AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು, ಅನ್ನ ಎರಡನ್ನು ಮಿಶ್ರಣ ಮಾಡಿದರೆ ಆರೋಗ್ಯ ಭಾಗ್ಯ ಖಂಡಿತ

ಹಾಲು ಮತ್ತು ಅನ್ನದ ಮಿಶ್ರಣವು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಅದಲ್ಲದೆ, ಹಾಲನ್ನವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೇಹಕ್ಕೆ ವಿವಿಧ ರೀತಿಯ ಪ್ರಯೋಜನಗಳು ಸಿಗುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಹಾಲು ಮತ್ತು ಅನ್ನದ ಮಿಶ್ರಣವನ್ನು ಸೇವನೆ ಮಾಡಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಹಾಲು, ಅನ್ನ ಎರಡನ್ನು ಮಿಶ್ರಣ ಮಾಡಿದರೆ ಆರೋಗ್ಯ ಭಾಗ್ಯ ಖಂಡಿತ
ಹಾಲು, ಅನ್ನImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 14, 2025 | 8:05 PM

Share

ಆರೋಗ್ಯ (Health) ಚೆನ್ನಾಗಿಲ್ಲದಿದ್ದಾಗ ಮಾತ್ರ ಹಾಲು (Milk) ಅನ್ನ ಸೇವನೆ ಮಾಡಬೇಕು ಎಂಬುದು ಹಲವರ ಯೋಚನೆಯಾಗಿರುತ್ತದೆ. ಆದರೆ ನಿಮಗೆ ಗೊತ್ತಿರಲಿ ಇದರಲ್ಲಿರುವಷ್ಟು ಪೋಷಕಾಂಶಗಳು (Nutrition) ನಿಮಗೆ ಬೇರೆ ಯಾವುದರಲ್ಲಿಯೂ ಸಿಗುವುದಿಲ್ಲ. ಹಾಲನ್ನ (Milk Rice) ತಯಾರಿಸುವುದು ಕೂಡ ಬಹಳ ಸುಲಭ. ಹಾಗಾಗಿ ದಿನದಲ್ಲಿ ಒಂದು ಬಾರಿಯಾದರೂ ಹಾಲನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಹಾಲು ಮತ್ತು ಅನ್ನದ ಮಿಶ್ರಣವನ್ನು ಸೇವನೆ ಮಾಡಬಹುದು. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು? ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಾಲು ಮತ್ತು ಅನ್ನದ ಮಿಶ್ರಣವು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ಇದು ದೇಹಕ್ಕೆ ವಿವಿಧ ರೀತಿಯ ಪ್ರಯೋಜನಗಳನ್ನು ಒದಗಿಸುತ್ತದೆ. ಏಕೆಂದರೆ ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್, ವಿಟಮಿನ್ ಡಿ ಮತ್ತು ವಿಟಮಿನ್ ಬಿ 12 ಇರುತ್ತದೆ. ಇವು ಮೂಳೆ, ಹಲ್ಲು, ಸ್ನಾಯು ಮತ್ತು ನರಗಳನ್ನು ಬಲಪಡಿಸುತ್ತವೆ. ಜೊತೆಗೆ ಕೆಂಪು ರಕ್ತ ಕಣಗಳ ಉತ್ಪಾದನೆಗೂ ಸಹ ಸಹಾಯ ಮಾಡುತ್ತದೆ. ಇನ್ನು ಅನ್ನದಲ್ಲಿ ಶಕ್ತಿಯ ಮೂಲವಾಗಿರುವ ಕಾರ್ಬೋಹೈಡ್ರೇಟ್‌ಗಳಿವೆ ಇವೆರಡನ್ನೂ ಒಟ್ಟುಗೂಡಿಸಿ ತಿಂದಾಗ ಇದು ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಪೋಷಕಾಂಶಗಳನ್ನು ನೀಡುತ್ತದೆ.

ಹಾಲು ಮತ್ತು ಅನ್ನದ ಪ್ರಯೋಜನಗಳು!

ಸಾಮಾನ್ಯವಾಗಿ ಹಾಲು ಮತ್ತು ಅನ್ನವು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ. ವಿಶೇಷವಾಗಿ ಬೆಳಗ್ಗಿನ ಸಮಯದಲ್ಲಿ ಇವುಗಳ ಸೇವನೆ ಮಾಡುವುದರಿಂದ ದಿನವಿಡೀ ಒಂದೇ ರೀತಿಯ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಹಾಲು ಮತ್ತು ಅನ್ನ ಸುಲಭವಾಗಿ ಜೀರ್ಣವಾಗುತ್ತವೆ. ಹಾಲು ಸೇವನೆ ಮಾಡುವುದರಿಂದ ಯಾವುದೇ ರೀತಿಯ ಸಮಸ್ಯೆಗಳಿಲ್ಲದಿದ್ದರೆ, ಇದು ಒಳ್ಳೆಯ ಆಹಾರ ಎನ್ನುವುದರಲ್ಲಿ ಸಂಶಯವಿಲ್ಲ. ಇನ್ನು ಹಾಲು ಮತ್ತು ಅನ್ನದ ಮಿಶ್ರಣ ನಿಮಗೆ ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿದಂತಹ ಅನುಭವವಾಗುವುದರಿಂದ ಅತಿಯಾಗಿ ತಿನ್ನುವ ಅಭ್ಯಾಸ ಕೂಡ ಕಡಿಮೆ ಆಗುತ್ತದೆ.

ಇದನ್ನೂ ಓದಿ
Image
ತಮಿಳುನಾಡಿನಲ್ಲಿದೆ ಸಕ್ಕರೆ ಕಾಯಿಲೆ ವಾಸಿಮಾಡುವ ದೇವಸ್ಥಾನ!
Image
Eggs in Summer: ಯಾವ ಕಾರಣಕ್ಕೂ ಬೇಸಿಗೆಯಲ್ಲಿ ಮೊಟ್ಟೆ ಸೇವಿಸಬೇಡಿ?
Image
ಬೀದಿ ಬದಿ ತಿಂಡಿ ತಿನ್ನುವ ಮುನ್ನ ಈ ಸ್ಟೋರಿಯನ್ನು ಒಮ್ಮೆ ನೋಡಿ!
Image
ಕೆಂಪು ಅಥವಾ ಹಸಿರು ಸೇಬು ಆರೋಗ್ಯಕ್ಕೆ ಯಾವುದು ಒಳ್ಳೆಯದು?

ಇದನ್ನೂ ಓದಿ: ಬಿಳಿ ರಕ್ತ ಕಣಗಳು ಕಡಿಮೆ ಆಗಿದ್ದರೆ ಚಿಂತೆ ಬೇಡ! ಈ ಹಣ್ಣಿನ ಸೇವನೆ ಮಾಡಿ

ಯಾರಿಗೆ ಒಳ್ಳೆಯದಲ್ಲ?

ಹಾಲಿನ ಸೇವನೆ ಮಾಡಿದಾಗ ಜೀರ್ಣಕಾರಿ ಸಮಸ್ಯೆ ಆಗುವವರು ಹಾಲು ಮತ್ತು ಅನ್ನವನ್ನು ಬೆರೆಸಿ ಊಟ ಮಾಡುವ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳಿ. ಹಾಲು ಮತ್ತು ಅನ್ನ ಹೆಚ್ಚಿನ ಕ್ಯಾಲೋರಿ ಆಹಾರಗಳಾಗಿವೆ. ಅವು ತೂಕ ಹೆಚ್ಚಾಗಲು ಕಾರಣವಾಗಬಹುದು. ನಿಯಮಿತವಾಗಿ ಸೇವಿಸಿದರೆ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಸೇವನೆ ಮಾಡುವಾಗ ನೋಡಿಕೊಳ್ಳಿ. ಎಲ್ಲಕ್ಕಿಂತ ಹೆಚ್ಚಾಗಿ, ಹಾಲನ್ನ ಸೇವನೆ ಮಾಡುವ ಮೊದಲು ನಿಮ್ಮ ದೈಹಿಕ ಸ್ಥಿತಿ ಮತ್ತು ಆಹಾರ ಪದ್ಧತಿಯನ್ನು ನೋಡಿಕೊಳ್ಳಿ. ಅಗತ್ಯವಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ