AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಏನಾದರೂ ತಿನ್ನಬೇಕು ಅನಿಸುತ್ತಿದ್ದರೆ ಮಾಧುರಿ ದೀಕ್ಷಿತ್ ಪತಿ ಹೇಳಿರುವ ಸರಳ ಪರಿಹಾರ ಇಲ್ಲಿದೆ

ಇದ್ದಕ್ಕಿದ್ದಂತೆ ಯಾವುದಾದರೂ ಆಹಾರಗಳನ್ನು ತಿನ್ನುವುದಕ್ಕೆ ಬಯಸುತ್ತೇವೆ. ಈ ಬಯಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹಾಗಾಗಿ ಆಗ ಕೆಲವು ಆಹಾರಗಳನ್ನು ಸೇವನೆ ಮಾಡುತ್ತೇವೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರಿಗೆ ಊಟ ಆದ ಸ್ವಲ್ಪ ಹೊತ್ತಲ್ಲೇ ಮಸಾಲೆ ಅಥವಾ ಸಿಹಿಯಾದ ಪದಾರ್ಥಗಳನ್ನು ಸೇವನೆ ಮಾಡಬೇಕು ಎಂದು ಅನಿಸುತ್ತದೆ. ಇದನ್ನು ಕಡುಬಯಕೆಗಳು ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಹಾನಿಕಾರಕವಾದ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ ಜೊತೆಗೆ ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿಯೇ ಈ ಸಮಸ್ಯೆಗೆ ಸರಳವಾದ ಪರಿಹಾರ ಹುಡುಕುವುದು ಉತ್ತಮ.

ಪದೇ ಪದೇ ಏನಾದರೂ ತಿನ್ನಬೇಕು ಅನಿಸುತ್ತಿದ್ದರೆ ಮಾಧುರಿ ದೀಕ್ಷಿತ್ ಪತಿ ಹೇಳಿರುವ ಸರಳ ಪರಿಹಾರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 28, 2024 | 2:17 PM

Share

ಸಾಮಾನ್ಯವಾಗಿ ನಾವು ಕೆಲಸ ಮಾಡುವ ಸಮಯದಲ್ಲಿ ಅಥವಾ ಬಿಡುವವಿದ್ದಾಗ ನಮಗೆ ಏನಾದರೂ ತಿನ್ನಬೇಕು ಎನಿಸುವುದು ಸಹಜ. ಇದ್ದಕ್ಕಿದ್ದಂತೆ ಯಾವುದಾದರೂ ಆಹಾರಗಳನ್ನು ತಿನ್ನುವುದಕ್ಕೆ ಬಯಸುತ್ತೇವೆ. ಈ ಬಯಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ ಹಾಗಾಗಿ ಆಗ ಕೆಲವು ಆಹಾರಗಳನ್ನು ಸೇವನೆ ಮಾಡುತ್ತೇವೆ. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರಿಗೆ ಊಟ ಆದ ಸ್ವಲ್ಪ ಹೊತ್ತಲ್ಲೇ ಮಸಾಲೆ ಅಥವಾ ಸಿಹಿಯಾದ ಪದಾರ್ಥಗಳನ್ನು ಸೇವನೆ ಮಾಡಬೇಕು ಎಂದು ಅನಿಸುತ್ತದೆ. ಇದನ್ನು ಕಡುಬಯಕೆಗಳು ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಆರೋಗ್ಯಕ್ಕೆ ಹಾನಿಕಾರಕವಾದ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಲಾಗುತ್ತದೆ ಜೊತೆಗೆ ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿಯೇ ಈ ಸಮಸ್ಯೆಗೆ ಸರಳವಾದ ಪರಿಹಾರ ಹುಡುಕುವುದು ಉತ್ತಮ.

ಹಾಗಾಗಿಯೇ ಈ ರೀತಿ ಸಮಸ್ಯೆಗಳಿಂದ ಪಾರಾಗಲು ನಟಿ ಮಾಧುರಿ ದೀಕ್ಷಿತ್ ಅವರ ಪತಿ ಮತ್ತು ವೈದ್ಯ ಶ್ರೀರಾಮ್, ಕಡುಬಯಕೆಗಳಿಗೆ ಉತ್ತಮ ಪರಿಹಾರ ನೀಡಿದ್ದಾರೆ. ಅವರ ಪ್ರಕಾರ, ನಿಮಗೆ ಇದ್ದಕ್ಕಿದ್ದಂತೆ ಅನಾರೋಗ್ಯಕರ ಆಹಾರ ಸೇವನೆ ಮಾಡಬೇಕು ಎಂಬ ಪ್ರಚೋದನೆ ಮನಸ್ಸಿಗೆ ಬಂದರೆ ತಕ್ಷಣವೇ ಆ ಸಮಯದಲ್ಲಿ ಮತ್ತೊಂದು ಕೆಲಸ ಮಾಡಿ. ಈ ರೀತಿ ಮಾಡುವುದರಿಂದ, ನಿಮ್ಮ ಮನಸ್ಸು ಆ ಕಡುಬಯಕೆಗಳಿಂದ ಮತ್ತೊಂದು ಕೆಲಸದಲ್ಲಿ ತೊಡಗುತ್ತದೆ ಮತ್ತು ಅಲ್ಪಾವಧಿಯಲ್ಲಿ ನಿಮಗೆ ಏನಾದರೂ ತಿನ್ನಬೇಕು ಎಂಬ ಬಯಕೆ ದೂರವಾಗುತ್ತದೆ. ಈ ಅಭ್ಯಾಸಕ್ಕೆ ನೀವು ವಿಭಿನ್ನವಾಗಿ ಏನನ್ನೂ ಮಾಡುವ ಅಗತ್ಯವಿಲ್ಲ. ನೆಲ್ಲಿಕಾಯಿ ಚೂರ್ಣ ತಿನ್ನುವ ಮೂಲಕ ಅನಾರೋಗ್ಯಕರ ಆಹಾರ ತಿನ್ನುವ ಬಯಕೆಯನ್ನು ನೀಗಿಸಿಕೊಳ್ಳಬಹುದು. ಇದು ಕ್ರಮೇಣ ನಿಮಗೆ ಅಭ್ಯಾಸವಾಗುತ್ತದೆ ಬಳಿಕ ಕಡುಬಯಕೆಯನ್ನು ಕಡಿಮೆ ಮಾಡುತ್ತದೆ ಎಂದು ಡಾ. ಶ್ರೀರಾಮ್ ಹೇಳುತ್ತಾರೆ.

ಇದನ್ನೂ ಓದಿ: ಮೊಳಕೆ ಒಡೆದ ಆಲೂಗಡ್ಡೆಯನ್ನು ಎಂದಿಗೂ ತಿನ್ನಲೇಬೇಡಿ; ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಇಲ್ಲಿದೆ ವಿಡಿಯೋ :

ಮಾಧುರಿ ದೀಕ್ಷಿತ್ ಅವರ ಪತಿ ಡಾ. ಶ್ರೀರಾಮ್ ಹೃದಯ ಶಸ್ತ್ರಚಿಕಿತ್ಸಕರಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ, ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವುಗಳಲ್ಲಿ ಇದು ಒಂದಾಗಿದ್ದು ನೀವು ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ವೈದ್ಯರು ನೀಡಿರುವ ಈ ಸಲಹೆಯನ್ನು ಪಾಲಿಸಿ ಫಲಿತಾಂಶ ನೋಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ