Sign In

By signing in or creating an account, you agree with Associated Broadcasting Company's Terms & Conditions and Privacy Policy.

Constipation In Children : ಮಕ್ಕಳಲ್ಲಿ ಮಲಬದ್ಧತೆ: ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು? ಸರಳವಾದ ಗೃಹ ಸಲಹೆಗಳು ಇಲ್ಲಿವೆ

Constipation: ಹೆಚ್ಚಿನ ಮಕ್ಕಳು ದಿನವಿಡೀ ಕೆಲವೇ ಲೋಟ ನೀರು ಕುಡಿಯುತ್ತಾರೆ. ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯುವಂತೆ ಮಾಡಿ.

Constipation In Children : ಮಕ್ಕಳಲ್ಲಿ ಮಲಬದ್ಧತೆ: ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು? ಸರಳವಾದ ಗೃಹ ಸಲಹೆಗಳು ಇಲ್ಲಿವೆ
ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆ ಕಂಡುಬಂದರೆ ಏನು ಮಾಡಬೇಕು?
Follow us
ಸಾಧು ಶ್ರೀನಾಥ್​
|

Updated on: May 02, 2023 | 10:42 AM

ಮಲಬದ್ಧತೆ ದೊಡ್ಡವರಲ್ಲಷ್ಟೇ ಅಲ್ಲ; ಮಕ್ಕಳಿಗೂ (Children) ಕಾಡುವ ಸಮಸ್ಯೆ. ನಿಮ್ಮ ಮಗುವು ಶೌಚಾಲಯಕ್ಕೆ ಹೋಗಿ ದೀರ್ಘಕಾಲ ಕುಳಿತುಕೊಂಡರೆ, ಮಲವನ್ನು ಹೊರಹಾಕಲು ತೊಂದರೆ ಪಡುತ್ತಿದೆ ಎಂದು ಅರ್ಥ ಮಾಡಿಕೊಳ್ಳಿ. ನಂತರ ಮಗುವಿಗೆ ಹೊಟ್ಟೆ ನೋವು, ಹಸಿವಿನ ಕೊರತೆ, ಉಬ್ಬುವುದು ಭಾಸವಾಗುತ್ತದೆ. ಮಲಬದ್ಧತೆ ಒಂದು ಸಾಮಾನ್ಯ ಸಮಸ್ಯೆಯಾಗಿದ್ದರೂ, ಮಗುವಿಗೆ (Kids) ವಾರಕ್ಕೆ ಮೂರು ಅಥವಾ ಕಡಿಮೆ ಕರುಳಿನ ಚಲನೆ ಇದ್ದರೆ, ಅದನ್ನು ಮಲಬದ್ಧತೆ (Constipation) ಎಂದು ಪರಿಗಣಿಸಲಾಗುತ್ತದೆ. ಮಲಬದ್ಧತೆ ಉಂಟಾದಾಗ, ಮಲವು ಗಟ್ಟಿಯಾಗುತ್ತದೆ. ಇದರಿಂದಾಗಿ ಮಲ ಹೊರಹಾಕಲು ತುಂಬಾ ಕಷ್ಟವಾಗುತ್ತದೆ.

ಕೆಲವೊಮ್ಮೆ ಮಕ್ಕಳಲ್ಲಿ ಕಡಿಮೆ ನೀರು ಕುಡಿಯುವುದು, ಆಹಾರದಲ್ಲಿ ಹೆಚ್ಚಿನ ಕೊಬ್ಬು ಸೇರಿದಂತೆ ಫೈಬರ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸದಿರುವುದು, ವ್ಯಾಯಾಮವನ್ನು ಕಡಿಮೆ ಮಾಡುವುದು ಇತ್ಯಾದಿಗಳಿಂದ ಉಂಟಾಗುತ್ತದೆ. ಆದರೆ ಗಾಬರಿಯಾಗುವ ಅಗತ್ಯವಿಲ್ಲ. ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವುದರಿಂದ ಮಕ್ಕಳಲ್ಲಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು. ಒತ್ತಡದಿಂದಲೂ ಕೆಲವೊಮ್ಮೆ ಮಕ್ಕಳಲ್ಲಿ ಮಲಬದ್ಧತೆ ಉಂಟಾಗುತ್ತದೆ.

ಹೆಚ್ಚಿನ ಮಕ್ಕಳು ದಿನವಿಡೀ ಕೆಲವೇ ಲೋಟ ನೀರು ಕುಡಿಯುತ್ತಾರೆ. ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯುವಂತೆ ಮಾಡಿ. ದಿನಕ್ಕೆ 6 ರಿಂದ 7 ಗ್ಲಾಸ್ ನೀರು ಕುಡಿಯುವುದು ಅವಶ್ಯಕ. ಮಕ್ಳಳಿಗೆ ಮಲಬದ್ಧತೆ ಇದ್ದರೆ, ನೀವು ಕುಡಿಯುವ ನೀರಿನ ಪ್ರಮಾಣವನ್ನು ಹೆಚ್ಚಿಸಬಹುದು. ಈ ಕಾರಣದಿಂದಾಗಿ, ದೇಹದಿಂದ ವಿಷಯುಕ್ತಗಳನ್ನು ಸುಲಭವಾಗಿ ತೆಗೆದುಹಾಕಲಾಗುತ್ತದೆ.

ನಾರಿನಂಶವಿರುವ ಆಹಾರವನ್ನು ಸೇವಿಸುವುದರಿಂದ ಮಲಬದ್ಧತೆ ನಿವಾರಣೆ: ಸುಗಮ ಕರುಳಿನ ಚಲನೆಗೆ ಫೈಬರ್ ಭರಿತ ಆಹಾರವನ್ನು ಸೇವಿಸುವುದು ಸಹ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮ್ಯಾಗಿ, ಜಂಕ್ ಫುಡ್, ಚಿಪ್ಸ್ ಮತ್ತು ಬಿಸ್ಕತ್‌ಗಳನ್ನು ತಿನ್ನುತ್ತಾರೆ. ಇದು ಮಲಬದ್ಧತೆಗೆ ಕಾರಣವಾಗುತ್ತದೆ. ಫೈಬರ್ನಲ್ಲಿ ಸಮೃದ್ಧವಾಗಿರುವ ಆಹಾರಗಳು ದೇಹದಿಂದ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ. ಧಾನ್ಯಗಳು, ಹಸಿರು ತರಕಾರಿಗಳು, ನಾರಿನ ಹಣ್ಣುಗಳು, ಬೀನ್ಸ್ ಮತ್ತು ಬೇಳೆಕಾಳುಗಳನ್ನು ತಿನ್ನಬೇಕು.

ಅಗಸೆ ಬೀಜ ಮಲಬದ್ಧತೆಯನ್ನು ನಿವಾರಿಸುತ್ತದೆ: ಅಗಸೆ ಬೀಜಗಳು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಏಕೆಂದರೆ ಅವು ಬಹಳಷ್ಟು ಫೈಬರ್ ಅನ್ನು ಹೊಂದಿರುತ್ತವೆ. ಇದನ್ನು ಪುಡಿ ಮಾಡಿ ಜ್ಯೂಸ್ ಮಾಡಬಹುದು. ಸಲಾಡ್, ಮೊಸರು, ಸೂಪ್ ಇತ್ಯಾದಿಗಳಿಗೆ ಸೇರಿಸಬಹುದು.

ಬೆಚ್ಚಗಿನ ಹಾಲಿನೊಂದಿಗೆ ಬಾಳೆಹಣ್ಣು ತಿನ್ನಿಸಿ: ಮಕ್ಕಳು ಬಾಳೆಹಣ್ಣುಗಳನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಬೆಚ್ಚಗಿನ ಹಾಲಿನೊಂದಿಗೆ ತಿನ್ನಲು ಬಾಳೆಹಣ್ಣುಗಳನ್ನು ನೀಡಿ. ಮಗುವು ಅದನ್ನು ನಿಧಾನವಾಗಿ ಅಗಿಯುತ್ತಿದ್ದರೆ ಮತ್ತು ಬೆಚ್ಚಗಿನ ಹಾಲಿನೊಂದಿಗೆ ತಿಂದರೆ ಅದು ದೇಹದಿಂದ ಮಲವನ್ನು ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ.

ವೀಡಿಯೋ ಗೇಮ್‌ಗಳನ್ನು ಆಡುವುದಕ್ಕಿಂತ ಮತ್ತು ಟಿವಿ ನೋಡುವುದಕ್ಕಿಂತ ದೈಹಿಕ ಆಟಗಳನ್ನು ಆಡಲು ಮಕ್ಕಳನ್ನು ಪ್ರೋತ್ಸಾಹಿಸುವುದು ಆರೋಗ್ಯಕರ ಅಭ್ಯಾಸಗಳನ್ನು ಹೊಂದಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅಲ್ಲದೇ ಮಕ್ಕಳಿಗೆ ಆಗಾಗ್ಗೆ ಹೊಟ್ಟೆನೋವು ಎಂದರೆ ಅದು ಜಂತು ಹುಳುಗಳ ಸಮಸ್ಯೆ ಎಂದರ್ಥ. ಇಂತಹ ಸಂದರ್ಭದಲ್ಲಿ ವೈದ್ಯರ ಸಲಹೆಯಂತೆ ಚಿಕಿತ್ಸೆ ಆರಂಭಿಸುವುದು ಉತ್ತಮ.

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ