AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕಿಡ್ನಿ ಇರುವ ಮಗು ಆರೋಗ್ಯವಾಗಿರಲು ಸಾಧ್ಯವೇ? ಪೋಷಕರೇ ಈ ವಿಷಯ ನೆನಪಿಟ್ಟುಕೊಳ್ಳಿ

ಹುಟ್ಟುವ ಮಗುವಿಗೆ ಎರಡು ಮೂತ್ರಪಿಂಡಗಳಿರುತ್ತದೆ. ಆದರೆ ಕೆಲವೊಮ್ಮೆ ಮಗು ಹುಟ್ಟುವಾಗಲೇ ಒಂದು ಮೂತ್ರಪಿಂಡ ಅಥವಾ ಕಿಡ್ನಿಯೊಂದಿಗೆ ಜನಿಸುತ್ತದೆ. ಇಂತಹ ಸಂದರ್ಭಗಳಲ್ಲಿ ಪೋಷಕರು ಚಿಂತೆಗೀಡಾಗುತ್ತಾರೆ. ಆದರೆ ಆರೋಗ್ಯ ತಜ್ಞರು ಒಂದೇ ಕಿಡ್ನಿ ಇರುವ ಮಗು ಜನಿಸಿದಾಗ ಸಾಮಾನ್ಯವಾಗಿ ಭಯ ಪಡುವ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಆದರೂ ಅವರ ತಲೆಯಲ್ಲಿ ತಮ್ಮ ಮಗು ಮುಂದೆ ಆರೋಗ್ಯವಾಗಿರಲು ಸಾಧ್ಯವೇ, ಆ ಮಗುವಿನ ಜೀವನ ಹೇಗೆ ನಡೆಯಬಹುದು ಹೀಗೆ ಸಾವಿರ ಪ್ರಶ್ನೆಗಳು ಉದ್ಭವವಾಗುತ್ತದೆ. ಇಂತಹ ಸಂದೇಹಗಳಿಗೆ ತಜ್ಞರು ನೀಡಿರುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಒಂದು ಕಿಡ್ನಿ ಇರುವ ಮಗು ಆರೋಗ್ಯವಾಗಿರಲು ಸಾಧ್ಯವೇ? ಪೋಷಕರೇ ಈ ವಿಷಯ ನೆನಪಿಟ್ಟುಕೊಳ್ಳಿ
Single Kidney In Children
ಪ್ರೀತಿ ಭಟ್​, ಗುಣವಂತೆ
|

Updated on: Nov 01, 2025 | 3:10 PM

Share

ಸಾಮಾನ್ಯವಾಗಿ ಹುಟ್ಟುವ ಮಗುವಿಗೆ ಎರಡು ಮೂತ್ರಪಿಂಡಗಳಿರುತ್ತದೆ. ಆದರೆ ಇದು ಎಲ್ಲ ಮಕ್ಕಳಿಗೂ ಅನ್ವಯವಾಗುವುದಿಲ್ಲ. ಹೌದು, ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಪ್ರಕಾರ, ವಿಶ್ವದಾದ್ಯಂತ ಸಾವಿರ ಮಕ್ಕಳಲ್ಲಿ ಒಂದು ಮಗು ಎರಡು ಮೂತ್ರಪಿಂಡಗಳ ಬದಲಿಗೆ ಒಂದೇ ಕಿಡ್ನಿ (Kidney) ಅಥವಾ ಮೂತ್ರಪಿಂಡದೊಂದಿಗೆ ಜನಿಸುತ್ತದೆ. ಈ ಪರಿಸ್ಥಿತಿಯಲ್ಲಿ ಮಗು ಜನಿಸಿದಾಗ ಪೋಷಕರು ಸಹಜವಾಗಿ ಚಿಂತಿತರಾಗುತ್ತಾರೆ. ಅದು ತಪ್ಪಲ್ಲ. ಆದರೆ ಆರೋಗ್ಯ (Health) ತಜ್ಞರು ಒಂದೇ ಕಿಡ್ನಿ ಇರುವ ಮಗು ಜನಿಸಿದಾಗ ಸಾಮಾನ್ಯವಾಗಿ ಭಯ ಪಡುವ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಆದರೂ ಮಕ್ಕಳು ಜನಿಸಿದಾಗ ಪೋಷಕರ ತಲೆಯಲ್ಲಿ ತಮ್ಮ ಮಗು ಆರೋಗ್ಯವಾಗಿರಲು ಸಾಧ್ಯವೇ, ಮುಂದೆ ಆ ಮಗುವಿನ ಜೀವನ ಹೇಗೆ ನಡೆಯಬಹುದು ಹೀಗೆ ಸಾವಿರ ಪ್ರಶ್ನೆಗಳು ಉದ್ಭವವಾಗುತ್ತದೆ. ಇಂತಹ ಸಂದೇಹಗಳಿಗೆ ತಜ್ಞರು ನೀಡಿರುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಮಕ್ಕಳ ಶಸ್ತ್ರಚಿಕಿತ್ಸಕ ಮತ್ತು ಪೀಡಿಯಾಟ್ರಿಕ್ ಮೂತ್ರಶಾಸ್ತ್ರಜ್ಞ ಡಾ. ಸಂದೀಪ್ ಕುಮಾರ್ ಸಿನ್ಹಾ ಅವರು ಹೇಳುವ ಪ್ರಕಾರ, ಒಂದೇ ಕಿಡ್ನಿಯೊಂದಿಗೆ ಜನಿಸಿದ ಮಗುವೂ ಸಾಮಾನ್ಯ ಜೀವನವನ್ನು ನಡೆಸಬಹುದು ಎಂದು ಹೇಳುತ್ತಾರೆ. ಆದರೆ ಕೆಲವು ನಿಯಮಿತ ತಪಾಸಣೆ ಮತ್ತು ಮುನ್ನೆಚ್ಚರಿಕೆಗಳೊಂದಿಗೆ ಇದು ಸಾಧ್ಯವಾಗುತ್ತದೆ. ಜೊತೆಗೆ ಮಗುವಿನ ಆಹಾರಕ್ರಮಕ್ಕೆ ಸರಿಯಾದ ಗಮನ ನೀಡಿದರೆ ಮತ್ತು ನಿಯಮಿತ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದರೆ, ಯಾವುದೇ ಅಪಾಯವಿರುವುದಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ, ಅನೇಕ ಸುಧಾರಿತ ತಂತ್ರಗಳು (ಗರ್ಭಾವಸ್ಥೆಯಲ್ಲಿ ಅಲ್ಟ್ರಾಸೌಂಡ್) ಲಭ್ಯವಿದೆ, ಇದು ಜನನದ ಮೊದಲು ಸ್ಥಿತಿಯನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ, ಮಾತ್ರವಲ್ಲ ವೈದ್ಯರನ್ನು ಸಂಪರ್ಕಿಸಿ ಮುಂಚಿತವಾಗಿ ಸರಿಯಾದ ಚಿಕಿತ್ಸೆ ಮುಂದುವರಿಸಲು ಅನುವು ಮಾಡಿಕೊಡುತ್ತದೆ.

ಸರಿಯಾದ ಸಮಯದಲ್ಲಿ ಅಗತ್ಯ ಪರೀಕ್ಷೆಗಳು

ಡಾ. ಸಿನ್ಹಾ ಹೇಳುವಂತೆ ಈ ರೀತಿ ಒಂದೇ ಕಿಡ್ನಿ ಇರುವ ಮಕ್ಕಳಲ್ಲಿ, ಪ್ರತಿ ವರ್ಷ ಮೂತ್ರದಲ್ಲಿ ಪ್ರೋಟೀನ್ ಮತ್ತು ರಕ್ತದೊತ್ತಡವನ್ನು ಪರೀಕ್ಷಿಸುವುದು ಮುಖ್ಯ. ಈ ಪರೀಕ್ಷೆಗಳು ಒತ್ತಡ ಅಥವಾ ಮೂತ್ರಪಿಂಡಗಳಿಗೆ ಹಾನಿಯಾಗುವುದನ್ನು ಮೊದಲೇ ಸೂಚಿಸಬಹುದು. ಆದರೆ ಮಕ್ಕಳು ಯಾವಾಗಲೂ ನಿರ್ಬಂಧ ಅಥವಾ ಎಚ್ಚರಿಕೆಯಿಂದ ಬದುಕಬೇಕು ಎಂಬುದು ಇದರ ಅರ್ಥವಲ್ಲ. ಅವರು ಇತರ ಮಕ್ಕಳಂತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಮತ್ತು ಆಟವಾಡಬಹುದು. ಒಂದು ಮೂತ್ರಪಿಂಡ ಹೊಂದಿರುವ ಮಕ್ಕಳಿಗೆ ಸಾಮಾನ್ಯವಾಗಿ ಯಾವುದೇ ವಿಶೇಷ ಆಹಾರದ ಅಗತ್ಯವಿಲ್ಲ. ಆದರೆ ಮೂತ್ರಪಿಂಡಕ್ಕೆ ಹಾನಿ ಮಾಡುವ ವಿಷಯಗಳನ್ನು ತಪ್ಪಿಸಬೇಕಾಗುತ್ತದೆ.

ಇದನ್ನೂ ಓದಿ: ನೀವು ಸೇವನೆ ಮಾಡುವ ಆಹಾರದಲ್ಲಿ ಆ ಪದಾರ್ಥಗಳಿದ್ದರೆ ನಿಮ್ಮ ಮೆದುಳು, ಕರುಳು ಎರಡೂ ಸೇಫ್ ಆಗಿರುತ್ತೆ

ಮಗುವಿನ ಬೆಳವಣಿಗೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಕೆಲವೊಮ್ಮೆ, ಒಂದು ಮೂತ್ರಪಿಂಡದೊಂದಿಗೆ ಜನಿಸುವುದು ಇತರ ಆರೋಗ್ಯ ಸಮಸ್ಯೆಗಳನ್ನು ಒಳಗೊಂಡಿರುವ ದೊಡ್ಡ ಸಿಂಡ್ರೋಮ್‌ನ ಭಾಗವಾಗಿರಬಹುದು. ಆದರೆ ಹೆಚ್ಚಿನ ಸಂದರ್ಭಗಳಲ್ಲಿ, ಇದು ಮಗುವಿನ ಬೆಳವಣಿಗೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ಜೊತೆಗೆ ಒಂದು ಮೂತ್ರಪಿಂಡ ಹೊಂದಿರುವ ಮಗು ದೈಹಿಕವಾಗಿ ದುರ್ಬಲವಾಗಿರುತ್ತದೆ ಎಂಬುದು ಇದರ ಅರ್ಥವಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?