AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ರಾಗಿ ಮುದ್ದೆ ಮಾಡಲು ಸಾಕಷ್ಟು ಸಮಯ ತಗಲುತ್ತಿದೆಯೇ ಆದ್ದರಿಂದ ಅಷ್ಟೇ ಆರೋಗ್ಯವಾದ ಈ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ

ರಾಗಿಯ ಸೇವನೆಯಿಂದ ರಕ್ತಕ್ಕೆ ಅಗತ್ಯವಿರುವಷ್ಟೇ ಪ್ರಮಾಣದಲ್ಲಿ ಸಕ್ಕರೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಹೆಚ್ಚಿನ ಗ್ಲೂಕೋಸ್ ಮಟ್ಟವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

Health Tips: ರಾಗಿ ಮುದ್ದೆ ಮಾಡಲು ಸಾಕಷ್ಟು ಸಮಯ ತಗಲುತ್ತಿದೆಯೇ ಆದ್ದರಿಂದ ಅಷ್ಟೇ ಆರೋಗ್ಯವಾದ ಈ ರೆಸಿಪಿಯನ್ನೊಮ್ಮೆ ಟ್ರೈ ಮಾಡಿ
Raagi Upma Recipe
TV9 Web
| Edited By: |

Updated on:Oct 26, 2022 | 1:11 PM

Share

 ರಾಗಿ ಮುದ್ದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದಿರುವ ವಿಷಯ. ಆದರೆ ಇಂದಿನ ಒತ್ತಡದ ಜೀವನದ ಮಧ್ಯೆ ಸುಲಭವಾಗಿ 5ರಿಂದ 10 ನಿಮಿಷದ ಒಳಗಾಗಿ ಮಾಡುವ ತಿಂಡಿಗಳತ್ತ ಜನರು ಒಲವು ಹೆಚ್ಚು.  ರಾಗಿ ಮುದ್ದೆ ಎಂದಾಕ್ಷಣ ಒಮ್ಮೆ ಬಾಯಿಯಲ್ಲಿ ನೀರೂವುದಂತು ಖಂಡಿತ. ಅದರೆ ಅದನ್ನು ತಯಾರಿಸುವುದೇ ತುಂಬ ಕಷ್ಟ ಹಾಗೂ ಸಾಕಷ್ಟು ಸಮಯ ತಗಲುವುದು ಖಂಡಿತ. ಅದಕ್ಕಾಗಿ ರಾಗಿ ಮುದ್ದೆಯಷ್ಟೇ ಆರೋಗ್ಯಕರವಾದ ಹಾಗೂ ಸುಲಭವಾಗಿ 5ರಿಂದ 10 ನಿಮಿಷದ ಒಳಗಾಗಿ ಮಾಡುವ ರಾಗಿಯ ಮತ್ತೊಂದು ರೆಸಿಪಿ ಇಲ್ಲಿದೆ.

ರಾಗಿಯ ಸೇವನೆಯಿಂದ ರಕ್ತಕ್ಕೆ ಅಗತ್ಯವಿರುವಷ್ಟೇ ಪ್ರಮಾಣದಲ್ಲಿ ಸಕ್ಕರೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಹೆಚ್ಚಿನ ಗ್ಲೂಕೋಸ್ ಮಟ್ಟವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಜೊತೆಗೆ ರಾಗಿಯಲ್ಲಿರುವ ಕರಗದ ನಾರು ಜೀರ್ಣಕ್ರಿಯೆಗೆ ಮತ್ತು ವಿಸರ್ಜನಾ ಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಪ್ರಮುಖವಾಗಿ ಕರ್ನಾಟಕದಲ್ಲಿ ಜೋಳ, ರಾಗಿ, ಗೋಧಿ ಮತ್ತು ಅಕ್ಕಿಯನ್ನು ಬಳಸಲಾಗುತ್ತದೆ. ಎಲ್ಲವೂ ತುಂಬಾ ಪೌಷ್ಠಿಕವಾಗಿರುತ್ತದೆ. ಅದರಲ್ಲೂ ರಾಗಿಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಲವಾರು ಅಧ್ಯಯನಗಳಿಂದ ತಿಳಿದು ಬಂದಿದೆ. ಅದರಲ್ಲೂ ರಾಗಿಯು ಮಕ್ಕಳಿಗೆ ತುಂಬಾ ಒಳ್ಳೆಯದು. ಇದು ತುಂಬಾ ಸುಲಭವಾಗಿ ಕರಗುವ ಕಾರಣದಿಂದ ಇದು ಸಣ್ಣ ಮಕ್ಕಳಿಗೆ ಸರಿಯಾದ ಆಹಾರವೆಂದು ಪರಿಗಣಿಸಲಾಗಿದೆ.

ರಾಗಿಯ ಸೇವನೆಯಿಂದ ರಕ್ತಕ್ಕೆ ಅಗತ್ಯವಿರುವಷ್ಟೇ ಪ್ರಮಾಣದಲ್ಲಿ ಸಕ್ಕರೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಹೆಚ್ಚಿನ ಗ್ಲೂಕೋಸ್ ಮಟ್ಟವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಜೊತೆಗೇ ರಾಗಿಯಲ್ಲಿರುವ ಕರಗದ ನಾರು ಜೀರ್ಣಕ್ರಿಯೆ ಮತ್ತು  ವಿಸರ್ಜನಾ ಕ್ರಿಯೆಯನ್ನು ಸುಲಭಗೊಳಿಸುತ್ತದೆ.

ಇದನ್ನು ಓದಿ:

ರಾಗಿ ಉಪ್ಪಿಟ್ಟು ತಯಾರಿಸುವ ವಿಧಾನ:

ಸಾಮಾನ್ಯವಾಗಿ ಮಾಡುವ ಉಪ್ಪಿಟ್ಟಿನ ರೀತಿಯಲ್ಲಿಯೇ ಇದನ್ನು ತಯಾರಿಸಬಹುದಾಗಿದ್ದು, ಆರಂಭದಲ್ಲಿ ರಾಗಿ ಹಿಟ್ಟು ಹುರಿದುಕೊಳ್ಳುವಾಗ ಎಚ್ಚರದಿಂದಿರಬೇಕು. ರಾಗಿ ಉಪ್ಪಿಟ್ಟು ಮಾಡುವ ವಿಧಾನಕ್ಕಾಗಿ ಒಂದು ಕಪ್ ಹಿಟ್ಟು,  ಒಂದು ಕಪ್ ಚಿರೋಟಿ ರವೆ, ಒಂದು ಕಪ್  ಕತ್ತರಿಸಿದ ಈರುಳ್ಳಿ, ಒಂದು ಕಪ್ ಹಸಿಮೆಣಸಿನಕಾಯಿ 4 ರಿಂದ 5, ಕರಿಬೇವು 4 ರಿಂದ 5, ಜೀರಿಗೆ, ಸಾಸಿವೆ, ಅರಿಶಿಣ, ಚಿಟಿಕೆ ಇಂಗು, ಚಿಟಿಕೆ ಉದ್ದಿನಬೇಳೆ, ಒಂದು ಟೀ ಸ್ಪೂನ್ ಕಡಲೆಬೇಳೆ, ಅರ್ಧ ಕಪ್ ಟೊಮಾಟೋ , ಕೊತ್ತಂಬರಿ ಸೊಪ್ಪು, ಗೋಡಂಬಿ: 4 ರಿಂದ 5, ಎಣ್ಣೆ ಕೊನೆಗೆ ಉಪ್ಪು ರುಚಿಗೆ ತಕ್ಕಷ್ಟು ಮೇಲೆ ತಿಳಿಸಿದ ಸಾಮಗ್ರಿ ಬಳಸಿ ಸರಳ ರುಚಿಕರ ಉಪ್ಪಿಟ್ಟು ತಯಾರಿಸಬಹುದು,

  • ಮೊದಲಿಗೆ ಒಂದು ಪಾತ್ರೆಯಲ್ಲಿ ರಾಗಿ ಹಿಟ್ಟನ್ನು ಕಡಿಮೆ ಉರಿಯಲ್ಲಿ ಚೆನ್ನಾಗಿ ಹುರಿದುಕೊಳ್ಳಬೇಕು. ಆದರೆ, ಹುರಿಯುವಾಗ ರಾಗಿ ಹಿಟ್ಟು ಕಪ್ಪು ಆಗದಂತೆ ಎಚ್ಚರ ವಹಿಸಬೇಕು. ನಂತರ ಅದೇ ಪ್ಯಾನ್‌ನಲ್ಲಿ ರವೆಯನ್ನು ಹುರಿದುಕೊಳ್ಳಬೇಕು.
  • ರವೆ ಮತ್ತು ರಾಗಿ ಹಿಟ್ಟು ಹುರಿದುಕೊಂಡ ನಂತರ ತರಕಾರಿಯನ್ನು ಕತ್ತರಿಸಿಕೊಳ್ಳಬೇಕು. ನಂತರ ದೊಡ್ಡದಾದ ಪಾತ್ರೆ ಇರಿಸಿಕೊಂಡು ಒಗ್ಗರಣೆಗೆ ಸಿದ್ಧತೆ ಮಾಡಿಕೊಂಡು ಮತ್ತೊಂದು ಪಾತ್ರೆಯಲ್ಲಿ ನೀರು ಬಿಸಿ ಮಾಡಿಕೊಳ್ಳಬೇಕು.
  • ಒಗ್ಗರಣೆಗೆ ಮೊದಲಿಗೆ ಎಣ್ಣೆ ಹಾಕಿಕೊಂಡು ಎಣ್ಣೆ ಬಿಸಿಯಾದ ನಂತರ ಸಾಸಿವೆ, ಜೀರಿಗೆ ಹಾಕಿದ ಬಳಿಕ ಕಡ್ಲೆಬೇಳೆ, ಗೋಡಂಬಿ, ಉದ್ದಿನಬೇಳೆ ಹಾಕಿ ಚೆನ್ನಾಗಿ ಪ್ರೈ ಮಾಡಿಕೊಳ್ಳಬೇಕು. ನಂತರ ಈರುಳ್ಳಿ ಹಾಕಿ ಹಸಿ ವಾಸನೆ ಹೋಗುವರೆಗೂ ಹುರಿದುಕೊಳ್ಳಬೇಕು.
  • ಬಳಿಕ ಹಸಿ ಮೆಣಸಿನಕಾಯಿ, ಕರಿಬೇವು ಸೇರಿಸಿ ಚೆನ್ನಾಗಿ ಮಿಶ್ರ ಮಾಡಿಕೊಳ್ಳಬೇಕು. ಕೊನೆಗೆ ಟೊಮಾಟೋ ಸೇರಿಸಿ ಅದು ಸಾಫ್ಟ್ ಆಗೋವರೆಗೂ ಬೇಯಿಸಿಕೊಳ್ಳಬೇಕು. ನಂತರ ಚಿಟಿಕೆ ಅರಿಶಿನ, ಉಪ್ಪು ಮತ್ತು ಇಂಗು ಸೇರಿಸಿ ಪ್ರೈ ಮಾಡಬೇಕು.
  • ಒಗ್ಗರಣೆ ಮಸಾಲೆ ಸಿದ್ಧವಾಗುತ್ತಿದ್ದಂತೆ ಮೊದಲಿಗೆ ಹುರಿದಿಟ್ಟುಕೊಂಡಿರುವ ರವೆ ಮತ್ತು ರಾಗಿ ಹಿಟ್ಟು ಸೇರಿಸಿ ಮಿಕ್ಸ್ ಮಾಡಿಕೊಳ್ಳಬೇಕು. ರವೆ ಮತ್ತು ರಾಗಿ ಮಿಕ್ಸ್ ಮಾಡುವಾಗ ಉರಿಯನ್ನು ಕಡಿಮೆ ಮಾಡಿಕೊಳ್ಳಬೇಕು, ಇಲ್ಲಾದಿದ್ದರೆ ಗಂಟು ಗಂಟು ಆಗುವ ಸಾಧ್ಯತೆಗಳಿರುತ್ತವೆ.
  • ಒಗ್ಗರಣೆ ಜೊತೆ ರವೆ ಮತ್ತು ರಾಗಿಹಿಟ್ಟು ಮಿಶ್ರಣ ಆಗುತ್ತಿದ್ದಂತೆ ನೀರು ಸೇರಿಸಿ ನಾಲ್ಕರಿಂದ ಐದು ನಿಮಿಷ ಬೇಯಿಸಬೇಕು. ಕೊನೆಗೆ ಸಿದ್ಧವಾದಲಾಗಿ ಉಪ್ಪಿಟ್ಟು ಮೇಲೆ ಕೋತಂಬರಿ ಸೊಪ್ಪು ಮತ್ತು ನಿಂಬೆ ರಸ ಸೇರಿಸಿದ್ರೆ ಉಪ್ಪಿಟ್ಟು ರೆಡಿಯಾಗುತ್ತದೆ.
  • ಸಿದ್ಧವಾದ ಉಸ್ಮಾವನ್ನು ಹಸಿ ತೆಂಗಿನಕಾಯಿ ಚಟ್ಟಿ ಅಥವಾ ಟೊಮಾಟೋ ಚಟ್ಟಿ ಜೊತೆ ಸವಿಯಬಹುದು.

(ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ಧಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:22 am, Wed, 26 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ