AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಮಂಗನ ಕಾಯಿಲೆಯಿಂದ ಯಾರಿಗೆ ಅಪಾಯ ಜಾಸ್ತಿ?; ಮಂಕಿಫಾಕ್ಸ್​ನಿಂದ ಪಾರಾಗುವುದು ಹೇಗೆ?

Monkey Fever: ಮಂಗನ ಕಾಯಿಲೆ ಇತ್ತೀಚೆಗೆ ಮತ್ತೆ ಮಲೆನಾಡಿನ ಜನರನ್ನು ಬಲಿತೆಗೆದುಕೊಳ್ಳುತ್ತಿರುವ ಸೋಂಕಾಗಿದೆ. ಪಶ್ಚಿಮಘಟ್ಟದ ಜಿಲ್ಲೆಗಳಾದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ಈ ಮಂಗನ ಕಾಯಿಲೆ ಅಥವಾ ಮಂಕಿಫಾಕ್ಸ್​ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗದ ಅಪಾಯ ಯಾರಿಗೆ ಜಾಸ್ತಿ? ಇದರಿಂದ ಪಾರಾಗಲು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಯಾವುವು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Monkeypox: ಮಂಗನ ಕಾಯಿಲೆಯಿಂದ ಯಾರಿಗೆ ಅಪಾಯ ಜಾಸ್ತಿ?; ಮಂಕಿಫಾಕ್ಸ್​ನಿಂದ ಪಾರಾಗುವುದು ಹೇಗೆ?
ಮಂಗನ ಕಾಯಿಲೆ
ಸುಷ್ಮಾ ಚಕ್ರೆ
|

Updated on:Feb 09, 2024 | 5:36 PM

Share

ಇತ್ತೀಚೆಗೆ ಮಂಗನಕಾಯಿಲೆಯ (Monkeypox) ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿವೆ. ಈ ಮಂಕಿಫಾಕ್ಸ್​ (ಕೆಎಫ್‌ಡಿ) ಒಂದು ವೈರಲ್ ಹೆಮರಾಜಿಕ್ ಕಾಯಿಲೆಯಾಗಿದ್ದು, ಇದನ್ನು ಮೊದಲು 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಅರಣ್ಯದಲ್ಲಿ ಗುರುತಿಸಲಾಯಿತು. ಅಂದಿನಿಂದ ಇದನ್ನು ಕ್ಯಾಸನೂರ್ ಫಾರೆಸ್ಟ್ ಡಿಸೀಸ್ (Kyasanur Forest Disease) ಎಂದೇ ಕರೆಯಲಾಗುತ್ತಿದೆ. ಇದು KFD ವೈರಸ್​ನಿಂದ ಉಂಟಾಗುತ್ತದೆ. ಸ್ಥಳೀಯವಾಗಿ ಇದನ್ನು ಮಂಗನ ಕಾಯಿಲೆ ಎಂದು ಕರೆಯಲಾಗುತ್ತದೆ.

ಮಂಗನ ಕಾಯಿಲೆ ಎಂಬುದು ಅಪಾಯಕಾರಿ ಸೋಂಕು. ಇದನ್ನು ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ) ಎಂದೂ ಕರೆಯುತ್ತಾರೆ. ಈ ವೈರಲ್ ಹೆಮರಾಜಿಕ್ ಜ್ವರವು ಭಾರತದಲ್ಲಿ ಜನರನ್ನು ಆವರಿಸಿದೆ. ಈ ರೋಗವು ಕರ್ನಾಟಕದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಮಂಕಿ ಜ್ವರವು ಸೋಂಕಿತ ಹುಳುಗಳ ಕಡಿತದ ಮೂಲಕ ಹರಡುವ ವೈರಸ್ ಆಗಿದೆ. ಸೋಂಕಿತ ಪ್ರಾಣಿಗಳ ಸಂಪರ್ಕದ ಮೂಲಕ ಮನುಷ್ಯರಿಗೆ ಈ ಅಪಾಯಕಾರಿ ವೈರಸ್‌ ಹರಡುತ್ತದೆ.

ಇದನ್ನೂ ಓದಿ: Mumps Virus: ಮಂಗನಬಾವು ಎಂದರೇನು?; ಈ ರೋಗ ಮಕ್ಕಳಿಗೆ ಅಪಾಯಕಾರಿಯೇ?

ಈ ಭಯಾನಕ ವೈರಸ್‌ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ನಿಮ್ಮ ದೈನಂದಿನ ಜೀವನದಲ್ಲಿ ಈ ಮುನ್ನೆಚ್ಚರಿಕೆಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ.

ಮಂಗನ ಕಾಯಿಲೆಯ ಲಕ್ಷಣಗಳು:

ಹಠಾತ್ ಜ್ವರ, ತಲೆನೋವು, ವಾಂತಿ, ಹೊಟ್ಟೆ ನೋವು, ಸ್ನಾಯು ನೋವು ಮತ್ತು ಬೆನ್ನುನೋವು, ಚಳಿ, ಸುಸ್ತು ಮತ್ತು ಅತಿಸಾರ ಇವು ಮಂಗನ ಕಾಯಿಲೆಯ ಆರಂಭಿಕ ಲಕ್ಷಣಗಳಾಗಿವೆ. ರಕ್ತಸ್ರಾವದ ರೋಗಲಕ್ಷಣಗಳೊಂದಿಗೆ ತೀವ್ರವಾಗುವ ಈ ರೋಗವು ಜೀವಕ್ಕೆ ಆಪತ್ತು ಉಂಟುಮಾಡಬಹುದು. ಈ ವೈರಸ್‌ನ ಗೋಚರ ಲಕ್ಷಣಗಳು ಸಾಮಾನ್ಯವಾಗಿ ಸೋಂಕು ತಗುಲಿದ 2ರಿಂದ 7 ದಿನಗಳ ನಂತರ ಕಾಣಿಸಿಕೊಳ್ಳುತ್ತವೆ. ಮೂಗು, ಗಂಟಲು, ಒಸಡುಗಳು ಮತ್ತು ಕರುಳಿನಿಂದ ಸ್ವಲ್ಪ ರಕ್ತಸ್ರಾವದೊಂದಿಗೆ ಜ್ವರವು ಶುರುವಾಗಿ 12 ದಿನಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಇರುತ್ತದೆ. ಕೆಲವೊಮ್ಮೆ ಇದು ಶ್ವಾಸಕೋಶದಲ್ಲಿ ರಕ್ತಸ್ರಾವವನ್ನು ಉಂಟುಮಾಡಬಹುದು. ಇದು ಸಾವಿಗೆ ಕಾರಣವಾಗುತ್ತದೆ.

ಆರಂಭದಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಸೀಮಿತವಾಗಿದ್ದ ಈ ರೋಗವು ಕಳೆದ 10 ವರ್ಷಗಳಿಂದೀಚೆಗೆ ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನಂತಹ ಪಶ್ಚಿಮ ಘಟ್ಟಗಳಲ್ಲೂ ಕಾಣಿಸಿಕೊಳ್ಳುತ್ತಿದೆ. ಮಂಗನ ಕಾಯಿಲೆಯಿಂದ ಪಾರಾಗಲು ನಮ್ಮ ಸುತ್ತಲೂ ನೈರ್ಮಲ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ.

ಇದನ್ನೂ ಓದಿ: Monkeypox: ಮಲೆನಾಡಿನಲ್ಲಿ ಹೆಚ್ಚುತ್ತಲೇ ಇದೆ ಮಂಗನ ಕಾಯಿಲೆ; ಮಂಕಿಪಾಕ್ಸ್ ಲಕ್ಷಣಗಳಿವು

ಮಂಗ ಕಾಯಿಲೆಗೆ ಕಾರಣವಾಗುವ ವೈರಸ್ ಗರ್ಭಿಣಿಯರು, ಮಕ್ಕಳು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ಜನರಿಗೆ ತಗುಲುವ ಅಪಾಯ ಹೆಚ್ಚು. ಈ ವೈರಸ್‌ ಸೋಂಕಿತ ಮಂಗನ ಮೈಯಲ್ಲಿರುವ ಹುಳಗಳು ಮನುಷ್ಯರನ್ನು ಕಚ್ಚುವ ಮೂಲಕ ಅಥವಾ ಸೋಂಕಿತ ಪ್ರಾಣಿಯೊಂದಿಗೆ ಸಂಪರ್ಕಕ್ಕೆ ಬರುವ ಮೂಲಕ ಹರಡುತ್ತದೆ. ಆದರೆ, ಇದುವರೆಗೂ ವ್ಯಕ್ತಿಯಿಂದ ವ್ಯಕ್ತಿಗೆ ಈ ಸೋಂಕು ಹರಡಿದ ಉದಾಹರಣೆಗಳಿಲ್ಲ.

ಮಂಗನ ಕಾಯಿಲೆಯನ್ನು ಹೇಗೆ ತಡೆಯಬಹುದು?:

– ಆದಷ್ಟೂ ಕಾಡಿನ ಕಡೆಗೆ ಹೋಗದಿರುವುದು.

– ಕೀಟ ನಿವಾರಕಗಳನ್ನು ಬಳಸುವುದು.

– ದಟ್ಟವಾದ ಕಾಡು ಇರುವ ಅಥವಾ ಮಂಗಗಳು ಓಡಾಡುವ ಪ್ರದೇಶಗಳಲ್ಲಿ ರಕ್ಷಣಾತ್ಮಕ ಬಟ್ಟೆಗಳನ್ನು ಧರಿಸುವುದು.

– ಪ್ರಾಣಿಗಳಿಂದ ಅಂತರ ಕಾಪಾಡಿಕೊಳ್ಳುವುದು.

– ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 9 February 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ