AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smallpox: ಬಿಹಾರದ 35 ಕುಟುಂಬಗಳ 100 ಕ್ಕೂ ಹೆಚ್ಚು ಜನರಲ್ಲಿ ಸಿಡುಬು ಪತ್ತೆ

ಬಿಹಾರದ ಸುಪೌಲ್ ಜಿಲ್ಲೆಯ ತ್ರಿವೇಣಿಗಂಜ್ ಗ್ರಾಮದಲ್ಲಿ 35 ಕುಟುಂಬಗಳ 100 ಕ್ಕೂ ಹೆಚ್ಚು ಜನರು ಸಿಡುಬು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರಲ್ಲಿ ಮಕ್ಕಳು ಮತ್ತು ವೃದ್ಧರೂ ಸೇರಿದ್ದಾರೆ ಎಂಬುದು ತಿಳಿದುಬಂದಿದೆ.

Smallpox: ಬಿಹಾರದ 35 ಕುಟುಂಬಗಳ 100 ಕ್ಕೂ ಹೆಚ್ಚು ಜನರಲ್ಲಿ ಸಿಡುಬು ಪತ್ತೆ
ಬಿಹಾರದಲ್ಲಿ ಸಿಡುಬು ಪತ್ತೆ
ಅಕ್ಷತಾ ವರ್ಕಾಡಿ
|

Updated on: Jun 22, 2023 | 2:50 PM

Share

ಬಿಹಾರದ ಸುಪೌಲ್ ಜಿಲ್ಲೆಯ ತ್ರಿವೇಣಿಗಂಜ್ ಗ್ರಾಮದಲ್ಲಿ 35 ಕುಟುಂಬಗಳ 100 ಕ್ಕೂ ಹೆಚ್ಚು ಜನರು ಸಿಡುಬು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರಲ್ಲಿ ಮಕ್ಕಳು ಮತ್ತು ವೃದ್ಧರೂ ಸೇರಿದ್ದಾರೆ. ಆರೋಗ್ಯ ಇಲಾಖೆಯಿಂದ ಯಾವುದೇ ವೈದ್ಯಕೀಯ ಚಿಕಿತ್ಸೆ ಸಿಕ್ಕಿಲ್ಲ ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಕಳೆದ ಮೂರು ತಿಂಗಳಿನಿಂದ ಸೋಂಕು ಹರಡುತ್ತಿದ್ದರೂ ಜಿಲ್ಲಾ ಆರೋಗ್ಯ ಇಲಾಖೆಗೆ ಸೋಮವಾರದವರೆಗೆ ರೋಗ ಹರಡುವ ಬಗ್ಗೆ ಮಾಹಿತಿ ಇರಲಿಲ್ಲ ಎಂಬುದು ತಿಳಿದುಬಂದಿದೆ. ಮಂಗಳವಾರ ವೈದ್ಯಕೀಯ ತಂಡವೊಂದು ಗ್ರಾಮಕ್ಕೆ ಆಗಮಿಸಿದೆ. ಸ್ಥಳೀಯ ಮಟ್ಟದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳನ್ನು ಗುರುತಿಸಲು ಆರೋಗ್ಯ ಇಲಾಖೆಗೆ ಸಹಾಯ ಮಾಡಿದ್ದೇವೆ ಎಂದು ತ್ರಿವೇಣಿಗಂಜ್‌ನ ವಾರ್ಡ್ ಸಂಖ್ಯೆ 4 ರ ನಿವಾಸಿ ಮೊಹಮ್ಮದ್ ಇಸ್ಮೈಲ್ ಹೇಳಿದ್ದಾರೆ.

ರೋಗದ ಬಗ್ಗೆ ತಿಳಿದ ತಕ್ಷಣ, ಸೋಂಕಿತರಿಗೆ ಚಿಕಿತ್ಸೆ ನೀಡಲು ನಾವು ಗ್ರಾಮಕ್ಕೆ ವೈದ್ಯಕೀಯ ತಂಡವನ್ನು ಕಳುಹಿಸಿದ್ದೇವೆ. ಪ್ರಸ್ತುತ ರೋಗಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸುಪೌಲ್‌ನ ಸಿವಿಲ್ ಸರ್ಜನ್ ಡಾ ಮಿಹಿರ್ ಕುಮಾರ್ ಹೇಳಿದ್ದಾರೆ. ಜೆಹಾನಾಬಾದ್ ಸಂಸದ ಚಂದೇಶ್ವರ್ ಪ್ರಸಾದ್ ಚಂದ್ರವಂಶಿ ಅವರ ಪುತ್ರನ ಮಾಲೀಕತ್ವದ ಸಂಸ್ಥೆಗೆ ಪ್ಲಮ್ ಗುತ್ತಿಗೆ ನೀಡಿದ್ದಕ್ಕಾಗಿ ಬಿಹಾರದ ನಿತೀಶ್ ಕುಮಾರ್ ಸರ್ಕಾರವನ್ನು ಬಿಜೆಪಿಯ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಒಂದು ತಿಂಗಳು ಅನ್ನ ಸೇವಿಸದಿದ್ದರೆ, ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? ತಜ್ಞರು ಹೇಳುವುದೇನು?

ತೀವ್ರ ಅಸ್ವಸ್ಥರು, ಗರ್ಭಿಣಿಯರು ಮತ್ತು ಶಿಶುಗಳಿಗೆ ಮೀಸಲಾದ ರಾಜ್ಯದ ಉಚಿತ ಆಂಬ್ಯುಲೆನ್ಸ್ ಸೇವೆಗಾಗಿ 1,600 ಕೋಟಿ ರೂಪಾಯಿಗಳ ಗುತ್ತಿಗೆಯನ್ನು ಮುಖ್ಯಮಂತ್ರಿ ಜೆಡಿಯುಗೆ ಸೇರಿದ ಚಂದ್ರವಂಶಿ ಅವರ ಮಗನಿಗೆ ನೀಡಲಾಗಿದೆ ಎಂದು ಅವರು ಪತ್ರಿಕೆಯ ವರದಿಯನ್ನು ಉಲ್ಲೇಖಿಸಿದರು. ಸರ್ಕಾರವು ಸಂಸದರಿಗೆ ಅನುಕೂಲವಾಗುವಂತೆ ರೋಗ ಪರಿಸ್ಥಿತಿಯನ್ನು ನಿರ್ಲಕ್ಷಿಸಿ ಕಂಪನಿಗೆ ಗುತ್ತಿಗೆ ನೀಡಿರುವುದು ಕಂಡುಬರುತ್ತದೆ. ಇದು ರಾಜ್ಯದ ಜನರ ಮೇಲೆ ನಡೆಯುತ್ತಿರುವ ಅನ್ಯಾಯ ಎಂದು ಪ್ರಸಾದ್ ಆರೋಪಿಸಿದ್ದಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ