AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lung Cancer: ಈ ಲಕ್ಷಣಗಳು ಗೋಚರಿಸಿದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ

ಶ್ವಾಸಕೋಶ ಕ್ಯಾನ್ಸರ್​ಗೆ ಒಳಗಾದವರಲ್ಲಿ ಶೇ.85ರಷ್ಟು ಮಂದಿ ಕಾಯಿಲೆಯು ತೀವ್ರ ಸ್ವರೂಪ ಪಡೆದ ಬಳಿಕ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ಜಾಗೃತಿ ಇಲ್ಲದಿರುವುದೇ ಪ್ರಮುಖ ಕಾರಣ ಎನ್ನಲಾಗಿದೆ. ಶ್ವಾಸಕೋಶದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

Lung Cancer: ಈ ಲಕ್ಷಣಗಳು ಗೋಚರಿಸಿದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ
Lung Cancer
TV9 Web
| Edited By: |

Updated on: Jun 27, 2022 | 4:52 PM

Share

ಶ್ವಾಸಕೋಶ ಕ್ಯಾನ್ಸರ್​ಗೆ ಒಳಗಾದವರಲ್ಲಿ ಶೇ.85ರಷ್ಟು ಮಂದಿ ಕಾಯಿಲೆಯು ತೀವ್ರ ಸ್ವರೂಪ ಪಡೆದ ಬಳಿಕ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ಜಾಗೃತಿ ಇಲ್ಲದಿರುವುದೇಇದಕ್ಕೆ ಮುಖ್ಯ ಕಾರಣ. ಶ್ವಾಸಕೋಶದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಧೂಮಪಾನವೇ ಪ್ರಮುಖ ಕಾರಣ. ಇದು ಬಹುತೇಕರಲ್ಲಿ ತಡವಾಗಿ ಪತ್ತೆಯಾಗುತ್ತಿರುವುದರಿಂದ ಕೆಲವರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ.

ಸಾಧ್ಯವಾದಷ್ಟು ಬೇಗ ಆಸ್ಪತ್ರೆಗೆ ತೆರಳಿ, ತಪಾಸಣೆಗೆ ಒಳಪಟ್ಟಲ್ಲಿ ರೋಗ ಗುರುತಿಸಿ ಚಿಕಿತ್ಸೆ ನೀಡಬಹುದು. ನಿರ್ಲಕ್ಷ್ಯ ಮಾಡಿದಲ್ಲಿ ಜೀವಕ್ಕೆ ಅಪಾಯವಾಗುತ್ತದೆ. ಶೇ 40ರಷ್ಟು ಧೂಮಪಾನಿಗಳು ಚೀನಾ, ಭಾರತ ಮತ್ತು ಇಂಡೋನೇಷ್ಯಾದಲ್ಲಿಯೇ ಇದ್ದಾರೆ. ನಿರಂತರ ಕೆಮ್ಮು, ಎದೆನೋವು, ಕೆಮ್ಮಿದಾಗ ರಕ್ತ ಹೊರಹೊಮ್ಮುವಿಕೆ, ಉಸಿರಾಟದ ಸಮಸ್ಯೆ, ನಡೆದಾಡುವಾಗ ಸಮತೋಲನ ತಪ್ಪುವಿಕೆ ಸೇರಿದಂತೆ ವಿವಿಧ ಲಕ್ಷಣಗಳು ಶ್ವಾಸಕೋಶ ಕ್ಯಾನ್ಸರ್ ಇರುವವರಿಗೆ ಕಾಣಿಸಿಕೊಳ್ಳುತ್ತವೆ.

ಪ್ರಾಥಮಿಕ ಹಂತದಲ್ಲಾದರೆ ಶ್ವಾಸಕೋಶದ ಬಾಧಿತ ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಹಾಕಲಾಗುತ್ತದೆ. ಕೀಮೋಥೆರಪಿ, ರೇಡಿಯೇಷನ್ ಚಿಕಿತ್ಸೆ ಕೂಡ ಪ್ರಕರಣಗಳನ್ನು ಆಧರಿಸಿ ನೀಡಲಾಗುತ್ತದೆ. ಶ್ವಾಸಕೋಶಕ್ಕೆ ಸಂಬಂಧಿಸಿದ ಎಲ್ಲ ಕಾಯಿಲೆಗಳಿಗೆ ಧೂಮಪಾನ ಕಾರಣ. ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಮಧ್ಯ ವಯಸ್ಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಮಾದರಿಯ ಕ್ಯಾನ್ಯರ್‌ ಎದುರಿಸುತ್ತಿದ್ದಾರೆ.

ವ್ಯಕ್ತಿಗೆ ಕ್ಯಾನ್ಸರ್ ಯಾವ ಹಂತದಲ್ಲಿದೆ ಎಂಬ ಆಧಾರದ ಮೇಲೆ ಚಿಕಿತ್ಸೆ ನಿರ್ಧರಿಸಲಾಗುತ್ತದೆ. ಶೇ 15ರಷ್ಟು ಮಂದಿಯಲ್ಲಿ ಮಾತ್ರ ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯವಾಗುತ್ತಿದೆ. ಶ್ವಾಸಕೋಶ ಕ್ಯಾನ್ಸರ್‌ಗೆ ಒಳಗಾದವರಲ್ಲಿ ಶೇ 70ರಷ್ಟು ಮಂದಿ ಧೂಮಪಾನಿಗಳಾಗಿರುತ್ತಾರೆ.

ಶೇ 20ರಿಂದ ಶೇ 30ರಷ್ಟು ಮಂದಿ ಪರೋಕ್ಷ ಧೂಮಪಾನ, ವಾಯುಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಂದ ಈ ಮಾದರಿಯ ಕ್ಯಾನ್ಸರ್‌ಗೆ ಒಳಪಡುತ್ತಿದ್ದಾರೆ.

ಶ್ವಾಸಕೋಶ ಕ್ಯಾನ್ಸರ್​ನ ಲಕ್ಷಣಗಳು -ಆಹಾರ ನುಂಗಲು ಕಷ್ಟವಾಗುವುದು -ಭುಜ ಹಾಗೂ ಎದೆ ನೋವು -ಕುತ್ತಿಗೆ ಅಥವಾ ಮುಖದಲ್ಲಿ ಸ್ವೆಲ್ಲಿಂಗ್ ಕಾಣಿಸಿಕೊಳ್ಳುವುದು ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್