Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ

ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ
Follow us
|

Updated on: Apr 15, 2023 | 6:26 AM

ಬೇಸಿಗೆ ಪ್ರಾರಂಭವಾಗಿದೆ, ಜೊತೆಗೆ ಇದು ಮಾವಿನ ಹಣ್ಣಿನ ಸೀಸನ್​​ ಕೂಡ ಹೌದು. ಮನೆಯಲ್ಲೊಂದು ಮಾವಿನ ಹಣ್ಣಿದ್ದರೆ ಇಡೀ ಮನೆಯೇ ಅದರ ಸುವಾಸನೆಯಿಂದಲೇ ಕೂಡಿರುತ್ತದೆ. ಜೊತೆಗೆ ಬಾಯಲ್ಲಿ ನೀರುರಿಸುವುದಂತೂ ಖಂಡಿತಾ. ಆದರೆ ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

ದೆಹಲಿಯ ಪ್ರೈಮಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರೋಗ್ಯ ತಜ್ಞರಾದ ಅಂಕಿತಾ ಘೋಷಾಲ್ ನೀಡಿರುವ ಮಾಹಿತಿ ಇಲ್ಲಿದೆ. ಮಧುಮೇಹಿಗಳು ಮಾವಿನ ಹಣ್ಣನ್ನು ಮಿತವಾಗಿ ಸೇವಿಸಿ, ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸಿ ಎಂದು ಆಹಾರ ತಜ್ಞರು ಹೇಳುತ್ತಾರೆ. ನೀವು ಖಾಲಿ ಮಾವಿನ ಹಣ್ಣನ್ನು ಸೇವಿಸುವ ಬದಲಾಗಿ ಸಲಾಡ್‌, ಮೊಸರಿನೊಂದಿಗೆ ಸೇವಿಸಿ ಎಂದು ಅಂಕಿತಾ ಘೋಷಾಲ್ ಹೇಳುತ್ತಾರೆ. ಮಾವಿನಹಣ್ಣಿನಲ್ಲಿರುವ ಕರಗುವ ಮತ್ತು ಕರಗದ ನಾರುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ನಾರುಗಳು ದೇಹದಲ್ಲಿನ ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಮೇಲೆ ಕನಿಷ್ಠ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಹೊಟ್ಟೆ ಉಬ್ಬರಕ್ಕೆ ಈ 5 ಆಹಾರಗಳು ಕಾರಣ; ಇವುಗಳನ್ನು ಮಿತವಾಗಿ ಸೇವಿಸಿ

ನೀವು ಮಧುಮೇಹಿಯಾಗಿರಲಿ ಅಥವಾ ಮಧುಮೇಹ ಪೂರ್ವದವರಾಗಿರಲಿ, ಮಾವಿನಹಣ್ಣನ್ನು ಸೇವಿಸುವಾಗ ಕೆಲವು ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಆಹಾರ ತಜ್ಞ ಅಂಕಿತಾ ಘೋಷಾಲ್ ಅವರು ಈ ಕೆಳಗಿನ ಸಲಹೆಗಳನ್ನು ನೀಡಿದ್ದಾರೆ.

  • ಮಾವಿನಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ ಅರ್ಧ ಕಪ್ ಅಥವಾ ಒಂದು ಕಪ್‌ಗೆ ಮಿತಿಗೊಳಿಸಿ.
  • ಕಡಿಮೆ ಗ್ಲೈಸೆಮಿಕ್ ಹೊಂದಿರುವ ಮಾವಿನಹಣ್ಣುಗಳನ್ನು ಆರಿಸಿಕೊಳ್ಳಿ.
  • ಮಾವಿನಹಣ್ಣನ್ನು ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಎಷ್ಟಿದೆ ಎಂದು ತಿಳಿದಿಕೊಳ್ಳಿ.

ಮಧುಮೇಹಿಗಳೇ ಈ ತಪ್ಪು ಮಾಡದಿರಿ:

  • ಮಾವಿನ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಿ ಏಕೆಂದರೆ ಅವುಗಳು ಹೆಚ್ಚಿನ ಸಕ್ಕರೆಯನ್ನು ಹೊಂದಿರುತ್ತವೆ.
  • ಮಾವಿನಹಣ್ಣಿನ ರಸ ಅಥವಾ ಸ್ಮೂಥಿಗಳಿಂದ ದೂರವಿರಿ ಏಕೆಂದರೆ ಅವುಗಳು ಸೇರಿಸಿದ ಸಕ್ಕರೆಗಳನ್ನು ಹೊಂದಿರಬಹುದು.
  • ಈಗಾಗಲೇ ಕಾರ್ಬೋಹೈಡ್ರೇಟ್‌ಗಳು ಹೆಚ್ಚಿರುವ ಊಟದೊಂದಿಗೆ ಮಾವಿನಹಣ್ಣನ್ನು ಸೇವಿಸುವುದನ್ನು ತಪ್ಪಿಸಿ.
  • ದ್ರಾಕ್ಷಿಗಳು, ಬಾಳೆಹಣ್ಣುಗಳು ಅಥವಾ ಚೆರ್ರಿಗಳಂತಹ ಹೆಚ್ಚಿನ ಸಕ್ಕರೆಯ ಹಣ್ಣುಗಳೊಂದಿಗೆ ಮಾವಿನಹಣ್ಣುಗಳನ್ನು ಸೇವಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ