ಹುಡುಗರ ಈ ಅಭ್ಯಾಸಗಳು ಮಕ್ಕಳಾಗದಿರಲು ಕಾರಣವಾಗಬಹುದು

‘ಆರೋಗ್ಯ ತಜ್ಞರು ಹೇಳುವ ಪ್ರಕಾರ, ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹುಡುಗರ ಈ ಅಭ್ಯಾಸಗಳು ಮಕ್ಕಳಾಗದಿರಲು ಕಾರಣವಾಗಬಹುದು
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 23, 2024 | 2:55 PM

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಬಂಜೆತನದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ವೀರ್ಯಾಣುಗಳ ಸಂಖ್ಯೆಯಲ್ಲಿನ ಇಳಿಕೆ. ಜೊತೆಗೆ ಇತರ ಆರೋಗ್ಯ ಸಮಸ್ಯೆಗಳು. ಸಾಮಾನ್ಯವಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಲು ಹಲವು ಕಾರಣಗಳಿವೆ. ತಡವಾಗಿ ಮದುವೆಯಾಗುವುದು, ಒತ್ತಡ, ಅನಾರೋಗ್ಯಕರ ಜೀವನಶೈಲಿಯು ವೀರ್ಯಾಣುಗಳ ಸಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಪುರುಷರ ಫಲವತ್ತತೆಯು ಪ್ರಸ್ತುತ ದಿನಗಳಲ್ಲಿ ಗಂಭೀರ ವಿಷಯವಾಗಿದ್ದು ನಿರ್ಲಕ್ಷ ಮಾಡದೆಯೇ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಹೆಣ್ಣಿಗೆ ಗರ್ಭ ಧರಿಸುವುದಕ್ಕೆ ವೀರ್ಯದ ಸಂಖ್ಯೆ ಪ್ರತಿ ಮಿಲಿಲೀಟರ್ ನಲ್ಲಿ 15 ಮಿಲಿಯನ್ ಗಿಂತ ಹೆಚ್ಚಿರಬೇಕು. ಇದು ಇದಕ್ಕಿಂತ ಕಡಿಮೆಯಿದ್ದರೆ, ಅದನ್ನು ಕಡಿಮೆ ವೀರ್ಯಾಣುಗಳ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ. ಇಂತಹ ಸಮಯದಲ್ಲಿ ನೀವು ಲೈಂಗಿಕ ಸಮಸ್ಯೆಗಳು, ಕಡಿಮೆ ಶಕ್ತಿ, ವೃಷಣ ಸಮಸ್ಯೆಗಳು, ದೇಹ – ಮುಖ – ಕೂದಲಿನ ಬೆಳವಣಿಗೆಯಲ್ಲಿ ಬದಲಾವಣೆಗಳನ್ನು ಅನುಭವಿಸುತ್ತಿದ್ದರೆ, ಅದು ಕಡಿಮೆ ವೀರ್ಯಾಣುಗಳ ಸಂಖ್ಯೆಯ ಸಂಕೇತವಾಗಿರಬಹುದು. ಈ ಕಾರಣಗಳಿಂದ ಬಂಜೆತನದ ಸಮಸ್ಯೆಯ ಜೊತೆಗೆ ಇತರ ಸಮಸ್ಯೆಗಳು ಕೂಡ ಸಾಮಾನ್ಯವಾಗಿ ಸಂಭವಿಸುತ್ತವೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಪುರುಷರು ಪ್ರತಿದಿನ ಒಂದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಬಹಳ ಜಾಗರೂಕರಾಗಿರುವುದು ಒಳ್ಳೆಯದು.

ಆರೋಗ್ಯ ತಜ್ಞರು ಹೇಳುವ ಪ್ರಕಾರ, ನಿರ್ದಿಷ್ಟವಾಗಿ ಕೆಲವು ರೀತಿಯ ಅಭ್ಯಾಸಗಳು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು. ಇದಲ್ಲದೆ, ಬಂಜೆತನದ ಸಮಸ್ಯೆಗೂ ಕಾರಣವಾಗಬಹುದು. ಅದರಲ್ಲಿಯೂ ಕಡಿಮೆ ವೀರ್ಯಾಣುಗಳ ಸಂಖ್ಯೆಯು ಹೆಣ್ಣಿಗೆ ಗರ್ಭಿಣಿಯಾಗಲು ತುಂಬಾ ಕಷ್ಟಕರವಾಗಿಸುತ್ತದೆ. ಹಾಗಾಗಿ ತಂದೆಯಾಗಲು ಬಯಸುವ ಮೊದಲು ಈ 5 ಅಭ್ಯಾಸಗಳಿಂದ ದೂರವಿರಬೇಕಾಗುತ್ತದೆ. ಹಾಗಾದರೆ ಅವು ಯಾವುವು? ಯಾಕಾಗಿ ಅವುಗಳಿಂದ ದೂರವಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ಅಭ್ಯಾಸಗಳಿಂದ ದೂರವಿರಿ:

ಧೂಮಪಾನ: ಇತ್ತೀಚಿನ ದಿನಗಳಲ್ಲಿ ಸಿಗರೇಟು ಸೇದುವುದು ಕೆಲವು ಪುರುಷರಲ್ಲಿ ಸಾಮಾನ್ಯವಾಗಿದೆ. ನಮ್ಮ ಯುವಕರು ಧೂಮಪಾನದ ವ್ಯಸನಿಗಳಾಗುತ್ತಿದ್ದಾರೆ. ಆದರೆ ನಿಮಗೆ ತಿಳಿದಿದೆಯೇ? ಧೂಮಪಾನವು ಕೇವಲ ಶ್ವಾಸಕೋಶಕ್ಕೆ ಸಂಬಂಧಿಸಿದ್ದಲ್ಲ. ಇದು ಲೈಂಗಿಕ ಆರೋಗ್ಯಕ್ಕೂ ಹಾನಿಕಾರಕ. ಧೂಮಪಾನ ಮಾಡುವ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುತ್ತದೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

ಮದ್ಯಪಾನ: ಕೆಲವು ಹುಡುಗರು ಚಿಕ್ಕ ವಯಸ್ಸಿನಿಂದಲೇ ಮದ್ಯಪಾನ ಮಾಡಲು ಪ್ರಾರಂಭಿಸುತ್ತಾರೆ. ಇದು ಒಳ್ಳೆಯದಲ್ಲ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಅಲ್ಲದೆ ಅತಿಯಾಗಿ ಆಲ್ಕೋಹಾಲ್ ಸೇವನೆಯು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ, ಸಾಕಷ್ಟು ವೀರ್ಯಾಣು ಉತ್ಪತ್ತಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ.

ಉದ್ವೇಗ (ಒತ್ತಡ): ಅಧಿಕ ಒತ್ತಡವು ದೇಹದಲ್ಲಿ ಕಾರ್ಟಿಸೋಲ್ ನಂತಹ ಒತ್ತಡದ ಹಾರ್ಮೋನುಗಳ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಟೆಸ್ಟೋಸ್ಟೆರಾನ್ ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಮುಂತಾದ ಒತ್ತಡ ನಿರ್ವಹಣಾ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯ.

ಅನಾರೋಗ್ಯಕರ ಆಹಾರಗಳು: ಆಹಾರ ಫಲವತ್ತತೆಯ ಮೇಲೂ ಪರಿಣಾಮ ಬೀರುತ್ತದೆ. ಫಾಸ್ಟ್ ಫುಡ್, ಸಕ್ಕರೆ ಮತ್ತು ಕೊಬ್ಬಿನ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ಊತ ಮತ್ತು ತೂಕ ಹೆಚ್ಚಾಗಬಹುದು, ಇದು ವೀರ್ಯಾಣು ಉತ್ಪಾದನೆಯ ಮೇಲೆ ಪರಿಣಾಮ ಬೀರುತ್ತದೆ. ಜೀವಸತ್ವಗಳು ಮತ್ತು ಖನಿಜಗಳ ಕೊರತೆಗಳು, ವಿಶೇಷವಾಗಿ ಸತು, ಸೆಲೆನಿಯಂ, ಫೋಲಿಕ್ ಆಮ್ಲ, ವೀರ್ಯಾಣುಗಳ ಗುಣಮಟ್ಟದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಸೇವನೆ ಮಾಡುವ ಆಹಾರದ ಬಗ್ಗೆ ಗಮನವಿರಲಿ.

ವಿಪರೀತ ಶಾಖ: ಪುರುಷರಿಗೆ, ದೇಹದ ಕೆಳಭಾಗದಲ್ಲಿ ಅತಿಯಾದ ಶಾಖ ಅಥವಾ ಬಿಸಿಯ ಅನುಭವ ಆಗುವುದು ವೀರ್ಯಾಣುಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ, ನೀವು ಬಿಸಿ ನೀರಿನ ಸ್ನಾನ, ಬಿಗಿಯಾದ ಒಳ ಉಡುಪುಗಳು, ಲ್ಯಾಪ್ಟಾಪ್ ಅನ್ನು ನಿಮ್ಮ ತೊಡೆಯ ಮೇಲೆ ದೀರ್ಘಕಾಲ ಇರಿಸಿಕೊಂಡು ಕೆಲಸ ಮಾಡುವುದನ್ನು ತಪ್ಪಿಸಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇಲ್ಲದಿದ್ದರೆ, ವೃಷಣಗಳ ತಾಪಮಾನದ ಹೆಚ್ಚಳದಿಂದಾಗಿ ವೀರ್ಯಾಣು ಹಾನಿಯಾಗುವ ಅಪಾಯವೂ ಇರುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ಹೆಚ್ ಡಿ ಕುಮಾರಸ್ವಾಮಿ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್