AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meat Side Effects: ಕೆಂಪು ಮಾಂಸವು ನಿಮ್ಮ ಮೂಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು

ಮಾಂಸವು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ತುಂಬಿರುವ ಆರೋಗ್ಯಕರ ಆಹಾರದ ಮೂಲವಾಗಿದೆ. ಆದರೆ ಇದರ ಅತಿಯಾದ ಸೇವನೆ, ಕೆಂಪು ಮಾಂಸ ಹಾಗೂ ಸಂಸ್ಕರಿಸಿದ ಮಾಂಸದ ಸೇವನೆಯನ್ನು ಕಡಿಮೆ ಮಾಡಲು ವೈದ್ಯಕೀಯ ವೃತ್ತಿಪರರು ಸಲಹೆ ನೀಡುತ್ತಾರೆ.

Meat Side Effects: ಕೆಂಪು ಮಾಂಸವು ನಿಮ್ಮ ಮೂಳೆಯ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 21, 2023 | 8:05 AM

ಅತಿಯಾದ ಕೊಲೆಸ್ಟಾಲ್, ಹೃದ್ರೋಗ, ಮೂತ್ರಪಿಂಡದ ಕಾಯಿಲೆ ಹಾಗೂ ಮೂಳೆಯ ಸಮಸ್ಯೆಯಿರುವವರಿಗೆ ಮಾಂಸದ ಸೇವನೆಯನ್ನು ತಪ್ಪಿಸುವಂತೆ ತಜ್ಞರು ಸಲಹೆ ನೀಡುತ್ತಾರೆ. ಮಾಂಸವು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ತುಂಬಿರುವ ಆರೋಗ್ಯಕರ ಆಹಾರದ ಮೂಲವಾಗಿದೆ. ಆದರೆ ಇದರ ಅತಿಯಾದ ಸೇವನೆ, ಕೆಂಪು ಮಾಂಸ ಹಾಗೂ ಸಂಸ್ಕರಿಸಿದ ಮಾಂಸದ ಸೇವನೆಯನ್ನು ಕಡಿಮೆ ಮಾಡಲು ವೈದ್ಯಕೀಯ ವೃತ್ತಿಪರರು ಸಲಹೆ ನೀಡುತ್ತಾರೆ. ಕೆಲವು ಮಾಂಸಗಳಲ್ಲಿ ಸ್ಯಾಚುರೇಟೆಡ್ ಕೊಬ್ಬು ಹೇರಳವಾಗಿರುವುದರಿಂದ ಇದು ಕೊಲೆಸ್ಟಾಲ್ ಮಟ್ಟವನ್ನು ಹೆಚ್ಚಿಸಬಹುದು. ಹಾಗೂ ಅಧಿಕ ಕೊಲೆಸ್ಟಾಲ್ ಹೊಂದಿರುವವರಲ್ಲಿ ಹೃದಯದ ಆಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.

ಪ್ರಾಣಿ ಪ್ರೋಟೀನ್ ವಿಶೇಷವಾಗಿ ಕೆಂಪು ಮಾಂಸವು ಆರೋಗ್ಯಕರ ಮೂಳೆಗಳಿಗೆ ಅಗತ್ಯವಾಗಿದ್ದರೂ, ಅದರ ಅಧಿಕ ಸೇವನೆಯು ಮೂಳೆಗಳಿಗೆ ಹಾನಿಕಾರಕವಾಗಬಹುದು. ನಿಮ್ಮ ಆಹಾರದಲ್ಲಿ ಡೈರಿ, ಮೀನು, ಚಿಕನ್ ಮತ್ತು ಸಸ್ಯ ಆಧಾರಿತ ಪ್ರೋಟೀನ್‌ಗಳ ಮೂಲವನ್ನು ಸಮಾನವಾಗಿ ಸೇರಿಸಿಕೊಳ್ಳಿ. ಹಾಗೂ ಸಾಕಷ್ಟು ಹಣ್ಣುಗಳು, ತರಕಾರಿಗಳು ಹಾಗೂ ಧಾನ್ಯಗಳನ್ನು ಸೇವಿಸುವ ಮೂಲಕ ಅವುಗಳನ್ನು ಸಮತೋಲದಲ್ಲಿರಿಸಬೇಕು ಎಂದು ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ ಹೇಳುತ್ತಾರೆ.

ಪ್ರತಿದಿನ ಮಾಂಸ ಸೇವಿಸುವುದರಿಂದ ಮೂಳೆಗಳ ಮೇಲಾಗುವ ಅಡ್ಡ ಪರಿಣಾಮ:

ಹೆಚ್ಚಿನ ಪ್ರೋಟೀನ್ ಆಹಾರ, ವಿಶೇಷವಾಗಿ ಪ್ರಾಣಿ ಮೂಲಗಳ ಆಹಾರವು ಕ್ಯಾಲ್ಸಿಯಂ ನಷ್ಟಕ್ಕೆ ಕಾರಣವಾಗಬಹುದು ಹಾಗೂ ಮೂಳೆಯ ಆರೋಗ್ಯಕ್ಕೆ ಹಾನಿಯಾಗಬಹುದು. ಪ್ರಾಣಿ ಪ್ರೋಟೀನ್ ವಿಶೇಷವಾಗಿ ಕೆಂಪು ಮಾಂಸವನ್ನು ಸೇವಿಸುವುದರಿಂದ ಅದು ರಕ್ತದ ಆಮ್ಲೀಯತೆಗೆ ಕಾರಣವಾಗಬಹುದು. ಮತ್ತು ಇದು ಮೂಳೆಗಳಿಂದ ಕ್ಯಾಲ್ಸಿಯಂನ್ನು ತೆಗೆದುಹಾಕಬಹುದು.

ಇದನ್ನೂ ಓದಿ: Health Tips: ನವಜಾತ ಶಿಶುಗಳ ಆರೈಕೆಗೆ ಸಂಬಂಧಿಸಿದ ಸತ್ಯ, ಮಿಥ್ಯ ಅಂಶಗಳಾವುವು?

ಮಾಂಸವು ಹೆಚ್ಚಿನ ಫಾಸ್ಪರಸ್ ಕ್ಯಾಲ್ಸಿಯಂ ಅನುಪಾತವನ್ನು ಹೊಂದಿದೆ. ಇದು ಕ್ಯಾಲ್ಸಿಯಂ ವಿಸರ್ಜನೆಯನ್ನು ಹೆಚ್ಚಿಸುತ್ತದೆ. ಇದು ಮೂಳೆಯ ಖನಿಜೀಕರಣಕ್ಕೆ ಕಾರಣವಾಗಬಹುದು.

ಬೀನ್ಸ್, ಬೇಳೆಕಾಳುಗಳು, ತರಕಾರಿಗಳು, ಪೌಷ್ಟಿಕ ಧಾನ್ಯಗಳು ಮುಂತಾದ ಸಸ್ಯಾಧಾರಿತ ಪ್ರೋಟೀನ್‌ಗಳನ್ನು ಸೇವಿಸುವ ಮೂಲಕ ಮಾಂಸದ ಸೇವನೆಯನ್ನು ಕಡಿಮೆ ಮಾಡಬೇಕು. ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸಬೇಕು.

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು