AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ಹೆಚ್ಚಾಗುತ್ತೆ ಎಂಬ ಆತಂಕದಲ್ಲಿದ್ದೀರಾ, ಈ ಸಿಂಪಲ್ ಟಿಪ್ಸ್ ಬಳಸಿ, ಮಧುಮೇಹ ನಿಯಂತ್ರಿಸಿ

ಬಹಳಷ್ಟು ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಈ ಕಾಯಿಲೆಗೆ ಕಾರಣವೆಂದು ಅನೇಕ ವೈದ್ಯಕೀಯ ತಜ್ಞರು ನಂಬುತ್ತಾರೆ.

ಮಧುಮೇಹ ಹೆಚ್ಚಾಗುತ್ತೆ ಎಂಬ ಆತಂಕದಲ್ಲಿದ್ದೀರಾ, ಈ ಸಿಂಪಲ್ ಟಿಪ್ಸ್ ಬಳಸಿ, ಮಧುಮೇಹ ನಿಯಂತ್ರಿಸಿ
Diabetes
TV9 Web
| Updated By: ನಯನಾ ರಾಜೀವ್|

Updated on: Oct 12, 2022 | 8:00 AM

Share

ಬಹಳಷ್ಟು ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಈ ಕಾಯಿಲೆಗೆ ಕಾರಣವೆಂದು ಅನೇಕ ವೈದ್ಯಕೀಯ ತಜ್ಞರು ನಂಬುತ್ತಾರೆ. ತಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸದಿರುವುದು ಮತ್ತು ತಿನ್ನುವ ಆಹಾರದಲ್ಲಿ ಸರಿಯಾದ ಕಾಳಜಿಯನ್ನು ತೆಗೆದುಕೊಳ್ಳದ ಕಾರಣ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿ ಮಧುಮೇಹದಿಂದ ಬಳಲುತ್ತಿದ್ದಾರೆ.

ಆದರೆ ಕೆಲವೊಂದು ಸಿಂಪಲ್ ಟಿಪ್ಸ್ ಪಾಲಿಸಿದರೆ ಮಧುಮೇಹವನ್ನು ತಪಾಸಣೆ ಮಾಡಬಹುದು ಎನ್ನುತ್ತಾರೆ ವೈದ್ಯಕೀಯ ತಜ್ಞರು. ವಾಕಿಂಗ್​ನಿಂದ ವ್ಯಕ್ತಿಯು ಆರೋಗ್ಯವಾಗಿರಲು ಸಹಾಯವಾಗುತ್ತದೆ. ಅಲ್ಲದೇ ವಾಕಿಂಗ್ ಮಾಡುವುದರಿಂದ ದೇಹದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.

ನಡಿಗೆಯಿಂದ ಮಧುಮೇಹ ಬರದಂತೆ ತಡೆಯಬಹುದು ಎನ್ನುತ್ತಾರೆ. ನಡಿಗೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು ಮಾತ್ರವಲ್ಲದೆ ಮಧುಮೇಹದ ಇತರ ತೊಡಕುಗಳನ್ನು ಕಡಿಮೆ ಮಾಡುತ್ತದೆ. ಮಧುಮೇಹವು ಹಠಾತ್ ರೋಗವಲ್ಲ. ಕ್ರಮೇಣ ಈ ರೋಗವು ದೇಹದಲ್ಲಿ ಹೆಚ್ಚಾಗುತ್ತದೆ. ಮಧುಮೇಹದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಎಚ್ಚರಿಕೆ ವಹಿಸಿದರೆ ಮಧುಮೇಹವನ್ನು ನಿಯಂತ್ರಿಸಬಹುದು.

ಇದಕ್ಕಾಗಿ ದುಬಾರಿ ಔಷಧಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ದಿನನಿತ್ಯದ ಜೀವನಶೈಲಿ ಮತ್ತು ಆಹಾರ ಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ನೀವು ತಿನ್ನುವ ಆಹಾರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ, ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.

ಬೆಳಿಗ್ಗೆ ಕೆಲವು ವ್ಯಾಯಾಮಗಳನ್ನು ಮಾಡುವುದರಿಂದ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ಏನು ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ತಿಳಿಯೋಣ.

ಬೆಳಗಿನ ನಡಿಗೆ ನಡಿಗೆಯೊಂದಿಗೆ ಅನೇಕ ಆರೋಗ್ಯ ಪ್ರಯೋಜನಗಳಿವೆ. ಮಧುಮೇಹಿಗಳು ಬೆಳಗ್ಗೆ ವಾಕಿಂಗ್ ಮಾಡುವುದರಿಂದ ದೇಹದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ. ನಡಿಗೆಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು ಮಾತ್ರವಲ್ಲದೆ ಮಧುಮೇಹದ ಇತರ ತೊಡಕುಗಳನ್ನು ತಡೆಯುತ್ತದೆ. ಈಗಾಗಲೇ ಮಧುಮೇಹ ಇರುವವರು ಬೆಳಗ್ಗೆ ವಾಕಿಂಗ್ ಮಾಡುವುದರಿಂದ ರೋಗ ಉಲ್ಬಣಗೊಳ್ಳುವುದನ್ನು ತಡೆಯಬಹುದು. ಬೆಳಿಗ್ಗೆ ಕನಿಷ್ಠ 20 ನಿಮಿಷಗಳ ಕಾಲ ನಡೆಯುವುದು ಖಂಡಿತವಾಗಿಯೂ ಪ್ರಯೋಜನಕಾರಿ ಎಂದು ತಜ್ಞರು ಸೂಚಿಸುತ್ತಾರೆ.

ಏರೋಬಿಕ್ಸ್ ಮುಂಜಾನೆಯ ಏರೋಬಿಕ್ಸ್ ಮಧುಮೇಹಿಗಳಿಗೆ ಒಳ್ಳೆಯದು. ಏರೋಬಿಕ್ ನೃತ್ಯವನ್ನು ಪ್ರತಿದಿನ ಬೆಳಿಗ್ಗೆ ಕನಿಷ್ಠ 30 ನಿಮಿಷಗಳ ಕಾಲ ಶಿಫಾರಸು ಮಾಡಲಾಗುತ್ತದೆ, ವಾರದಲ್ಲಿ ಕನಿಷ್ಠ ಐದು ದಿನಗಳು. ಇದನ್ನು ಮಾಡುವುದರಿಂದ ಮಧುಮೇಹ ಹೊಂದಿರುವ ವ್ಯಕ್ತಿಯಲ್ಲಿ ಧನಾತ್ಮಕ ಬದಲಾವಣೆಯನ್ನು ಮಾಡಬಹುದು.

ಸೈಕ್ಲಿಂಗ್ ಸೈಕ್ಲಿಂಗ್ ವ್ಯಾಯಾಮಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಬೆಳಿಗ್ಗೆ ಕನಿಷ್ಠ 20 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡುವುದು ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಅನೇಕ ಇತರ ಕಾಯಿಲೆಗಳನ್ನು ಸಹ ಗುಣಪಡಿಸುತ್ತದೆ.

ಪ್ರಾಣಾಯಾಮ ಪ್ರತಿದಿನ ಬೆಳಗ್ಗೆ 10 ರಿಂದ 15 ನಿಮಿಷಗಳ ಕಾಲ ಪ್ರಾಣಾಯಾಮ ಮತ್ತು ಉಸಿರಾಟದ ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ