AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ

ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

Summer Health Tips: ಮಧುಮೇಹಿಗಳು ಮಾವಿನ ಹಣ್ಣು ತಿನ್ನಬಹುದೇ? ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಅಕ್ಷತಾ ವರ್ಕಾಡಿ
|

Updated on: Apr 15, 2023 | 6:26 AM

Share

ಬೇಸಿಗೆ ಪ್ರಾರಂಭವಾಗಿದೆ, ಜೊತೆಗೆ ಇದು ಮಾವಿನ ಹಣ್ಣಿನ ಸೀಸನ್​​ ಕೂಡ ಹೌದು. ಮನೆಯಲ್ಲೊಂದು ಮಾವಿನ ಹಣ್ಣಿದ್ದರೆ ಇಡೀ ಮನೆಯೇ ಅದರ ಸುವಾಸನೆಯಿಂದಲೇ ಕೂಡಿರುತ್ತದೆ. ಜೊತೆಗೆ ಬಾಯಲ್ಲಿ ನೀರುರಿಸುವುದಂತೂ ಖಂಡಿತಾ. ಆದರೆ ನೀವು ಮಧುಮೇಹಿಗಳಾಗಿದ್ದು, ಮಾವಿನ ಹಣ್ಣು ತಿಂದರೆ, ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಚಿಂತೆಯೇ? ಹಾಗಿದ್ದರೆ ನಿಮ್ಮೆಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಉತ್ತರ ಇಲ್ಲಿದೆ.

ದೆಹಲಿಯ ಪ್ರೈಮಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರೋಗ್ಯ ತಜ್ಞರಾದ ಅಂಕಿತಾ ಘೋಷಾಲ್ ನೀಡಿರುವ ಮಾಹಿತಿ ಇಲ್ಲಿದೆ. ಮಧುಮೇಹಿಗಳು ಮಾವಿನ ಹಣ್ಣನ್ನು ಮಿತವಾಗಿ ಸೇವಿಸಿ, ನಿಮ್ಮ ಆಹಾರ ಕ್ರಮದಲ್ಲಿ ಜೋಡಿಸಿ ಎಂದು ಆಹಾರ ತಜ್ಞರು ಹೇಳುತ್ತಾರೆ. ನೀವು ಖಾಲಿ ಮಾವಿನ ಹಣ್ಣನ್ನು ಸೇವಿಸುವ ಬದಲಾಗಿ ಸಲಾಡ್‌, ಮೊಸರಿನೊಂದಿಗೆ ಸೇವಿಸಿ ಎಂದು ಅಂಕಿತಾ ಘೋಷಾಲ್ ಹೇಳುತ್ತಾರೆ. ಮಾವಿನಹಣ್ಣಿನಲ್ಲಿರುವ ಕರಗುವ ಮತ್ತು ಕರಗದ ನಾರುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ನಾರುಗಳು ದೇಹದಲ್ಲಿನ ಸಕ್ಕರೆ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಮೇಲೆ ಕನಿಷ್ಠ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಹೊಟ್ಟೆ ಉಬ್ಬರಕ್ಕೆ ಈ 5 ಆಹಾರಗಳು ಕಾರಣ; ಇವುಗಳನ್ನು ಮಿತವಾಗಿ ಸೇವಿಸಿ

ನೀವು ಮಧುಮೇಹಿಯಾಗಿರಲಿ ಅಥವಾ ಮಧುಮೇಹ ಪೂರ್ವದವರಾಗಿರಲಿ, ಮಾವಿನಹಣ್ಣನ್ನು ಸೇವಿಸುವಾಗ ಕೆಲವು ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಆಹಾರ ತಜ್ಞ ಅಂಕಿತಾ ಘೋಷಾಲ್ ಅವರು ಈ ಕೆಳಗಿನ ಸಲಹೆಗಳನ್ನು ನೀಡಿದ್ದಾರೆ.

  • ಮಾವಿನಹಣ್ಣನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿ ಅರ್ಧ ಕಪ್ ಅಥವಾ ಒಂದು ಕಪ್‌ಗೆ ಮಿತಿಗೊಳಿಸಿ.
  • ಕಡಿಮೆ ಗ್ಲೈಸೆಮಿಕ್ ಹೊಂದಿರುವ ಮಾವಿನಹಣ್ಣುಗಳನ್ನು ಆರಿಸಿಕೊಳ್ಳಿ.
  • ಮಾವಿನಹಣ್ಣನ್ನು ಸೇವಿಸಿದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಎಷ್ಟಿದೆ ಎಂದು ತಿಳಿದಿಕೊಳ್ಳಿ.

ಮಧುಮೇಹಿಗಳೇ ಈ ತಪ್ಪು ಮಾಡದಿರಿ:

  • ಮಾವಿನ ಹಣ್ಣನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದನ್ನು ತಪ್ಪಿಸಿ ಏಕೆಂದರೆ ಅವುಗಳು ಹೆಚ್ಚಿನ ಸಕ್ಕರೆಯನ್ನು ಹೊಂದಿರುತ್ತವೆ.
  • ಮಾವಿನಹಣ್ಣಿನ ರಸ ಅಥವಾ ಸ್ಮೂಥಿಗಳಿಂದ ದೂರವಿರಿ ಏಕೆಂದರೆ ಅವುಗಳು ಸೇರಿಸಿದ ಸಕ್ಕರೆಗಳನ್ನು ಹೊಂದಿರಬಹುದು.
  • ಈಗಾಗಲೇ ಕಾರ್ಬೋಹೈಡ್ರೇಟ್‌ಗಳು ಹೆಚ್ಚಿರುವ ಊಟದೊಂದಿಗೆ ಮಾವಿನಹಣ್ಣನ್ನು ಸೇವಿಸುವುದನ್ನು ತಪ್ಪಿಸಿ.
  • ದ್ರಾಕ್ಷಿಗಳು, ಬಾಳೆಹಣ್ಣುಗಳು ಅಥವಾ ಚೆರ್ರಿಗಳಂತಹ ಹೆಚ್ಚಿನ ಸಕ್ಕರೆಯ ಹಣ್ಣುಗಳೊಂದಿಗೆ ಮಾವಿನಹಣ್ಣುಗಳನ್ನು ಸೇವಿಸಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!