AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಆರೋಗ್ಯ ಚೆನ್ನಾಗಿ ಕಾಪಾಡಿಕೊಳ್ಳಬೇಕು ಅಂದರೆ ಶ್ವಾಸಕೋಶಗಳು ಸಹ ಸರಿಯಾಗಿ ಕಾರ್ಯ ನಿರ್ವಹಿಸುವುದು ಬಹಳ ಮುಖ್ಯವಾಗುತ್ತದೆ. ಇದಕ್ಕಾಗಿ, ಕೆಲವು ನಿರ್ದಿಷ್ಟ ವಿಷಯಗಳಿಗೆ ಗಮನ ಕೊಡುವುದು ಅವಶ್ಯಕ. ಶ್ವಾಸಕೋಶಗಳ ಆರೋಗ್ಯ ಕಾಪಾಡಲು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಲಂಗ್ಸ್ ಡಿಟಾಕ್ಸ್ ನಿಜವಾಗಿಯೂ ಶ್ವಾಸಕೋಶವನ್ನು ಕ್ಲೀನ್ ಮಾಡುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ
Lungs Detox NaturallyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 23, 2026 | 8:33 PM

Share

ಇಂದಿನ ಕಾಲದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಧೂಮಪಾನದಿಂದ ಲಂಗ್ಸ್ (Lungs) ಅಂದರೆ ಶ್ವಾಸಕೋಶದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಲಂಗ್ಸ್ ಆರೋಗ್ಯ ಕಾಪಾಡಿಕೊಳ್ಳಲು ಹಲವಾರು ರೀತಿಯ ಸಲಹೆಗಳನ್ನು ಅನುಸರಿಸುವುದು ಅನಿವಾರ್ಯವಾದರೂ ಕೂಡ ಅದರ ಬಗ್ಗೆ ತಿಳಿಯದೆಯೇ ಮಾಡುವುದು ತಪ್ಪು. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಲಂಗ್ಸ್ ಡಿಟಾಕ್ಸ್” ಎಂಬ ಹೆಸರಿನಲ್ಲಿ ಹಲವು ಪಾನೀಯಗಳು ಮತ್ತು ಉತ್ಪನ್ನಗಳು ಪ್ರಚಾರವಾಗುತ್ತಿವೆ. ಆದರೆ ಇದು ನಿಜವಾಗಿಯೂ ಶ್ವಾಸಕೋಶವನ್ನು ಡಿಟಾಕ್ಸ್ ಮಾಡುತ್ತದೆಯೇ, ಈ ಬಗ್ಗೆ ಆರೋಗ್ಯ ತಜ್ಞರ ಅಭಿಪ್ರಾಯವೇನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಯಾವುದೇ ವಿಶೇಷ ಡಿಟಾಕ್ಸ್ ಡ್ರಿಂಕ್ ಮೂಲಕ ಶ್ವಾಸಕೋಶಗಳನ್ನು ಸ್ವಚ್ಛಗೊಳಿಸಲು ಸಾಧ್ಯವಿಲ್ಲ. ಇವು ಸ್ವಾಭಾವಿಕವಾಗಿ ತಮ್ಮನ್ನು ತಾವು ಶುದ್ಧಗೊಳಿಸಿಕೊಳ್ಳುವ ಸಾಮರ್ಥ್ಯ ಹೊಂದಿವೆ. ಆದರೆ ಲಂಗ್ಸ್ ಆರೋಗ್ಯ ಕಾಪಾಡಲು ಧೂಮಪಾನವನ್ನು ಸಂಪೂರ್ಣವಾಗಿ ನಿಲ್ಲಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಧೂಮಪಾನದಿಂದ ಉರಿಯೂತ ಉಂಟಾಗುತ್ತದೆ ಮತ್ತು ದೀರ್ಘಕಾಲದಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: Lung Health: ನಿಮ್ಮ ಶ್ವಾಸಕೋಶ ಆರೋಗ್ಯವಾಗಿರಲು ನಿಯಮಿತವಾಗಿ ಈ ಹಣ್ಣುಗಳ ಸೇವನೆ ಮಾಡಿ

ವಾಯುಮಾಲಿನ್ಯದಿಂದ ರಕ್ಷಣೆ ಹೇಗೆ?

ಇಂದಿನ ದಿನಗಳಲ್ಲಿ ಕೆಟ್ಟ ಗಾಳಿಯ ಗುಣಮಟ್ಟವೂ ಲಂಗ್ಸ್ ಆರೋಗ್ಯಕ್ಕೆ ಅಪಾಯಕಾರಿಯಾಗಿದೆ. ಧೂಳು ಮತ್ತು ಮಾಲಿನ್ಯದ ಸೂಕ್ಷ್ಮ ಕಣಗಳು ಉಸಿರಾಟದ ಮೂಲಕ ಒಳನುಗ್ಗಿ ಹಾನಿ ಮಾಡುತ್ತವೆ. ಇದರಿಂದ ತಪ್ಪಿಸಿಕೊಳ್ಳಲು ಧೂಳು ಇರುವ ಸ್ಥಳಗಳಿಗೆ ಹೋಗುವುದನ್ನು ಕಡಿಮೆ ಮಾಡಿ, ಅಗತ್ಯವಿದ್ದರೆ N-95 ಮಾಸ್ಕ್ ಬಳಸುವುದು ಉತ್ತಮ. AQI ಹೆಚ್ಚಿರುವ ದಿನಗಳಲ್ಲಿ ಹೊರಗೆ ವಾಕಿಂಗ್ ಮತ್ತು ವ್ಯಾಯಾಮ ಮಾಡುವುದನ್ನು ತಪ್ಪಿಸಿ, ಅದರ ಬದಲು ಮನೆಯಲ್ಲೇ ವ್ಯಾಯಾಮ ಮಾಡುವುದು ಸೂಕ್ತ. ಅದರ ಜೊತೆಗೆ ಪ್ರತಿದಿನ ಕನಿಷ್ಠ 30 ನಿಮಿಷಗಳಷ್ಟು ವಾಕಿಂಗ್, ಜಾಗಿಂಗ್ ಅಥವಾ ಯೋಗ ಮಾಡುವುದರಿಂದ ಲಂಗ್ಸ್ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಹಣ್ಣು ಮತ್ತು ಹಸಿರು ತರಕಾರಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಆರೋಗ್ಯಕ್ಕೆ ಸಹಾಯಕ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!