AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Insomnia: ರಾತ್ರಿ 2 ಗಂಟೆಯಾದರೂ ನಿದ್ರೆ ಬರುತ್ತಿಲ್ಲವೇ? ಪರಿಹಾರ ಇಲ್ಲಿದೆ

ಒಟ್ಟಾರೆ ನಿದ್ರಾಹೀನತೆಯ ಸಮಸ್ಯೆಗೆ ಸಹಜವಾಗಿಯೇ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಣ್ಣ ಜೀವನಶೈಲಿಯನ್ನು ಬದಲಾಯಿಸುವ ಮೂಲಕ ನೀವು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

Insomnia: ರಾತ್ರಿ 2 ಗಂಟೆಯಾದರೂ ನಿದ್ರೆ ಬರುತ್ತಿಲ್ಲವೇ? ಪರಿಹಾರ ಇಲ್ಲಿದೆ
InsomniaImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 30, 2024 | 8:11 PM

Share

ನಿದ್ರೆಯ ಕೊರತೆ– ಭವಿಷ್ಯದಲ್ಲಿ ಮಧುಮೇಹ, ಬೊಜ್ಜು, ಗ್ಯಾಸ್ಟ್ರಿಕ್, ಸಂಧಿವಾತದಂತಹ ದೀರ್ಘಕಾಲದ ಕಾಯಿಲೆಗಳಿಗೆ ಕಾರಣವಾಗಬಹುದು. ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಕಾಯಿಲೆಗಳೂ ಹೆಚ್ಚಾಗುತ್ತವೆ. ನಿದ್ರಾಹೀನತೆಗೆ ಸಮಸ್ಯೆಯನ್ನು ಹೋಗಲಾಡಿಸಲು ನಿದ್ದೆಯ ಮಾತ್ರೆಗಳನ್ನು ತೆಗೆದುಕೊಳ್ಳಬೇಕಾಗಿಲ್ಲ.ಅಗತ್ಯವಿದ್ದರೆ, ವೈದ್ಯರನ್ನು ಸಂಪರ್ಕಿಸುವ ಮೂಲಕ ನೀವು ನಿದ್ದೆಯ ಮಾತ್ರೆಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಆದರೆ ಒಟ್ಟಾರೆ ನಿದ್ರಾಹೀನತೆಯ ಸಮಸ್ಯೆಗೆ ಸಹಜವಾಗಿಯೇ ಪರಿಹಾರ ಕಂಡುಕೊಳ್ಳಬಹುದಾಗಿದೆ. ಸಣ್ಣ ಜೀವನಶೈಲಿಯನ್ನು ಬದಲಾಯಿಸುವ ಮೂಲಕ ನೀವು ನಿದ್ರೆಯ ಗುಣಮಟ್ಟವನ್ನು ಸುಧಾರಿಸಬಹುದು.

ಕೆಫೀನ್ ಸೇವನೆ ತಪ್ಪಿಸಿ:

ಸಂಜೆಯ ನಂತರ ಚಹಾ ಮತ್ತು ಕಾಫಿ ತೆಗೆದುಕೊಳ್ಳಬೇಡಿ. ಚಹಾ ಮತ್ತು ಕಾಫಿಯಂತಹ ಪಾನೀಯಗಳು ಕೆಫೀನ್ ಎಂಬ ಸಂಯುಕ್ತವನ್ನು ಹೊಂದಿರುತ್ತವೆ. ಇದು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಟೀ, ಕಾಫಿ ಕುಡಿದರೆ ಸುಲಭವಾಗಿ ನಿದ್ದೆ ಬರುವುದಿಲ್ಲ.

ಮಲಗುವ ಸಮಯ ನಿಗದಿಪಡಿಸಿ:

ಸರಿಯಾದ ಸಮಯಕ್ಕೆ ಮಲಗಿ ಏಳುವುದನ್ನು ರೂಢಿಸಿಕೊಳ್ಳಿ. ಮಲಗುವ ಮುನ್ನ ನಿಮ್ಮ ಮೊಬೈಲ್ ಅಥವಾ ಲ್ಯಾಪ್‌ಟಾಪ್ ಬಳಸುವ ಅಭ್ಯಾಸವನ್ನು ಸಹ ತಪ್ಪಿಸಿ. ಮಲಗುವ ಒಂದು ಗಂಟೆ ಮೊದಲು ಲ್ಯಾಪ್‌ಟಾಪ್ ಮತ್ತು ಮೊಬೈಲ್ ಬಳಸುವುದನ್ನು ತಪ್ಪಿಸಿ. ಅಗತ್ಯವಿದ್ದರೆ, ನೀವು ಪುಸ್ತಕಗಳನ್ನು ಓದಬಹುದು, ಡೈರಿ ಬರೆಯಬಹುದು.

ಮಾನಸಿಕ ಆರೋಗ್ಯ ಕಾಪಾಡಿ:

ಮಾನಸಿಕ ಒತ್ತಡವು ನಿದ್ರಾಹೀನತೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ. ನಿದ್ರೆ ಮಾನಸಿಕ ಆರೋಗ್ಯಕ್ಕೆ ನಿಕಟ ಸಂಬಂಧ ಹೊಂದಿದೆ. ಒತ್ತಡ ಹೆಚ್ಚಾಗಿದ್ದರೆ, ಆತಂಕ-ಖಿನ್ನತೆಯಂತಹ ಸಮಸ್ಯೆಗಳಿದ್ದರೆ ಮನೋವೈದ್ಯರ ಸಹಾಯ ಪಡೆಯಿರಿ.

ಯೋಗ ವ್ಯಾಯಾಮಕ್ಕೆ ಸಮಯ ಮೀಸಲಿಡಿ:

ನೀವು ದಿನವಿಡೀ ದೈಹಿಕವಾಗಿ ಸಕ್ರಿಯವಾಗಿಲ್ಲದಿದ್ದರೆ ನೀವು ರಾತ್ರಿಯಲ್ಲಿ ಸುಲಭವಾಗಿ ನಿದ್ರಿಸುವುದಿಲ್ಲ. ವ್ಯಾಯಾಮ ಮುಖ್ಯ. ಯೋಗ ಮತ್ತು ಪ್ರಾಣಾಯಾಮ ಧ್ಯಾನವು ನಿದ್ರೆಯ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ. ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ಯೋಗ ಮಾಡಿ.

ಆರೋಗ್ಯಕರ ಆಹಾರ ಸೇವನೆ:

ಸರಿಯಾಗಿ ತಿನ್ನುವುದು ನಿದ್ರೆಗೆ ಮುಖ್ಯ. ಆರೋಗ್ಯಕರ ಆಹಾರವು ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಹೆಚ್ಚು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಕಾರ್ಬೋಹೈಡ್ರೇಟ್‌ಗಳು ಮತ್ತು ಕೊಬ್ಬನ್ನು ಕಡಿಮೆ ಮಾಡಿ. ಪ್ರೋಬಯಾಟಿಕ್ ಆಹಾರಗಳು ನಿದ್ರಾಹೀನತೆಯನ್ನು ನಿವಾರಿಸುತ್ತದೆ. ಇದಕ್ಕಾಗಿ ನೀವು ಪ್ರತಿದಿನ ಹುಳಿ ಮೊಸರು ತಿನ್ನಬಹುದು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ