AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICMR Dietary Guidelines Part 15: ದಿನನಿತ್ಯದ ಆಹಾರದಲ್ಲಿ ಉಪ್ಪು, ಸಕ್ಕರೆ ಪ್ರಮಾಣ ಎಷ್ಟಿರಬೇಕು? ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?

ಇತ್ತೀಚೆಗಷ್ಟೇ ವೈದ್ಯಕೀಯ ಸಂಸ್ಥೆಯು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ ಸಹಭಾಗಿತ್ವದಲ್ಲಿ 17 ಹೊಸ ಆಹಾರ ಮಾರ್ಗಸೂಚಿಗಳನ್ನು ಪರಿಚಯಿಸಿದೆ. ಈ ಮಾರ್ಗ ಸೂಚಿಯಲ್ಲಿ ಭಾರತೀಯರು ಆರೋಗ್ಯಯುತ ಜೀವನ ನಡೆಸಲು ಉತ್ತಮ ಗುಣಮಟ್ಟದ ಆಹಾರ ಪದ್ಧತಿಯನ್ನು ತಿಳಿಸಿದೆ. ಅದಲ್ಲದೇ ಅಡುಗೆ ಎಣ್ಣೆ , ಸಕ್ಕರೆ ಮತ್ತು ಉಪ್ಪಿನ ಸೇವನೆಯನ್ನು ಕೂಡ ಮಿತಿಗೊಳಿಸುವಂತೆ ಐಸಿಎಂಆರ್ ಸೂಚಿಸಿದೆ.

ICMR Dietary Guidelines Part 15: ದಿನನಿತ್ಯದ ಆಹಾರದಲ್ಲಿ ಉಪ್ಪು, ಸಕ್ಕರೆ ಪ್ರಮಾಣ ಎಷ್ಟಿರಬೇಕು? ಸರ್ಕಾರದ ಮಾರ್ಗಸೂಚಿಯಲ್ಲಿ ಏನಿದೆ?
ಸಾಯಿನಂದಾ
| Edited By: |

Updated on: May 27, 2024 | 5:56 PM

Share

ಇತ್ತೀಚೆಗಿನ ದಿನಗಳಲ್ಲಿ ಗುಣಮಟ್ಟದ ಆಹಾರ ಸೇವನೆ ಮಾಡುವವರಿಗಿಂತ ಬಾಯಿ ರುಚಿಯ ಕಡೆಗೆ ಗಮನ ಕೊಡುವವರೇ ಹೆಚ್ಚು. ಫಾಸ್ಟ್‌ ಫುಡ್ ಹಾಗೂ ವಿದೇಶಿಗರ ಆಹಾರ ಪದ್ಧತಿಗಳ ಅಳವಡಿಕೆಯು ನಮ್ಮ ಆರೋಗ್ಯವನ್ನು ಹಾಳು ಮಾಡುತ್ತಿವೆ. ಹೀಗಾಗಿ ಆಹಾರದ ಸೇವನೆಯ ಜೊತೆಗೆ ಆರೋಗ್ಯ ರಕ್ಷಣೆಯ ಕಡೆಗೂ ಹೆಚ್ಚು ಗಮನ ನೀಡಬೇಕು. ಹೆಚ್ಚಿನ ಕೊಬ್ಬು, ಸಕ್ಕರೆ ಅಥವಾ ಉಪ್ಪಿನ ಅಂಶದೊಂದಿಗೆ ತಯಾರಿಸಿದರೆ ಮನೆಯಲ್ಲಿ ಬೇಯಿಸಿದ ಊಟವೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಬಿಡುಗಡೆ ಮಾಡಿದ ಹೊಸ ಆಹಾರ ಮಾರ್ಗಸೂಚಿಗಳಲ್ಲಿ ತಿಳಿಸಿದೆ.

ಚಿಪ್ಸ್, ಸಾಸ್, ಬಿಸ್ಕತ್ತುಗಳು, ಬೇಕರಿ ಉತ್ಪನ್ನಗಳು, ಮನೆಯಲ್ಲಿ ತಯಾರಿಸಿದ ಆಹಾರಗಳಾದ ಖಾರದ ತಿಂಡಿಗಳು, ಪಾಪಡ್ಸ್ ಮತ್ತು ಉಪ್ಪಿನಕಾಯಿಗಳಂತಹ ಪ್ಯಾಕ್ ಮಾಡಿ ಮಾರಾಟ ಮಾಡುವ ಆಹಾರಗಳು ಹೆಚ್ಚಿನ ಪ್ರಮಾಣದ ಉಪ್ಪನ್ನು ಹೊಂದಿರುತ್ತವೆ. ಈ ಆಹಾರವನ್ನು ನಿಯಮಿತವಾಗಿ ಸೇವಿಸುವುದರಿಂದಲೂ ಮಧುಮೇಹ, ಅಧಿಕ ರಕ್ತದೊತ್ತಡ, ಬೊಜ್ಜು, ಹೃದಯರಕ್ತನಾಳದ ಕಾಯಿಲೆಗಳು ಬರುವ ಸಾಧ್ಯತೆಯೇ ಅಧಿಕವಾಗಿದೆ ಎಂದು ಎಚ್ಚರಿಸಿದೆ.

ಈ ಆಹಾರಗಳನ್ನು ಅಪ್ಪಿ ತಪ್ಪಿಯೂ ಸೇವಿಸಲೇ ಬೇಡಿ

ಆರೋಗ್ಯಕರವಲ್ಲದ ಸಾಸ್‌ಗಳು, ಚೀಸ್, ಮೇಯನೇಸ್, ಜಾಮ್‌ಗಳು, ಜ್ಯೂಸ್‌ಗಳು, ಕಾರ್ಬೊನೇಟೆಡ್ ಪಾನೀಯಗಳು, ಬಿಸ್ಕತ್ತುಗಳು, ಕುಕೀಸ್, ಕೇಕ್‌ಗಳು, ಪೇಸ್ಟ್ರಿಗಳು, ತಂಪು ಪಾನೀಯಗಳು, , ಪ್ಯಾಕ್ ಮಾಡಿದ ಹಣ್ಣಿನ ರಸಗಳನ್ನು ಸೇವನೆಯಿಂದ ದೂರವಿರಿ. ಮನೆಯ ಹೊರಗೆ ತಯಾರಿಸಿದ ಆಹಾರವನ್ನು ಸೇವಿಸುವಾಗ ಎಚ್ಚರವಿರಲಿ.

ಇದನ್ನೂ ಓದಿ: ಬುದ್ಧಿವಂತಿಕೆ, ಮೆದುಳಿನ ಶಕ್ತಿಯನ್ನು ಹೆಚ್ಚಿಸುವ 5 ಆರೋಗ್ಯಕರ ಅಭ್ಯಾಸಗಳನ್ನು ಪಾಲನೆ ಮಾಡಿ

ದಿನಕ್ಕೆ 2000-ಕೆ.ಕೆ.ಎಲ್ ಆಹಾರದಲ್ಲಿ ದಿನಕ್ಕೆ 10 ಗ್ರಾಂ ಗಿಂತ ಹೆಚ್ಚಿನ ಪ್ರಮಾಣದ ಸ್ಯಾಚುರೇಟೆಡ್ ಕೊಬ್ಬುಗಳು ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡಬಲ್ಲದು. ಉಪ್ಪಿನ ಸೇವನೆಯು ದಿನಕ್ಕೆ 5 ಗ್ರಾಂಗಿಂತ ಹೆಚ್ಚು ಮೀರಬಾರದು ಹಾಗೂ ಈ ಸಕ್ಕರೆಯು ಸೇವನೆಯು 25 ಗ್ರಾಂಕ್ಕಿಂತ ಕಡಿಮೆಯಿರಲಿ ಎಂದು ಐಸಿಎಂಆರ್ ತಿಳಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್