AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ

ಚಿಕ್ಕದೊಂದು ಜೇಡ ಕಚ್ಚಿದಷ್ಟೇ, ಆದರೆ ಆ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಕಾಲ್ಬೆರಳನ್ನೇ ಕತ್ತರಿಸಲಾಗಿದೆ. ಅಷ್ಟಕ್ಕೂ ಅಷ್ಟು ಅಪಾಯಕಾರಿಯಾದ ಜೇಡ ಯಾವುದು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ
Image Credit source: News9
ಅಕ್ಷತಾ ವರ್ಕಾಡಿ
|

Updated on: Jun 22, 2023 | 5:46 PM

Share

ಸಾಮಾನ್ಯವಾಗಿ ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಿಸುವವರೇ ಹೆಚ್ಚು. ಆದರೆ ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಹೆಚ್ಚಿನ ಅಪಾಯವನ್ನು ಹೊಂದಿರುತ್ತವೆ. ಸಾಮಾನ್ಯವಾಗಿ ಜೇಡ ಕಚ್ಚಿದ ಭಾಗದಲ್ಲಿ ಕೊಂಚ ಕೆಂಪಗಾಗುವುದು, ಊದಿಕೊಳ್ಳುವುದು ಹಾಗೂ ನೋವು ಇರುವುದು ಮೊದಲಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಹೀಗೆಂದು ಅದನ್ನು ನಿರ್ಲಕ್ಷ್ಯಿಸದಿರಿ. ಯಾಕೆಂದರೆ ಪ್ರಾಣದ ಮೇಲೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ 60 ವರ್ಷ ವಯಸ್ಸಿನ ವ್ಯಕ್ತಿಗೆ ವಿಡೋ ಎಂಬ ಜಾತಿಯ ಜೇಡವೊಂದು ಕಚ್ಚಿದ್ದು, ಕೆಲ ದಿನಗಳಲ್ಲಿ ಆತನ ಕಾಲ್ಬೆರಳುಗಳನ್ನು ಕತ್ತರಿಸಿ ತೆಗೆಯಲಾಗಿದೆ.

ಏನಿದು ಘಟನೆ:

ವ್ಯಕ್ತಿಯ ಚಪ್ಪಲಿಯ ಮೇಲೆ ಜೇಡವೊಂದು ಹರಿದಾಡುತ್ತಿರುವುದನ್ನು ಕಂಡಿದ್ದಾನೆ. ಆದರೆ ಅದು ಕಚ್ಚಿದ್ದು, ಸೂಜಿ ಚುಚ್ಚಿದ್ದಂತೆ ಅನುಭವವಾಗಿದ್ದು, ಆತ ಅದನ್ನು ನಿರ್ಲಕ್ಷ್ಯಿಸಿದ್ದಾನೆ. ಕೆಲವು ಗಂಟೆಗಳ ನಂತರ ಕಾಲನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿದ್ದಾನೆ. ಒಂದು ವಾರದ ನಂತರ ಕಾಲಿನಲ್ಲಿ ಗುಳ್ಳೆಗಳು ಉಂಟಾಗಿದ್ದು, ಕಾಲ್ಬೆರಳು ಕೊಳೆಯಲು ಪ್ರಾರಂಭವಾಗಿದೆ. ಕೊನೆಗೆ ನಡಿಯಲು ಸಾಧ್ಯವಾಗದೇ ಇದ್ದಾಗ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಆತನ ಕಾಲ್ಬೆರಳುಗಳನ್ನೇ ಕತ್ತರಿಸಿ ತೆಗೆದಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ಏನಿದು ವಿಡೋ ಸ್ಪೈಡರ್​​?

ಈ ಜೇಡವು ಸಾಮಾನ್ಯವಾಗಿ ಕೆನಡಾ ಮತ್ತು ಉತ್ತರ ಅಮೆರಿಕಾ ಕಂಡುಬರುವ ಜೇಡವಾಗಿದೆ. ಇದು ಕಡು ನೀಲಿ ಬಣ್ಣದ್ದಾಗಿದ್ದು, ಇದರ ವಿಷವು ಹಾವಿನಷ್ಟೇ ಅಪಾಯಕಾರಿ ಎಂದು ಹೇಳಲಾಗುತ್ತದೆ.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ:

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!