AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಏನಾದರೂ ತಿನ್ನಬೇಕು ಅನಿಸುತ್ತಿದ್ದರೆ ಮಾಧುರಿ ದೀಕ್ಷಿತ್ ಪತಿ ಹೇಳಿರುವ ಸರಳ ಪರಿಹಾರ ಇಲ್ಲಿದೆ

ಇದ್ದಕ್ಕಿದ್ದಂತೆ ಯಾವುದಾದರೂ ಆಹಾರಗಳನ್ನು ತಿನ್ನುವುದಕ್ಕೆ ಬಯಸುತ್ತೇವೆ. ಈ ಬಯಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹಾಗಾಗಿ ಆಗ ಕೆಲವು ಆಹಾರಗಳನ್ನು ಸೇವನೆ ಮಾಡುತ್ತೇವೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರಿಗೆ ಊಟ ಆದ ಸ್ವಲ್ಪ ಹೊತ್ತಲ್ಲೇ ಮಸಾಲೆ ಅಥವಾ ಸಿಹಿಯಾದ ಪದಾರ್ಥಗಳನ್ನು ಸೇವನೆ ಮಾಡಬೇಕು ಎಂದು ಅನಿಸುತ್ತದೆ. ಇದನ್ನು ಕಡುಬಯಕೆಗಳು ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಹಾನಿಕಾರಕವಾದ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ ಜೊತೆಗೆ ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿಯೇ ಈ ಸಮಸ್ಯೆಗೆ ಸರಳವಾದ ಪರಿಹಾರ ಹುಡುಕುವುದು ಉತ್ತಮ.

ಪದೇ ಪದೇ ಏನಾದರೂ ತಿನ್ನಬೇಕು ಅನಿಸುತ್ತಿದ್ದರೆ ಮಾಧುರಿ ದೀಕ್ಷಿತ್ ಪತಿ ಹೇಳಿರುವ ಸರಳ ಪರಿಹಾರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 28, 2024 | 2:17 PM

Share

ಸಾಮಾನ್ಯವಾಗಿ ನಾವು ಕೆಲಸ ಮಾಡುವ ಸಮಯದಲ್ಲಿ ಅಥವಾ ಬಿಡುವವಿದ್ದಾಗ ನಮಗೆ ಏನಾದರೂ ತಿನ್ನಬೇಕು ಎನಿಸುವುದು ಸಹಜ. ಇದ್ದಕ್ಕಿದ್ದಂತೆ ಯಾವುದಾದರೂ ಆಹಾರಗಳನ್ನು ತಿನ್ನುವುದಕ್ಕೆ ಬಯಸುತ್ತೇವೆ. ಈ ಬಯಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹಾಗಾಗಿ ಆಗ ಕೆಲವು ಆಹಾರಗಳನ್ನು ಸೇವನೆ ಮಾಡುತ್ತೇವೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರಿಗೆ ಊಟ ಆದ ಸ್ವಲ್ಪ ಹೊತ್ತಲ್ಲೇ ಮಸಾಲೆ ಅಥವಾ ಸಿಹಿಯಾದ ಪದಾರ್ಥಗಳನ್ನು ಸೇವನೆ ಮಾಡಬೇಕು ಎಂದು ಅನಿಸುತ್ತದೆ. ಇದನ್ನು ಕಡುಬಯಕೆಗಳು ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಹಾನಿಕಾರಕವಾದ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ ಜೊತೆಗೆ ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿಯೇ ಈ ಸಮಸ್ಯೆಗೆ ಸರಳವಾದ ಪರಿಹಾರ ಹುಡುಕುವುದು ಉತ್ತಮ.

ಹಾಗಾಗಿಯೇ ಈ ರೀತಿ ಸಮಸ್ಯೆಗಳಿಂದ ಪಾರಾಗಲು ನಟಿ ಮಾಧುರಿ ದೀಕ್ಷಿತ್ ಅವರ ಪತಿ ಮತ್ತು ವೈದ್ಯ ಶ್ರೀರಾಮ್, ಕಡುಬಯಕೆಗಳಿಗೆ ಉತ್ತಮ ಪರಿಹಾರ ನೀಡಿದ್ದಾರೆ. ಅವರ ಪ್ರಕಾರ, ನಿಮಗೆ ಇದ್ದಕ್ಕಿದ್ದಂತೆ ಅನಾರೋಗ್ಯಕರ ಆಹಾರ ಸೇವನೆ ಮಾಡಬೇಕು ಎಂಬ ಪ್ರಚೋದನೆ ಮನಸ್ಸಿಗೆ ಬಂದರೆ ತಕ್ಷಣವೇ ಆ ಸಮಯದಲ್ಲಿ ಮತ್ತೊಂದು ಕೆಲಸ ಮಾಡಿ. ಈ ರೀತಿ ಮಾಡುವುದರಿಂದ, ನಿಮ್ಮ ಮನಸ್ಸು ಆ ಕಡುಬಯಕೆಗಳಿಂದ ಮತ್ತೊಂದು ಕೆಲಸದಲ್ಲಿ ತೊಡಗುತ್ತದೆ ಮತ್ತು ಅಲ್ಪಾವಧಿಯಲ್ಲಿ ನಿಮಗೆ ಏನಾದರೂ ತಿನ್ನಬೇಕು ಎಂಬ ಬಯಕೆ ದೂರವಾಗುತ್ತದೆ. ಈ ಅಭ್ಯಾಸಕ್ಕೆ ನೀವು ವಿಭಿನ್ನವಾಗಿ ಏನನ್ನೂ ಮಾಡುವ ಅಗತ್ಯವಿಲ್ಲ. ನೆಲ್ಲಿಕಾಯಿ ಚೂರ್ಣ ತಿನ್ನುವ ಮೂಲಕ ಅನಾರೋಗ್ಯಕರ ಆಹಾರ ತಿನ್ನುವ ಬಯಕೆಯನ್ನು ನೀಗಿಸಿಕೊಳ್ಳಬಹುದು. ಇದು ಕ್ರಮೇಣ ನಿಮಗೆ ಅಭ್ಯಾಸವಾಗುತ್ತದೆ ಬಳಿಕ ಕಡುಬಯಕೆಯನ್ನು ಕಡಿಮೆ ಮಾಡುತ್ತದೆ ಎಂದು ಡಾ. ಶ್ರೀರಾಮ್ ಹೇಳುತ್ತಾರೆ.

ಇದನ್ನೂ ಓದಿ: ಮೊಳಕೆ ಒಡೆದ ಆಲೂಗಡ್ಡೆಯನ್ನು ಎಂದಿಗೂ ತಿನ್ನಲೇಬೇಡಿ; ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಇಲ್ಲಿದೆ ವಿಡಿಯೋ :

ಮಾಧುರಿ ದೀಕ್ಷಿತ್ ಅವರ ಪತಿ ಡಾ. ಶ್ರೀರಾಮ್ ಹೃದಯ ಶಸ್ತ್ರಚಿಕಿತ್ಸಕರಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ, ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವುಗಳಲ್ಲಿ ಇದು ಒಂದಾಗಿದ್ದು ನೀವು ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ವೈದ್ಯರು ನೀಡಿರುವ ಈ ಸಲಹೆಯನ್ನು ಪಾಲಿಸಿ ಫಲಿತಾಂಶ ನೋಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗೆ ಅನುಕಂಪವೇ ಅಧಿಕವಾಗಿ ಕೆಲಸ ಮಾಡಲಿದ್ದು, ದುರುಪಯೋಗ ಸಾಧ್ಯತೆ
ಈ ರಾಶಿಯವರಿಗೆ ಅನುಕಂಪವೇ ಅಧಿಕವಾಗಿ ಕೆಲಸ ಮಾಡಲಿದ್ದು, ದುರುಪಯೋಗ ಸಾಧ್ಯತೆ
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ
ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಮಾತು
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
ದೆಹಲಿ ಸ್ಫೋಟ; ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಘೋಷಿಸಿದ ಸಿಎಂ ರೇಖಾ ಗುಪ್ತ
ವ್ಹೀಲಿಂಗ್​​ ಥ್ರಿಲ್​ಗಾಗಿ ಬುಲೆಟ್ ಬೈಕ್ ಕಳ್ಳತನ ಮಾಡುತ್ತಿದ್ದ ಸೈಕೋ ಕಳ್ಳ
ವ್ಹೀಲಿಂಗ್​​ ಥ್ರಿಲ್​ಗಾಗಿ ಬುಲೆಟ್ ಬೈಕ್ ಕಳ್ಳತನ ಮಾಡುತ್ತಿದ್ದ ಸೈಕೋ ಕಳ್ಳ
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
‘ಯುಐ’ ಸಿನಿಮಾಗೆ ಜನ ನೀಡಿದ ರೆಸ್ಪಾನ್ಸ್ ಬಗ್ಗೆ ಉಪೇಂದ್ರಗೆ ಬೇಸರ ಇದೆಯಾ?
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಪುನತ್ಸಂಗ್ಚು- II ಜಲವಿದ್ಯುತ್ ಯೋಜನೆ ಉದ್ಘಾಟಿಸಿದ ಮೋದಿ- ಭೂತಾನ್ ರಾಜ
ಕಬ್ಬು ಬೆಳೆಗಾರರ ಕಿಚ್ಚು: ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಇಟ್ಟ ರೈತರು
ಕಬ್ಬು ಬೆಳೆಗಾರರ ಕಿಚ್ಚು: ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಇಟ್ಟ ರೈತರು
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಬಿಹಾರ ಮತದಾನೋತ್ತರ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?
ಚಂದ್ರಪ್ರಭಾ ಪತ್ನಿಯ ಫೇವರೇಟ್ ಬಿಗ್​​ಬಾಸ್ ಸ್ಪರ್ಧಿಗಳು ಯಾರು?