AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ

ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಅಕ್ಷತಾ ವರ್ಕಾಡಿ
|

Updated on: Apr 15, 2023 | 6:26 AM

Share

ಬೇಸಿಗೆ ಪ್ರಾರಂಭವಾಗಿದೆ, ಜೊತೆಗೆ ಇದು ಮಾವಿನ ಹಣ್ಣಿನ ಸೀಸನ್​​ ಕೂಡ ಹೌದು. ಮನೆಯಲ್ಲೊಂದು ಮಾವಿನ ಹಣ್ಣಿದ್ದರೆ ಇಡೀ ಮನೆಯೇ ಅದರ ಸುವಾಸನೆಯಿಂದಲೇ ಕೂಡಿರುತ್ತದೆ. ಜೊತೆಗೆ ಬಾಯಲ್ಲಿ ನೀರುರಿಸುವುದಂತೂ ಖಂಡಿತಾ. ಆದರೆ ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

ದೆಹಲಿಯ ಪ್ರೈಮಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರೋಗ್ಯ ತಜ್ಞರಾದ ಅಂಕಿತಾ ಘೋಷಾಲ್ ನೀಡಿರುವ ಮಾಹಿತಿ ಇಲ್ಲಿದೆ. ಮಧುಮೇಹಿಗಳು ಮಾವಿನ ಹಣ್ಣನ್ನು ಮಿತವಾಗಿ ಸೇವಿಸಿ, ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸಿ ಎಂದು ಆಹಾರ ತಜ್ಞರು ಹೇಳುತ್ತಾರೆ. ನೀವು ಖಾಲಿ ಮಾವಿನ ಹಣ್ಣನ್ನು ಸೇವಿಸುವ ಬದಲಾಗಿ ಸಲಾಡ್‌, ಮೊಸರಿನೊಂದಿಗೆ ಸೇವಿಸಿ ಎಂದು ಅಂಕಿತಾ ಘೋಷಾಲ್ ಹೇಳುತ್ತಾರೆ. ಮಾವಿನಹಣ್ಣಿನಲ್ಲಿರುವ ಕರಗುವ ಮತ್ತು ಕರಗದ ನಾರುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ನಾರುಗಳು ದೇಹದಲ್ಲಿನ ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಮೇಲೆ ಕನಿಷ್ಠ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಹೊಟ್ಟೆ ಉಬ್ಬರಕ್ಕೆ ಈ 5 ಆಹಾರಗಳು ಕಾರಣ; ಇವುಗಳನ್ನು ಮಿತವಾಗಿ ಸೇವಿಸಿ

ನೀವು ಮಧುಮೇಹಿಯಾಗಿರಲಿ ಅಥವಾ ಮಧುಮೇಹ ಪೂರ್ವದವರಾಗಿರಲಿ, ಮಾವಿನಹಣ್ಣನ್ನು ಸೇವಿಸುವಾಗ ಕೆಲವು ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಆಹಾರ ತಜ್ಞ ಅಂಕಿತಾ ಘೋಷಾಲ್ ಅವರು ಈ ಕೆಳಗಿನ ಸಲಹೆಗಳನ್ನು ನೀಡಿದ್ದಾರೆ.

  • ಮಾವಿನಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ ಅರ್ಧ ಕಪ್ ಅಥವಾ ಒಂದು ಕಪ್‌ಗೆ ಮಿತಿಗೊಳಿಸಿ.
  • ಕಡಿಮೆ ಗ್ಲೈಸೆಮಿಕ್ ಹೊಂದಿರುವ ಮಾವಿನಹಣ್ಣುಗಳನ್ನು ಆರಿಸಿಕೊಳ್ಳಿ.
  • ಮಾವಿನಹಣ್ಣನ್ನು ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಎಷ್ಟಿದೆ ಎಂದು ತಿಳಿದಿಕೊಳ್ಳಿ.

ಮಧುಮೇಹಿಗಳೇ ಈ ತಪ್ಪು ಮಾಡದಿರಿ:

  • ಮಾವಿನ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಿ ಏಕೆಂದರೆ ಅವುಗಳು ಹೆಚ್ಚಿನ ಸಕ್ಕರೆಯನ್ನು ಹೊಂದಿರುತ್ತವೆ.
  • ಮಾವಿನಹಣ್ಣಿನ ರಸ ಅಥವಾ ಸ್ಮೂಥಿಗಳಿಂದ ದೂರವಿರಿ ಏಕೆಂದರೆ ಅವುಗಳು ಸೇರಿಸಿದ ಸಕ್ಕರೆಗಳನ್ನು ಹೊಂದಿರಬಹುದು.
  • ಈಗಾಗಲೇ ಕಾರ್ಬೋಹೈಡ್ರೇಟ್‌ಗಳು ಹೆಚ್ಚಿರುವ ಊಟದೊಂದಿಗೆ ಮಾವಿನಹಣ್ಣನ್ನು ಸೇವಿಸುವುದನ್ನು ತಪ್ಪಿಸಿ.
  • ದ್ರಾಕ್ಷಿಗಳು, ಬಾಳೆಹಣ್ಣುಗಳು ಅಥವಾ ಚೆರ್ರಿಗಳಂತಹ ಹೆಚ್ಚಿನ ಸಕ್ಕರೆಯ ಹಣ್ಣುಗಳೊಂದಿಗೆ ಮಾವಿನಹಣ್ಣುಗಳನ್ನು ಸೇವಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!