AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!

ದಿನನಿತ್ಯ ಜೀವನದಲ್ಲಿ ಸೇವಿಸುವ ಆಹಾರಗಳು ಆರೋಗ್ಯದ ಮೇಲೆ ಒಳ್ಳೆಯ ಹಾಗೂ ಕೆಟ್ಟ ಪರಿಣಾಮಗಳು ಬೀರುತ್ತದೆ. ಆದರೆ ಈ ಬಗ್ಗೆ ಯೋಚಿಸಿ ಆಹಾರ ಸೇವನೆ ಮಾಡುವವರ ಸಂಖ್ಯೆಯು ತೀರಾ ಕಡಿಮೆ. ಕೆಲವರಿಗೆ ಹಾಲಿಗೆ ಸಕ್ಕರೆ ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇನ್ನು ಕೆಲವರು ಹಾಲಿಗೆ ಬೆಲ್ಲ ಹಾಕಿ ಕುಡಿಯುತ್ತಾರೆ. ಈ ರೀತಿ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

Health Care Tips:ಹಾಲಿಗೆ ಸಕ್ಕರೆ ಬದಲು ಬೆಲ್ಲ ಹಾಕಿ ಕುಡಿಯಿರಿ ;ಆರೋಗ್ಯದಲ್ಲಾಗುತ್ತೆ ಮ್ಯಾಜಿಕ್!
Milk With jaggery Benefits
ಸಾಯಿನಂದಾ
| Edited By: |

Updated on: Apr 09, 2024 | 6:09 PM

Share

ಸಿಹಿ ತಿಂಡಿಗಳಲ್ಲಿ ಸಿಹಿಕಾರಕವಾಗಿ ಬೆಲ್ಲವನ್ನು ಬಳಸುವುದೇ ಹೆಚ್ಚು. ಈ ಮಧುಮೇಹಿಗಳು ಸಕ್ಕರೆಗಿಂತ ಬೆಲ್ಲವೇ ಬೆಸ್ಟ್ ಎನ್ನಬಹುದು. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳಿವೆ. ಹೀಗಾಗಿ ಈ ಬೆಲ್ಲ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಅಧಿಕ. ಅದಲ್ಲದೇ ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರವಾಗಿಸಿಕೊಳ್ಳಬಹುದು.

  1. ಹಾಲಿಗೆ ಬೆಲ್ಲ ಹಾಕಿ ಸೇವಿಸುವುದರಿಂದ ದೇಹದಲ್ಲಿರುವ ಅಧಿಕ ಕೊಬ್ಬು ಕಡಿಮೆಯಾಗುತ್ತದೆ. ಸ್ಥೂಲಕಾಯ ನಿವಾರಣೆಯಾಗಿ ದೇಹವನ್ನು ಆರೋಗ್ಯಯುತವಾಗಿಸುತ್ತದೆ.
  2. ಬೆಲ್ಲದ ಹಾಲಿನಲ್ಲಿ ನೈಸರ್ಗಿಕ ಆಂಟಿ ಬಯೋಟಿಕ್‌ ಮತ್ತು ಆಂಟಿ ವೈರಲ್‌ ಗುಣಗಳು ಅಧಿಕವಾಗಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅರೋಗ್ಯ ಸಮಸ್ಯೆಗಳು ಕಾಡದಂತೆ ನೋಡಿಕೊಳ್ಳುತ್ತದೆ.
  3. ಬೆಲ್ಲದ ಹಾಲಿನ ಸೇವನೆಯಿಂದಾಗಿ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.
  4. ಬೆಲ್ಲದ ಹಾಲಿನಲ್ಲಿರುವ ಪೋಷಕಾಂಶಗಳು ಕೂದಲಿನ ರಕ್ಷಣೆಗೆ ಪ್ರಯೋಜನಕಾರಿ. ಇದು ಕೂದಲಿನ ಹೊಳಪನ್ನು ಹೆಚ್ಚಿಸಿ, ಕೂದಲು ಉದುರುವುದು ಹಾಗೂ ತಲೆಹೊಟ್ಟಿನ ಸಮಸ್ಯೆಯು ನಿವಾರಿಸುತ್ತದೆ.
  5. ತಿಂಗಳ ಮುಟ್ಟಿನ ಸಮಯದಲ್ಲಿ ಕಾಡುವ ಅತಿಯಾದ ಹೊಟ್ಟೆ ನೋವು, ಬೆನ್ನು ನೋವಿಗೆ ಈ ಬೆಲ್ಲದ ಹಾಲು ಉತ್ತಮವಾದ ಔಷಧಿಯಾಗಿದೆ. ಇದು ನೋವನ್ನು ಕಡಿಮೆ ಮಾಡುತ್ತದೆ.
  6. ವಯಸ್ಸಾದಾಗ ಕಾಡುವ ಕೀಲು ನೋವು ಸಮಸ್ಯೆ, ಸಂಧಿವಾತದಂತಹ ಸಮಸ್ಯೆಯನ್ನು ದೂರ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!