AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಸಲಹೆಗಳು

ಮಳೆಗಾಲ ಹಾಗೂ ಚಳಿಗಾಲದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿ ನಮ್ಮನ್ನು ಕಾಡುತ್ತದೆ. ಎಲ್ಲಾ ಋತುಗಳಲ್ಲೂ ನಿಮ್ಮ ಹೃದಯದ ಬಗ್ಗೆ ವಿಶೇಷ ಕಾಳಜಿವಹಿಸುವುದು ಉತ್ತಮ.

ಮಳೆಗಾಲದಲ್ಲಿ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಲ್ಲಿವೆ ಸಲಹೆಗಳು
Heart Health
TV9 Web
| Updated By: ನಯನಾ ರಾಜೀವ್|

Updated on: Jul 23, 2022 | 4:39 PM

Share

ಮಳೆಗಾಲ ಹಾಗೂ ಚಳಿಗಾಲದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿ ನಮ್ಮನ್ನು ಕಾಡುತ್ತದೆ. ಎಲ್ಲಾ ಋತುಗಳಲ್ಲೂ ನಿಮ್ಮ ಹೃದಯದ ಬಗ್ಗೆ ವಿಶೇಷ ಕಾಳಜಿವಹಿಸುವುದು ಉತ್ತಮ. ಮೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸುವುದರಿಂದ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ಹೃದಯವು ನಿಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿರುವುದರಿಂದ ಪ್ರತಿ ಋತುವಿನಲ್ಲಿ ವಿಶೇಷ ಕಾಳಜಿಯ ಅಗತ್ಯವಿರುತ್ತದೆ.

ಮಳೆಗಾಲವು ಹಲವು ಆರೋಗ್ಯ ಸಮಸ್ಯೆಗಳನ್ನು ಹೊತ್ತು ತರುತ್ತದೆ. ಆರ್ದ್ರ ವಾತಾವರಣದಿಂದಾಗಿ ಬ್ಯಾಕ್ಟೀರಿಯಾ, ವೈರಲ್ ಮತ್ತು ಫಂಗಲ್ ಸೋಂಕುಗಳ ತೀವ್ರತೆ ಹೆಚ್ಚಿರುತ್ತದೆ.

ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಿರುವಾಗ ನಮ್ಮ ದೇಹದ ಕಾರ್ಯಗಳು ಉತ್ತಮವಾಗಿರುತ್ತವೆ ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸಲು ಉತ್ತಮ ಮಾರ್ಗವೆಂದರೆ ತರಕಾರಿಗಳು, ಹಣ್ಣುಗಳು ಮತ್ತು ಧಾನ್ಯಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಮತ್ತು ದ್ವಿದಳ ಧಾನ್ಯಗಳು, ಮೀನು, ಮೊಟ್ಟೆ, ಬೀಜಗಳು ಮತ್ತು ಬೀಜಗಳಂತಹ ಆರೋಗ್ಯಕರ ಪ್ರೋಟೀನ್​ಯುಕ್ತ ಆಹಾರವನ್ನು ಸೇವನೆ ಮಾಡುವುದು.

ಹುಟ್ಟಿದಾಗಿನಿಂದ ಹೃದಯ ಸಮಸ್ಯೆ ಹೊಂದಿರುವವರು: ಬ್ಯಾಕ್ಟೀರಿಯಾ ಅಥವಾ ಶಿಲೀಂಧ್ರಗಳ ಸೋಂಕಿನಿಂದಾಗಿ ಹೃದಯದ ಕೋಣೆಗಳು ಮತ್ತು ಕವಾಟಗಳ ಉರಿಯೂತ, ಹೃದಯಾಘಾತ ಉಂಟಾಗಬಹುದು.

ವಿಟಮಿನ್ ಸೇವನೆ ಹೆಚ್ಚಿಸಿ ಆರ್ದ್ರ ವಾತಾವರಣದಿಂದಾಗಿ ವೈರಸ್‌ಗಳು ಮತ್ತು ಸೋಂಕುಗಳಿಗೆ ಮಳೆಗಾಲ ಅತ್ಯಂತ ಅನುಕೂಲಕರ ಸಮಯವಾಗಿದೆ. ವಿಟಮಿನ್ ಸಿ ಸೇವನೆಯನ್ನು ಹೆಚ್ಚಿಸುವ ಮೂಲಕ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮುಖ್ಯವಾಗುತ್ತದೆ. ತಾಜಾ ಹಸಿರು ತರಕಾರಿಗಳು, ಕಿತ್ತಳೆ, ವಿಟಮಿನ್ ಸಿ-ಭರಿತ ಆಹಾರವನ್ನು ಸೇವಿಸಬೇಕು.

ಆರೋಗ್ಯಕರ ಪ್ರೋಬಯಾಟಿಕ್ ಆಹಾರವನ್ನು ಸೇವಿಸಿ ನಮ್ಮ ಕರುಳಿನ ಆರೋಗ್ಯವು ನಮ್ಮ ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮೊಸರು, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ ಮತ್ತು ಮಜ್ಜಿಗೆಯಂತಹ ಪ್ರೋಬಯಾಟಿಕ್ ಆಹಾರಗಳು ನಿಮ್ಮ ಕರುಳಿನ ಆರೋಗ್ಯವನ್ನು ಉತ್ತಮವಾಗಿಸುತ್ತದೆ. ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ.

ಹೊರಗಡೆ ಆಹಾರವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ ಮಳೆಗಾಲದಲ್ಲಿ ಹೊರಗಡೆ ಆಹಾರ ತಿನ್ನುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ. ಕರಿದ ತಿನಿಸುಗಳನ್ನು ತಿನ್ನಬೇಕೆಂದರೆ ಮನೆಯಲ್ಲಿಯೇ ಸಿದ್ಧಪಡಿಸಿ ತಿನ್ನಿ.

ಮಳೆಯಲ್ಲಿ ಹೆಚ್ಚು ಓಡಾಡಬೇಡಿ ಮಳೆಗಾಲದಲ್ಲಿ ಮಳೆಯಲ್ಲಿ ಅಡ್ಡಾಡುವುದೆಂದರೆ ಖುಷಿ ಹೌದು ಆದರೆ ಮಳೆಗೆ ಮೈ ಒಡ್ಡಿದಾಗ ಲಕ್ಷಾಂತರ ಸೂಕ್ಷ್ಮ ಜೀವಿಗಳನ್ನು ನೀವು ಆಕರ್ಷಿಸಬಹುದು.

ಸೀಸನಲ್ ಹಣ್ಣುಗಳನ್ನು ತಿನ್ನಿ ಹಣ್ಣುಗಳು ಆರೋಗ್ಯವನ್ನು ಸಮೃದ್ಧಗೊಳಿಸುವ ಉತ್ತಮ ಮೂಲವಾಗಿದೆ ಮತ್ತು ಗಮನಾರ್ಹವಾದ ಪೌಷ್ಟಿಕಾಂಶದ ಮೌಲ್ಯಗಳನ್ನು ಹೊಂದಿರುತ್ತವೆ. ಕ್ರ್ಯಾನ್‌ಬೆರ್ರಿಗಳು, ಪೇರಳೆಗಳು, ಸೀತಾಫಲ, ಇತ್ಯಾದಿಗಳಂತಹ ಋತುಮಾನದ ಹಣ್ಣುಗಳನ್ನು ಸೇವಿಸಬೇಕು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?