Liver Health: ರಾತ್ರಿಯಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್ ಅಪಾಯದಲ್ಲಿದೆ ಎಂದರ್ಥ

ಇತ್ತೀಚಿನ ದಿನಗಳಲ್ಲಿ ನಮ್ಮ ಒತ್ತಡ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಅನೇಕ ರೀತಿಯ ಯಕೃತ್ತಿನ ಕಾಯಿಲೆಗಳು ಉಂಟಾಗಬಹುದು. ಹಾಗಾಗಿ ಇದಕ್ಕೆ ಸಂಬಂಧಿಸಿದ ರೋಗ ಲಕ್ಷಣಗಳನ್ನು ಕಂಡು ಬಂದರೆ ನಿರ್ಲಕ್ಷಿಸಬೇಡಿ. ಅದರಲ್ಲಿಯೂ ಕೆಲವು ರೋಗಲಕ್ಷಣಗಳು ರಾತ್ರಿಯಲ್ಲಿಯೂ ಕಾಣಿಸಿಕೊಳ್ಳುತ್ತವೆ. ನೀವು ಈ ರೋಗಲಕ್ಷಣಗಳನ್ನು ಕಡೆಗಣಿಸಿದರೆ ಅದು ಯಕೃತ್ತು ಮತ್ತು ಆರೋಗ್ಯಕ್ಕೆ ಅಪಾಯಕಾರಿ. ಹಾಗಾದರೆ ಯಕೃತ್ತಿಗೆ ಹಾನಿ ಮಾಡುವ ರೋಗಲಕ್ಷಣಗಳು ಯಾವುದು ಎಂದು ತಿಳಿದುಕೊಳ್ಳಿ. ನಿಮಗೂ ಈ ರೋಗ ಲಕ್ಷಣಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.

Liver Health: ರಾತ್ರಿಯಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮ್ಮ ಲಿವರ್ ಅಪಾಯದಲ್ಲಿದೆ ಎಂದರ್ಥ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 14, 2024 | 3:25 PM

ಯಕೃತ್ತು (Liver) ನಮ್ಮ ದೇಹದ ಮುಖ್ಯ ಅಂಗವಾಗಿದ್ದು, ಪ್ರಮುಖವಾಗಿರುವಂತಹ ಅನೇಕ ಕಾರ್ಯಗಳನ್ನು ನಿರ್ವಹಿಸಲು ಸಹಕಾರಿಯಾಗಿದೆ. ಇದು ದೇಹದಿಂದ ಕಲ್ಮಶವನ್ನು ತೆಗೆದುಹಾಕುವುದಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ನಾವು ತಿಂದ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ. ಅಲ್ಲದೆ ರಕ್ತ ಕಣಗಳ ರಚನೆಯಲ್ಲಿ ಸಹ ಪಾತ್ರ ವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಒತ್ತಡ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಅನೇಕ ರೀತಿಯ ಯಕೃತ್ತಿನ ಕಾಯಿಲೆಗಳು ಉಂಟಾಗಬಹುದು. ಹಾಗಾಗಿ ಇದಕ್ಕೆ ಸಂಬಂಧಿಸಿದ ರೋಗ ಲಕ್ಷಣಗಳನ್ನು ಕಂಡು ಬಂದರೆ ನಿರ್ಲಕ್ಷಿಸಬೇಡಿ. ಅದರಲ್ಲಿಯೂ ಕೆಲವು ರೋಗಲಕ್ಷಣಗಳು ರಾತ್ರಿಯಲ್ಲಿಯೂ ಕಾಣಿಸಿಕೊಳ್ಳುತ್ತವೆ. ನೀವು ಈ ರೋಗಲಕ್ಷಣಗಳನ್ನು ಕಡೆಗಣಿಸಿದರೆ ಅದು ಯಕೃತ್ತು ಮತ್ತು ಆರೋಗ್ಯಕ್ಕೆ ಅಪಾಯಕಾರಿ. ಹಾಗಾದರೆ ಯಕೃತ್ತಿಗೆ ಹಾನಿ ಮಾಡುವ ರೋಗಲಕ್ಷಣಗಳು ಯಾವುದು ಎಂದು ತಿಳಿದುಕೊಳ್ಳಿ. ನಿಮಗೂ ಈ ರೋಗ ಲಕ್ಷಣಗಳು ಕಂಡು ಬಂದರೆ ಅದನ್ನು ನಿರ್ಲಕ್ಷಿಸಬೇಡಿ.

ಆಗಾಗ ಎಚ್ಚರಗೊಳ್ಳುವುದು: ರಾತ್ರಿ ಸಮಯದಲ್ಲಿ ಪದೇ ಪದೇ ಎಚ್ಚರಗೊಳ್ಳುತ್ತಿದ್ದರೆ ಅದು ಯಕೃತ್ತಿನ ಹಾನಿಯ ಸಂಕೇತವಾಗಿರಬಹುದು. ಏಕೆಂದರೆ ಪಿತ್ತಜನಕಾಂಗದ ಹಾನಿಯು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು.

ದೇಹದ ಕೆಲವು ಭಾಗಗಳಲ್ಲಿ ಊತ: ಪಿತ್ತಜನಕಾಂಗ ಅಥವಾ ಯಕೃತ್ತು ಹಾನಿಯಿಂದಾಗಿ ಪಾದಗಳಲ್ಲಿ ಊತ ಕಂಡು ಬರಬಹುದು. ಅದರಲ್ಲಿಯೂ ಇದು ವಿಶೇಷವಾಗಿ ರಾತ್ರಿಯಲ್ಲಿ ಕಂಡು ಬರುತ್ತದೆ.

ವಾಕರಿಕೆ -ವಾಂತಿ: ನಿಮಗೆ ರಾತ್ರಿಯಲ್ಲಿ ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಂಡು ಬರುತ್ತಿದ್ದರೆ ಅದು ಯಕೃತ್ತಿನ ಹಾನಿಯ ಸಂಕೇತವಾಗಿರಬಹುದು.

ಹಳದಿ ಮೂತ್ರ: ಪಿತ್ತಜನಕಾಂಗದ ಹಾನಿಯು ಮೂತ್ರವು ಹಳದಿ ಬಣ್ಣಕ್ಕೆ ತಿರುಗಲು ಕಾರಣವಾಗಬಹುದು. ಇದು ಪಿತ್ತಜನಕಾಂಗದಿಂದ ಉತ್ಪತ್ತಿಯಾಗುವ ಬಿಲಿರುಬಿನ್ ಎಂಬ ವಸ್ತುವಿನ ಹೆಚ್ಚಳದಿಂದ ಉಂಟಾಗುತ್ತದೆ.

ಇದನ್ನೂ ಓದಿ: ನೇರ ಉರಿಯಲ್ಲಿ ಆಹಾರ ಬೇಯಿಸಿದರೆ ಕ್ಯಾನ್ಸರ್ ಬರುವುದು ಖಚಿತ! ಹೇಗೆ ತಡೆಯುವುದು ತಿಳಿಯಿರಿ

ಈ ರೋಗಲಕ್ಷಣಗಳನ್ನು ಏಕೆ ನಿರ್ಲಕ್ಷಿಸಬಾರದು?

ಈ ಲಕ್ಷಣಗಳು ಹೆಚ್ಚಾಗಿ ಇತರ ಕಾಯಿಲೆಗಳಂತೆಯೇ ಇರುತ್ತವೆ. ಆದ್ದರಿಂದ ಅವುಗಳನ್ನು ನಿರ್ಲಕ್ಷಿಸಬೇಡಿ. ಈ ರೋಗಲಕ್ಷಣಗಳು ಹೆಚ್ಚಾದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಪಿತ್ತಜನಕಾಂಗದ ಕಾಯಿಲೆಗಳನ್ನು ಮೊದಲೇ ಪತ್ತೆಹಚ್ಚಿದರೆ, ಅವುಗಳಿಗೆ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ.

ಯಕೃತ್ತಿನ ಕಾಯಿಲೆಗಳಿಗೆ ಕಾರಣಗಳು ಯಾವುವು?

1. ಅತಿಯಾದ ಆಲ್ಕೋಹಾಲ್ ಸೇವನೆ

2. ವೈರಲ್ ಹೆಪಟೈಟಿಸ್

3. ಬೊಜ್ಜು

4. ಮಧುಮೇಹ

5. ಅಧಿಕ ರಕ್ತದೊತ್ತಡ

6. ಕೆಲವು ಔಷಧಿಗಳ ವ್ಯತಿರಿಕ್ತ ಪರಿಣಾಮ

ಪಿತ್ತಜನಕಾಂಗ ಆರೋಗ್ಯವಾಗಿರಲು ಏನು ಮಾಡಬೇಕು?

1. ಸಮತೋಲಿತ ಆಹಾರವನ್ನು ಸೇವಿಸಿ

2. ಆಲ್ಕೋಹಾಲ್ ಸೇವನೆಯನ್ನು ಕಡಿಮೆ ಮಾಡಿ

3. ನಿಯಮಿತವಾಗಿ ವ್ಯಾಯಾಮ ಮಾಡಿ

4. ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ

5. ಒತ್ತಡವನ್ನು ತಡೆಯಿರಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್