AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ

ಚಿಕ್ಕದೊಂದು ಜೇಡ ಕಚ್ಚಿದಷ್ಟೇ, ಆದರೆ ಆ ವ್ಯಕ್ತಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಕಾಲ್ಬೆರಳನ್ನೇ ಕತ್ತರಿಸಲಾಗಿದೆ. ಅಷ್ಟಕ್ಕೂ ಅಷ್ಟು ಅಪಾಯಕಾರಿಯಾದ ಜೇಡ ಯಾವುದು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.

ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಬೇಡ; ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಅಪಾಯಕಾರಿ
Image Credit source: News9
ಅಕ್ಷತಾ ವರ್ಕಾಡಿ
|

Updated on: Jun 22, 2023 | 5:46 PM

Share

ಸಾಮಾನ್ಯವಾಗಿ ಜೇಡ ಕಚ್ಚಿತ್ತೆಂದರೆ ನಿರ್ಲಕ್ಷ್ಯಿಸುವವರೇ ಹೆಚ್ಚು. ಆದರೆ ಕೆಲವು ಜಾತಿಯ ಜೇಡಗಳು ಹಾವಿಗಿಂತಲೂ ಹೆಚ್ಚಿನ ಅಪಾಯವನ್ನು ಹೊಂದಿರುತ್ತವೆ. ಸಾಮಾನ್ಯವಾಗಿ ಜೇಡ ಕಚ್ಚಿದ ಭಾಗದಲ್ಲಿ ಕೊಂಚ ಕೆಂಪಗಾಗುವುದು, ಊದಿಕೊಳ್ಳುವುದು ಹಾಗೂ ನೋವು ಇರುವುದು ಮೊದಲಾದ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಹೀಗೆಂದು ಅದನ್ನು ನಿರ್ಲಕ್ಷ್ಯಿಸದಿರಿ. ಯಾಕೆಂದರೆ ಪ್ರಾಣದ ಮೇಲೆ ಕುತ್ತು ತರುವ ಸಾಧ್ಯತೆ ಹೆಚ್ಚಿದೆ. ಇದಕ್ಕೊಂದು ಉತ್ತಮ ನಿದರ್ಶನವೆಂಬಂತೆ 60 ವರ್ಷ ವಯಸ್ಸಿನ ವ್ಯಕ್ತಿಗೆ ವಿಡೋ ಎಂಬ ಜಾತಿಯ ಜೇಡವೊಂದು ಕಚ್ಚಿದ್ದು, ಕೆಲ ದಿನಗಳಲ್ಲಿ ಆತನ ಕಾಲ್ಬೆರಳುಗಳನ್ನು ಕತ್ತರಿಸಿ ತೆಗೆಯಲಾಗಿದೆ.

ಏನಿದು ಘಟನೆ:

ವ್ಯಕ್ತಿಯ ಚಪ್ಪಲಿಯ ಮೇಲೆ ಜೇಡವೊಂದು ಹರಿದಾಡುತ್ತಿರುವುದನ್ನು ಕಂಡಿದ್ದಾನೆ. ಆದರೆ ಅದು ಕಚ್ಚಿದ್ದು, ಸೂಜಿ ಚುಚ್ಚಿದ್ದಂತೆ ಅನುಭವವಾಗಿದ್ದು, ಆತ ಅದನ್ನು ನಿರ್ಲಕ್ಷ್ಯಿಸಿದ್ದಾನೆ. ಕೆಲವು ಗಂಟೆಗಳ ನಂತರ ಕಾಲನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿದ್ದಾನೆ. ಒಂದು ವಾರದ ನಂತರ ಕಾಲಿನಲ್ಲಿ ಗುಳ್ಳೆಗಳು ಉಂಟಾಗಿದ್ದು, ಕಾಲ್ಬೆರಳು ಕೊಳೆಯಲು ಪ್ರಾರಂಭವಾಗಿದೆ. ಕೊನೆಗೆ ನಡಿಯಲು ಸಾಧ್ಯವಾಗದೇ ಇದ್ದಾಗ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಆತನ ಕಾಲ್ಬೆರಳುಗಳನ್ನೇ ಕತ್ತರಿಸಿ ತೆಗೆದಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ಏನಿದು ವಿಡೋ ಸ್ಪೈಡರ್​​?

ಈ ಜೇಡವು ಸಾಮಾನ್ಯವಾಗಿ ಕೆನಡಾ ಮತ್ತು ಉತ್ತರ ಅಮೆರಿಕಾ ಕಂಡುಬರುವ ಜೇಡವಾಗಿದೆ. ಇದು ಕಡು ನೀಲಿ ಬಣ್ಣದ್ದಾಗಿದ್ದು, ಇದರ ವಿಷವು ಹಾವಿನಷ್ಟೇ ಅಪಾಯಕಾರಿ ಎಂದು ಹೇಳಲಾಗುತ್ತದೆ.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ:

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ