AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Covid Illness: ಕೋವಿಡ್​ನಿಂದ ಗುಣಮುಖರಾದವರಲ್ಲಿ ಮಾನಸಿಕ ಅಸ್ವಸ್ಥತೆ ಹೆಚ್ಚಳ, ಲಕ್ಷಣಗಳೇನು?

ನೀವು ಖಿನ್ನತೆ, ಆತಂಕ ಸೇರಿದಂತೆ ಇತರೆ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದೀರಾ, ನೀವೊಬ್ಬರೇ ಅಲ್ಲ ಕೊರೊನಾದಿಂದ ಗುಣಮುಖರಾಗಿರುವ ಬಹಳಷ್ಟು ಮಂದಿ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

Post Covid Illness: ಕೋವಿಡ್​ನಿಂದ ಗುಣಮುಖರಾದವರಲ್ಲಿ ಮಾನಸಿಕ ಅಸ್ವಸ್ಥತೆ ಹೆಚ್ಚಳ, ಲಕ್ಷಣಗಳೇನು?
Mental Illness
Follow us
TV9 Web
| Updated By: ನಯನಾ ರಾಜೀವ್

Updated on: Jun 14, 2022 | 5:04 PM

ನೀವು ಖಿನ್ನತೆ, ಆತಂಕ ಸೇರಿದಂತೆ ಇತರೆ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದೀರಾ, ನೀವೊಬ್ಬರೇ ಅಲ್ಲ ಕೊರೊನಾದಿಂದ ಗುಣಮುಖರಾಗಿರುವ ಬಹಳಷ್ಟು ಮಂದಿ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಕೊರೊನಾದಿಂದಾಗಿ ಇಡೀ ಪ್ರಪಂಚವೇ ಅಲ್ಲೋಲಕಲ್ಲೋಲವಾಗಿದೆ. ಆರೋಗ್ಯ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೀಗ ಕೆಲವು ತಿಂಗಳುಗಳಿಂದ ಸಹಜ ಸ್ಥಿತಿಗೆ ಮರಳಲು ಪ್ರಯತ್ನಿಸುತ್ತಿವೆ.

ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿರುವವರ ಸಂಖ್ಯೆಯೂ ಹೆಚ್ಚಿದೆ. ಹಾಗೆಯೇ ಬದುಕುಳಿದವರು ಕೂಡ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಕೋವಿಡ್​ನಿಂದ ಗುಣಮುಖರಾದವರಲ್ಲಿ ಸಾಮಾನ್ಯವಾಗಿ ಮಾನಸಿಕ ಅಸ್ವಸ್ಥೆತೆಯು ಕಾಡುತ್ತಿದೆ.

ಕೊರೊನಾ ಸೋಂಕು ತಗುಲಿದ ಬಳಿಕ ನಾಲ್ಕರಿಂದ ಐದು ತಿಂಗಳ ಬಳಿಕ ಈ ಸಮಸ್ಯೆಗಳು ಶುರುವಾಗುತ್ತವೆ. ಶೇ. 25ರಷ್ಟು ಕೊರೊನಾ ಸೋಂಕಿತರು ಮಾನಸಿಕ ಅಸಮತೋಲನವನ್ನು ಅನುಭವಿಸುತ್ತಾರೆ ಎಂಬುದು ತಿಳಿದುಬಂದಿದೆ. ಇನ್ನೂ ಕೆಲವರು ಉಸಿರಾಟದ ತೊಂದರೆ ಅನುಭವಿಸಬಹುದು ಎಂದು ಜರ್ನಲ್ ವರ್ಲ್ಡ್​ ಸೈಕ್ಯಾಟ್ರಿಯಲ್ಲಿ ತಿಳಿಸಲಾಗಿದೆ.

ಸಂಶೋಧಕರು ಹೇಳಿದ್ದೇನು? ಸಂಶೋಧಕರ ಪ್ರಕಾರ ಕೇವಲ ಕೊರೊನಾಗೆ ತುತ್ತಾದವರು ಮಾತ್ರವಲ್ಲದೆ ಕೊರೊನಾ ಬಾರದವರ ಮಾನಸಿಕ ಆರೋಗ್ಯವೂ ಹದಗೆಟ್ಟಿದೆ. ಕೊರೊನಾ ನಂತರ ಆನ್ಕ್ಸೈಟಿ ಡಿಸ್​ಆರ್ಡರ್, ಸೈಕ್ಯಾಟ್ರಿಕ್ ಡಿಸ್​ಆರ್ಡರ್, ಡಿಪ್ರೆಸ್ಸೀವ್ ಡಿಸ್​ಆರ್ಡರ್, ಪೋಸ್ಟ್​ ಟ್ರ್ಯಾಟಿಕ್ ಡಿಸ್​ಆರ್ಡರ್ ಉಂಟಾಗುತ್ತದೆ.

ಈ ಸಮಸ್ಯೆಗಳು ಎಷ್ಟು ದಿನಗಳ ಕಾಲ ಇರಲಿವೆ? ಈ ಸಮಸ್ಯೆಗಳು ವ್ಯಕ್ತಿಯಿಂದ ವ್ಯಕ್ತಿಗೆ ವ್ಯತ್ಯಾಸಗಳಿರುತ್ತವೆ, ಯಾವ ರೀತಿಯ ಸಮಸ್ಯೆಗಳಿರುತ್ತವೆ ಎಂಬುದರ ಮೇಲೆ ಎಲ್ಲವೂ ನಿಂತಿರುತ್ತದೆ. ಸಾಮಾನ್ಯ ಸಮಸ್ಯೆಗಳು ಒಂದೆರಡು ವಾರ ಅಥವಾ ಒಂದು ತಿಂಗಳುಗಳ ಕಾಲ ಇರಬಹುದು.

ಸಮಸ್ಯೆಗಳನ್ನು ಪತ್ತೆ ಹೆಚ್ಚುವುದು ಹೇಗೆ? -ನಿಮ್ಮ ಹಾವಭಾವದಲ್ಲಿ ಬದಲಾವಣೆ -ನಿದ್ರಾಹೀನತೆ ಅಥವಾ ಸೌಂಡ್ ಸ್ಲೀಪ್ ಇಲ್ಲದಿರುವುದು -ಕುಟುಂಬದವರ ಜತೆ ಕುಳಿತು ಮಾಡತನಾಡಲು ಸಾಧ್ಯವಾಗದಿರುವುದು, ಮನಸ್ಸು ಎಲ್ಲೋ ಇರುವಂತೆ ಭಾಸವಾಗುವುದು, ಏಕಾಗ್ರತೆ ಇಲ್ಲದಿರುವುದು ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ಚಿಕಿತ್ಸೆಗಳೇನು? ವ್ಯಾಯಾಮ, ಸೈಕೋಥೆರಪಿ, ಮೆಡಿಕೇಷನ್, ಧ್ಯಾನ ಮಾಡಿ ಇದ್ಯಾವುದರಿಂದಲೂ ಕಡಿಮೆಯಾಗದಿದ್ದರೆ ವೈದ್ಯರ ಬಳಿ ತೆರಳಿ ಸೂಕ್ತ ಸಲಹೆ ಪಡೆಯಿರಿ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಆಧರಿಸಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!