು ಲ್ಯಾಪ್‌ಟಾಪ್ ಮತ್ತು ಮೊಬೈಲ್ ಬಳಸುವುದನ್ನು ತಪ್ಪಿಸಿ. ಅಗತ್ಯವಿದ್ದರೆ, ನೀವು ಪುಸ್ತಕಗಳನ್ನು ಓದಬಹುದು, ಡೈರಿ ಬರೆಯಬಹುದು.

ಮಾನಸಿಕ ಆರೋಗ್ಯ ಕಾಪಾಡಿ:

ಮಾನಸಿಕ ಒತ್ತಡವು ನಿದ್ರಾಹೀನತೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ. ನಿದ್ರೆ ಮಾನಸಿಕ ಆರೋಗ್ಯಕ್ಕೆ ನಿಕಟ ಸಂಬಂಧ ಹೊಂದಿದೆ. ಒತ್ತಡ ಹೆಚ್ಚಾಗಿದ್ದರೆ, ಆತಂಕ-ಖಿನ್ನತೆಯಂತಹ ಸಮಸ್ಯೆಗಳಿದ್ದರೆ ಮನೋವೈದ್ಯರ ಸಹಾಯ ಪಡೆಯಿರಿ.

ಯೋಗ ವ್ಯಾಯಾಮಕ್ಕೆ ಸಮಯ ಮೀಸಲಿಡಿ:

ನೀವು ದಿನವಿಡೀ ದೈಹಿಕವಾಗಿ ಸಕ್ರಿಯವಾಗಿಲ್ಲದಿದ್ದರೆ ನೀವು ರಾತ್ರಿಯಲ್ಲಿ ಸುಲಭವಾಗಿ ನಿದ್ರಿಸುವುದಿಲ್ಲ. ವ್ಯಾಯಾಮ ಮುಖ್ಯ. ಯೋಗ ಮತ್ತು ಪ್ರಾಣಾಯಾಮ ಧ್ಯಾನವು ನಿದ್ರೆಯ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ಯೋಗ ಮಾಡಿ.

ಆರೋಗ್ಯಕರ ಆಹಾರ ಸೇವನೆ:

ಸರಿಯಾಗಿ ತಿನ್ನುವುದು ನಿದ್ರೆಗೆ ಮುಖ್ಯ. ಆರೋಗ್ಯಕರ ಆಹಾರವು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಹೆಚ್ಚು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬನ್ನು ಕಡಿಮೆ ಮಾಡಿ. ಪ್ರೋಬಯಾಟಿಕ್ ಆಹಾರಗಳು ನಿದ್ರಾಹೀನತೆಯನ್ನು ನಿವಾರಿಸುತ್ತದೆ. ಇದಕ್ಕಾಗಿ ನೀವು ಪ್ರತಿದಿನ ಹುಳಿ ಮೊಸರು ತಿನ್ನಬಹುದು.

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ