Microplastics: ಗರ್ಭಿಣಿಯರಲ್ಲಿ ಹೆಚ್ಚುತ್ತಿವೆ ಡೇಂಜರಸ್​​ ಮೈಕ್ರೋಪ್ಲಾಸ್ಟಿಕ್​ ಕಣಗಳು

ಜರ್ನಲ್ ಆಫ್ ಟಾಕ್ಸಿಕೊಲಾಜಿಕಲ್ ಸೈನ್ಸಸ್‌ನಲ್ಲಿ ಪ್ರಕಟವಾದ ವಿವರಗಳ ಪ್ರಕಾರ, ವಿಜ್ಞಾನಿಗಳು 62 ಗರ್ಭಿಣಿ ಮಹಿಳೆಯರ ಮಾದರಿಗಳನ್ನು ಪರಿಶೀಲಿಸಿದಾಗ, ಅವರು ಪ್ರತಿ ಗ್ರಾಂ ಅಂಗಾಂಶದಲ್ಲಿ 6.5 ರಿಂದ 790 ಮೈಕ್ರೋಗ್ರಾಂಗಳಷ್ಟು ಮೈಕ್ರೋಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ.

Microplastics: ಗರ್ಭಿಣಿಯರಲ್ಲಿ ಹೆಚ್ಚುತ್ತಿವೆ ಡೇಂಜರಸ್​​ ಮೈಕ್ರೋಪ್ಲಾಸ್ಟಿಕ್​ ಕಣಗಳು
ಗರ್ಭಿಣಿಯರಲ್ಲಿ ಹೆಚ್ಚುತ್ತಿವೆ ಡೇಂಜರಸ್​​ ಮೈಕ್ರೋಪ್ಲಾಸ್ಟಿಕ್​ ಕಣಗಳುImage Credit source: Pinterest
Follow us
|

Updated on: Feb 24, 2024 | 5:10 PM

ಪ್ರತಿಯೊಬ್ಬರು ಕೂಡ ತಮ್ಮ ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಸಿಯೇ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಯಾಕೆಂದರೆ ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಿಡಿದು ರಾತ್ರಿ ಮಲಗುವವರೆಗೆ ಪ್ರತಿಯೊಂದು ಕೆಲಸದಲ್ಲೂ ಪ್ಲಾಸ್ಟಿಕ್ ಬಳಕೆ ಆಗುತ್ತಲೆ ಇರುತ್ತದೆ. ನೀರಿನ ಬಾಟಲಿ, ಟೀ ಕಪ್‌, ಟೀ ಬ್ಯಾಗ್‌,ಇನ್ಸ್ಟೆಂಟ್​​ ಫುಡ್​, ಕಾಸ್ಮೆಟಿಕ್ ಉತ್ಪನ್ನಗಳು ಇತ್ಯಾದಿಗಳಲ್ಲಿಯೂ ಪ್ಲಾಸ್ಟಿಕ್ ಕಂಡುಬರುತ್ತದೆ. ಇವುಗಳಲ್ಲಿ ಮಾನವನ ದೇಹಕ್ಕೆ ಹಾನಿಕಾರಕವಾದ ಮೈಕ್ರೋಪ್ಲಾಸ್ಟಿಕ್ ಗಳಿವೆ. ಆದರೆ ಇತ್ತೀಚೆಗಷ್ಟೇ ವಿಜ್ಞಾನಿಗಳು ಆಘಾತಕಾರಿ ವಿಷಯವನ್ನು ಹೊರಹಾಕಿದ್ದಾರೆ. ಗರ್ಭಿಣಿಯರಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳು ಹೆಚ್ಚಾಗುತ್ತಿವೆ ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನ್ಯೂ ಮೆಕ್ಸಿಕೋ ಹೆಲ್ತ್ ಸೈನ್ಸಸ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹೊಸ ಸಾಧನದ ಮೂಲಕ ಗರ್ಭಿಣಿಯರ ಜರಾಯುಗಳಲ್ಲಿ ಮೈಕ್ರೋಪ್ಲಾಸ್ಟಿಕ್ ಅವಶೇಷಗಳನ್ನು ಪತ್ತೆಹಚ್ಚಿರುವುದನ್ನು ಬಹಿರಂಗಪಡಿಸಿದ್ದಾರೆ.

ಜರ್ನಲ್ ಆಫ್ ಟಾಕ್ಸಿಕೊಲಾಜಿಕಲ್ ಸೈನ್ಸಸ್‌ನಲ್ಲಿ ಪ್ರಕಟವಾದ ವಿವರಗಳ ಪ್ರಕಾರ, ವಿಜ್ಞಾನಿಗಳು 62 ಗರ್ಭಿಣಿ ಮಹಿಳೆಯರ ಮಾದರಿಗಳನ್ನು ಪರಿಶೀಲಿಸಿದಾಗ, ಅವರು ಪ್ರತಿ ಗ್ರಾಂ ಅಂಗಾಂಶದಲ್ಲಿ 6.5 ರಿಂದ 790 ಮೈಕ್ರೋಗ್ರಾಂಗಳಷ್ಟು ಮೈಕ್ರೋಪ್ಲಾಸ್ಟಿಕ್ ಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ಮಕ್ಕಳ ಮೇಲಿನ ಒತ್ತಡವೇ ಹೃದಯಾಘಾತಕ್ಕೆ ಕಾರಣವಾಗುತ್ತಿದೆಯೇ? ಹೆತ್ತವರು ಈ ಬಗ್ಗೆ ಗಮನ ಕೊಡಿ

ಇಂದು ಪರಿಸರದಲ್ಲಿ ಕಂಡುಬರುವ ಮೈಕ್ರೋಪ್ಲಾಸ್ಟಿಕ್ ಸುಮಾರು 40 ರಿಂದ 50 ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ಹೇಳುತ್ತಾರೆ. ಆದಾಗ್ಯೂ, ನಮ್ಮ ದೇಹದಲ್ಲಿ ಮೈಕ್ರೊಪ್ಲಾಸ್ಟಿಕ್‌ಗಳ ಹೆಚ್ಚುತ್ತಿರುವ ಸಾಂದ್ರತೆಯು ಉರಿಯೂತದ ಕರುಳಿನ ಕಾಯಿಲೆ, ಕರುಳಿನ ಕ್ಯಾನ್ಸರ್ ಮತ್ತು ಕಡಿಮೆಯಾದ ವೀರ್ಯದಂತಹ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿರಬಹುದು ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಮ್ಯಾಥ್ಯೂ ಕ್ಯಾಂಪೆನ್ ಹೇಳಿದ್ದಾರೆ. ಪ್ರಪಂಚದಾದ್ಯಂತ ಪ್ಲಾಸ್ಟಿಕ್ ಮಾಲಿನ್ಯದ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಇದನ್ನು ತಡೆಯದಿದ್ದಲ್ಲಿ ಪರಿಸರದಲ್ಲಿ ಪ್ಲಾಸ್ಟಿಕ್‌ ಹೆಚ್ಚುವ ಅಪಾಯ ಹೆಚ್ಚಲಿದೆ ಎಂದು ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ