AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!

ಔಷಧಿ ತೆಗೆದುಕೊಳ್ಳುವಾಗ ಅನೇಕ ರೀತಿಯ ತಪ್ಪುಗಳನ್ನು ತಿಳಿದೋ ತಿಳಿಯದೆಯೋ ಪದೇ ಪದೇ ಮಾಡಲಾಗುತ್ತದೆ. ಇದು ಮುಂದೆ ನಮ್ಮ ಆರೋಗ್ಯವನ್ನೇ ಹಾಳು ಮಾಡುವ ಮಟ್ಟಕ್ಕೆ ಬರಬಹುದು. ಅನಾರೋಗ್ಯವನ್ನು ಕಡಿಮೆ ಮಾಡಲು ಔಷಧವು ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಅದನ್ನು ತೆಗೆದುಕೊಳ್ಳುವಾಗ ಮಾಡುವ ತಪ್ಪು, ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಾಗಾಗಿ ಔಷಧಿ ತೆಗೆದುಕೊಳ್ಳುವಾಗ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ಆರೋಗ್ಯ ತಜ್ಞರಿಂದ ತಿಳಿದುಕೊಳ್ಳಿ.

ಔಷಧಿ ತೆಗೆದುಕೊಳ್ಳುವಾಗ ಮಾಡುವ ಈ 3 ತಪ್ಪುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಚ್ಚರ!
Medication SafetyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 27, 2026 | 6:40 PM

Share

ಅನಾರೋಗ್ಯ ಬಂದಾಗ ಔಷಧಿ (Medicine) ನಮ್ಮ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಔಷಧಿ ಸೇವಿಸುವ ವಿಧಾನದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳು ಆರೋಗ್ಯಕ್ಕೆ ಹಾನಿ ಉಂಟುಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ವಿಶೇಷವಾಗಿ ಸ್ವಯಂ ಔಷಧಿ ಸೇವನೆ, ಡೋಸ್ ಮಧ್ಯದಲ್ಲಿ ನಿಲ್ಲಿಸುವುದು ಮತ್ತು ವೈದ್ಯರ ಸಲಹೆ ಇಲ್ಲದೆ ಔಷಧಿ ಬದಲಾಯಿಸುವುದು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಹೌದು, ಇದನ್ನು ನಾವು ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುತ್ತೇವೆ ಆದರೆ ಘಾಜಿಯಾಬಾದ್ ಜಿಲ್ಲಾ ಆಸ್ಪತ್ರೆಯ ಫಾರ್ಮಾಸಿಸ್ಟ್ ನರೇಂದ್ರ ಕುಮಾರ್ ಶರ್ಮಾ ಅವರು ಈ ರೀತಿ ಮಾಡುವುದು ತುಂಬಾ ತಪ್ಪು ಇದು ನಮ್ಮ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ಹೇಳುತ್ತಾರೆ. ಅವರ ಪ್ರಕಾರ, ಆಂಟಿಬಯೋಟಿಕ್ ಔಷಧಿಗಳನ್ನು ಸರಿಯಾಗಿ ಬಳಸದಿರುವುದರಿಂದ ಮುಂದಿನ ದಿನಗಳಲ್ಲಿ ಅವು ಪರಿಣಾಮಕಾರಿಯಾಗದೇ ಹೋಗುವ ಸಾಧ್ಯತೆ ಇದೆ. ಇದನ್ನೇ “ಸೂಪರ್‌ಬಗ್” ಪರಿಸ್ಥಿತಿ ಎಂದು ಕರೆಯಲಾಗುತ್ತದೆ. ಹಾಗಾದರೆ ಔಷಧಿ ಸೇವನೆ ಮಾಡುವಾಗ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳಿ.

ಜನರು ಸಾಮಾನ್ಯವಾಗಿ ಮಾಡುವ ದೊಡ್ಡ ತಪ್ಪುಗಳು:

ವೈದ್ಯರ ಸಲಹೆ ಇಲ್ಲದೆ ಔಷಧಿ ಸೇವನೆ

ಜ್ವರ, ಶೀತ ಅಥವಾ ಕೆಮ್ಮು ಬಂದಾಗ ಹಲವರು ತಮ್ಮ ಇಷ್ಟಕ್ಕೆ ತಾವೇ ಔಷಧಿ ತೆಗೆದುಕೊಳ್ಳುತ್ತಾರೆ. ವಿಶೇಷವಾಗಿ ಮಕ್ಕಳಲ್ಲಿ ಈ ತಪ್ಪು ಹೆಚ್ಚಾಗಿ ಕಂಡುಬರುತ್ತದೆ. ಇದು ದೇಹದ ಮೇಲೆ ದುಷ್ಪರಿಣಾಮ ಉಂಟುಮಾಡಬಹುದು.

ಔಷಧಿ ಕೋರ್ಸ್ ಪೂರ್ಣಗೊಳಿಸದೇ ನಿಲ್ಲಿಸುವುದು

ಸ್ವಲ್ಪ ಆರೋಗ್ಯ ಸುಧಾರಿಸಿದ ತಕ್ಷಣ ಕೆಲವರು ಆಂಟಿಬಯೋಟಿಕ್ ಸೇವನೆ ನಿಲ್ಲಿಸುತ್ತಾರೆ. ಇದರಿಂದ ಸೋಂಕು ಸಂಪೂರ್ಣವಾಗಿ ಹೋಗದೆ ಮತ್ತೆ ತೀವ್ರವಾಗುವ ಸಾಧ್ಯತೆ ಹೆಚ್ಚುತ್ತದೆ.

ಸಮಯಕ್ಕೆ ಸರಿಯಾಗಿ ಔಷಧಿ ಸೇವಿಸದಿರುವುದು

ಕೆಲವರು ಖಾಲಿ ಹೊಟ್ಟೆಯಲ್ಲಿ ಔಷಧಿ ತೆಗೆದುಕೊಳ್ಳುತ್ತಾರೆ ಅಥವಾ ಸಮಯ ತಪ್ಪಿಸುತ್ತಾರೆ. ಜೊತೆಗೆ ಎಕ್ಸ್‌ಪೈರಿ ಡೇಟ್ ಪರಿಶೀಲಿಸದೇ ಔಷಧಿ ಸೇವಿಸುವುದು ಕೂಡ ಅಪಾಯಕಾರಿಯಾಗಿದೆ.

ಇದನ್ನೂ ಓದಿ: ಔಷಧಿ ತೆಗೆದುಕೊಂಡ ನಂತರ ಈ ಕೆಲವು ಆಹಾರಗಳನ್ನು ಯಾವುದೇ ಕಾರಣಕ್ಕೂ ಸೇವನೆ ಮಾಡಬಾರದಂತೆ

ಪೇನ್‌ಕಿಲ್ಲರ್‌ಗಳ ಅತಿಯಾದ ಬಳಕೆ ಕೂಡ ಅಪಾಯಕಾರಿ:

ತಜ್ಞರ ಪ್ರಕಾರ, ನೋವು ನಿವಾರಕ ಔಷಧಿಗಳನ್ನು ಹೆಚ್ಚು ಸೇವಿಸುವುದರಿಂದ ಕಿಡ್ನಿ ಮತ್ತು ಲಿವರ್ ಮೇಲೆ ಹಾನಿ ಉಂಟಾಗಬಹುದು. ಇದರಿಂದ ಸಣ್ಣ ವಯಸ್ಸಿನಲ್ಲೇ ಕಿಡ್ನಿ ಹಾಗೂ ಲಿವರ್ ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಇದೆ.

ಜನರಿಕ್ ಮತ್ತು ಬ್ರಾಂಡೆಡ್ ಔಷಧಿಗಿರುವ ವ್ಯತ್ಯಾಸ ಏನು?

ಜನರಿಕ್ ಮತ್ತು ಬ್ರಾಂಡೆಡ್ ಔಷಧಿಗಳಲ್ಲಿರುವ ‘ಸಾಲ್ಟ್’ ಒಂದೇ ಆಗಿರುತ್ತದೆ. ವ್ಯತ್ಯಾಸ ಕಂಪನಿ ಮತ್ತು ಬೆಲೆಯಲ್ಲಿ ಮಾತ್ರ. ವೈದ್ಯರ ಸಲಹೆಯೊಂದಿಗೆ ಸರಿಯಾದ ಔಷಧಿ ಬಳಸಿದರೆ ಜನರಿಕ್ ಮೆಡಿಸಿನ್ ಕೂಡ ಪರಿಣಾಮಕಾರಿ ಎಂದು ತಜ್ಞರು ತಿಳಿಸಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!
ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಉದ್ಧಟತನ!