AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lung Cancer: ಈ ಲಕ್ಷಣಗಳು ಗೋಚರಿಸಿದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ

ಶ್ವಾಸಕೋಶ ಕ್ಯಾನ್ಸರ್​ಗೆ ಒಳಗಾದವರಲ್ಲಿ ಶೇ.85ರಷ್ಟು ಮಂದಿ ಕಾಯಿಲೆಯು ತೀವ್ರ ಸ್ವರೂಪ ಪಡೆದ ಬಳಿಕ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ಜಾಗೃತಿ ಇಲ್ಲದಿರುವುದೇ ಪ್ರಮುಖ ಕಾರಣ ಎನ್ನಲಾಗಿದೆ. ಶ್ವಾಸಕೋಶದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.

Lung Cancer: ಈ ಲಕ್ಷಣಗಳು ಗೋಚರಿಸಿದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ
Lung Cancer
TV9 Web
| Edited By: |

Updated on: Jun 27, 2022 | 4:52 PM

Share

ಶ್ವಾಸಕೋಶ ಕ್ಯಾನ್ಸರ್​ಗೆ ಒಳಗಾದವರಲ್ಲಿ ಶೇ.85ರಷ್ಟು ಮಂದಿ ಕಾಯಿಲೆಯು ತೀವ್ರ ಸ್ವರೂಪ ಪಡೆದ ಬಳಿಕ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕ್ಯಾನ್ಸರ್​ನ ಲಕ್ಷಣಗಳ ಬಗ್ಗೆ ಜಾಗೃತಿ ಇಲ್ಲದಿರುವುದೇಇದಕ್ಕೆ ಮುಖ್ಯ ಕಾರಣ. ಶ್ವಾಸಕೋಶದ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದಕ್ಕೆ ಧೂಮಪಾನವೇ ಪ್ರಮುಖ ಕಾರಣ. ಇದು ಬಹುತೇಕರಲ್ಲಿ ತಡವಾಗಿ ಪತ್ತೆಯಾಗುತ್ತಿರುವುದರಿಂದ ಕೆಲವರ ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ.

ಸಾಧ್ಯವಾದಷ್ಟು ಬೇಗ ಆಸ್ಪತ್ರೆಗೆ ತೆರಳಿ, ತಪಾಸಣೆಗೆ ಒಳಪಟ್ಟಲ್ಲಿ ರೋಗ ಗುರುತಿಸಿ ಚಿಕಿತ್ಸೆ ನೀಡಬಹುದು. ನಿರ್ಲಕ್ಷ್ಯ ಮಾಡಿದಲ್ಲಿ ಜೀವಕ್ಕೆ ಅಪಾಯವಾಗುತ್ತದೆ. ಶೇ 40ರಷ್ಟು ಧೂಮಪಾನಿಗಳು ಚೀನಾ, ಭಾರತ ಮತ್ತು ಇಂಡೋನೇಷ್ಯಾದಲ್ಲಿಯೇ ಇದ್ದಾರೆ. ನಿರಂತರ ಕೆಮ್ಮು, ಎದೆನೋವು, ಕೆಮ್ಮಿದಾಗ ರಕ್ತ ಹೊರಹೊಮ್ಮುವಿಕೆ, ಉಸಿರಾಟದ ಸಮಸ್ಯೆ, ನಡೆದಾಡುವಾಗ ಸಮತೋಲನ ತಪ್ಪುವಿಕೆ ಸೇರಿದಂತೆ ವಿವಿಧ ಲಕ್ಷಣಗಳು ಶ್ವಾಸಕೋಶ ಕ್ಯಾನ್ಸರ್ ಇರುವವರಿಗೆ ಕಾಣಿಸಿಕೊಳ್ಳುತ್ತವೆ.

ಪ್ರಾಥಮಿಕ ಹಂತದಲ್ಲಾದರೆ ಶ್ವಾಸಕೋಶದ ಬಾಧಿತ ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದು ಹಾಕಲಾಗುತ್ತದೆ. ಕೀಮೋಥೆರಪಿ, ರೇಡಿಯೇಷನ್ ಚಿಕಿತ್ಸೆ ಕೂಡ ಪ್ರಕರಣಗಳನ್ನು ಆಧರಿಸಿ ನೀಡಲಾಗುತ್ತದೆ. ಶ್ವಾಸಕೋಶಕ್ಕೆ ಸಂಬಂಧಿಸಿದ ಎಲ್ಲ ಕಾಯಿಲೆಗಳಿಗೆ ಧೂಮಪಾನ ಕಾರಣ. ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಮಧ್ಯ ವಯಸ್ಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಮಾದರಿಯ ಕ್ಯಾನ್ಯರ್‌ ಎದುರಿಸುತ್ತಿದ್ದಾರೆ.

ವ್ಯಕ್ತಿಗೆ ಕ್ಯಾನ್ಸರ್ ಯಾವ ಹಂತದಲ್ಲಿದೆ ಎಂಬ ಆಧಾರದ ಮೇಲೆ ಚಿಕಿತ್ಸೆ ನಿರ್ಧರಿಸಲಾಗುತ್ತದೆ. ಶೇ 15ರಷ್ಟು ಮಂದಿಯಲ್ಲಿ ಮಾತ್ರ ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಲು ಸಾಧ್ಯವಾಗುತ್ತಿದೆ. ಶ್ವಾಸಕೋಶ ಕ್ಯಾನ್ಸರ್‌ಗೆ ಒಳಗಾದವರಲ್ಲಿ ಶೇ 70ರಷ್ಟು ಮಂದಿ ಧೂಮಪಾನಿಗಳಾಗಿರುತ್ತಾರೆ.

ಶೇ 20ರಿಂದ ಶೇ 30ರಷ್ಟು ಮಂದಿ ಪರೋಕ್ಷ ಧೂಮಪಾನ, ವಾಯುಮಾಲಿನ್ಯ ಸೇರಿದಂತೆ ವಿವಿಧ ಕಾರಣಗಳಿಂದ ಈ ಮಾದರಿಯ ಕ್ಯಾನ್ಸರ್‌ಗೆ ಒಳಪಡುತ್ತಿದ್ದಾರೆ.

ಶ್ವಾಸಕೋಶ ಕ್ಯಾನ್ಸರ್​ನ ಲಕ್ಷಣಗಳು -ಆಹಾರ ನುಂಗಲು ಕಷ್ಟವಾಗುವುದು -ಭುಜ ಹಾಗೂ ಎದೆ ನೋವು -ಕುತ್ತಿಗೆ ಅಥವಾ ಮುಖದಲ್ಲಿ ಸ್ವೆಲ್ಲಿಂಗ್ ಕಾಣಿಸಿಕೊಳ್ಳುವುದು ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ