AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಗ್ಗೆ ಸೊಪ್ಪು: ಹಾಲು-ಬಾಳೆಹಣ್ಣಿಗಿಂತಲೂ ಹೆಚ್ಚು ಪೌಷ್ಟಿಕಾಂಶವಿರುವ ಈ ಸೊಪ್ಪಿನಲ್ಲಿದೆ ಅನೇಕ ಪ್ರಯೋಜನ!

ನಮಗೆ ತಿಳಿದಿರುವ ಎಲ್ಲಾ ಎಲೆಗಳಲ್ಲಿಯೂ ವಿವಿಧ ರೀತಿಯ ಪ್ರಯೋಜನಗಳಿರುತ್ತವೆ. ಅದರಲ್ಲಿಯೂ ನುಗ್ಗೆ ಸೊಪ್ಪು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ಈ ಸೊಪ್ಪು ಕಾಯಿಲೆಗೆ ಔಷಧವಲ್ಲದಿದ್ದರೂ ಆರೋಗ್ಯ ಕಾಪಾಡಿಕೊಳ್ಳಲು ನಮ್ಮ ಆಹಾರದ ಭಾಗವಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಇದು ಯಾವ ರೀತಿ ಪ್ರಯೋಜನಕಾರಿ ಮತ್ತು ಯಾವ ರೀತಿ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನುಗ್ಗೆ ಸೊಪ್ಪು: ಹಾಲು-ಬಾಳೆಹಣ್ಣಿಗಿಂತಲೂ ಹೆಚ್ಚು ಪೌಷ್ಟಿಕಾಂಶವಿರುವ ಈ ಸೊಪ್ಪಿನಲ್ಲಿದೆ ಅನೇಕ ಪ್ರಯೋಜನ!
Moringa Leaves BenefitsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 28, 2026 | 6:45 PM

Share

ಮುಖ್ಯಾಂಶಗಳು

  • ನುಗ್ಗೆ ಸೊಪ್ಪು ಸೇವನೆಯಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆಯೇ? ಇಲ್ಲಿದೆ ಉತ್ತರ
  • ನುಗ್ಗೆ ಸೊಪ್ಪನ್ನು ಸೂಪರ್‌ಫುಡ್ ಎಂದು ಕರೆಯುವುದಕ್ಕೆ ಕಾರಣವೇನು? ತಜ್ಞರು ಹೇಳಿರುವ ಪ್ರಯೋಜನಗಳು
  • ನುಗ್ಗೆ ಸೊಪ್ಪು ಸೇವನೆ ಮಾಡುವಾಗ ಯಾರು ಎಚ್ಚರಿಕೆ ವಹಿಸಬೇಕು

ಇತ್ತೀಚಿನ ದಿನಗಳಲ್ಲಿ “ಸೂಪರ್‌ಫುಡ್”ಗಳ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚುತ್ತಿದೆ. ಆದರೆ ನಮ್ಮ ಸುತ್ತಮುತ್ತ ಸುಲಭವಾಗಿ ಸಿಗುವ ನುಗ್ಗೆ ಸೊಪ್ಪು (Moringa Leaves) ಪೌಷ್ಟಿಕಾಂಶಗಳ ಭಂಡಾರವಾಗಿದೆ. ಇದರಲ್ಲಿ ವಿಟಮಿನ್‌ಗಳು, ಖನಿಜಾಂಶಗಳು, ಆಂಟಿಆಕ್ಸಿಡೆಂಟ್‌ಗಳು ಮತ್ತು ಸಸ್ಯಾಧಾರಿತ ಪ್ರೋಟೀನ್‌ಗಳು ಸಮೃದ್ಧವಾಗಿದ್ದು, ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿದೆ. ಈ ಸೊಪ್ಪು ಕಾಯಿಲೆಗೆ ಔಷಧವಲ್ಲದಿದ್ದರೂ ಆರೋಗ್ಯ ಕಾಪಾಡಿಕೊಳ್ಳಲು ನಮ್ಮ ಆಹಾರದ ಭಾಗವಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಇದು ಯಾವ ರೀತಿ ಪ್ರಯೋಜನಕಾರಿ ಮತ್ತು ಯಾವ ರೀತಿ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ನುಗ್ಗೆ ಸೊಪ್ಪಿನಲ್ಲಿರುವ ಪ್ರಮುಖ ಪೌಷ್ಟಿಕಾಂಶಗಳು:

ವಿಟಮಿನ್ ಎ – ಕಣ್ಣಿನ ಆರೋಗ್ಯಕ್ಕೆ ಸಹಕಾರಿ ವಿಟಮಿನ್ ಸಿ – ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ವಿಟಮಿನ್ ಇ – ಆಂಟಿಆಕ್ಸಿಡೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ ಕ್ಯಾಲ್ಸಿಯಂ – ಮೂಳೆ ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಕಾರಿ ಕಬ್ಬಿಣ (Iron) – ರಕ್ತಹೀನತೆ ತಡೆಗಟ್ಟಲು ನೆರವಾಗಬಹುದು ಪೊಟ್ಯಾಸಿಯಂ – ರಕ್ತದೊತ್ತಡ ನಿಯಂತ್ರಣಕ್ಕೆ ಸಹಾಯಕಾರಿ ಫೈಬರ್ – ಜೀರ್ಣಕ್ರಿಯೆ ಸುಧಾರಿಸಲು ಸಹಕಾರಿ ಸಸ್ಯಾಧಾರಿತ ಪ್ರೋಟೀನ್ – ಸ್ನಾಯುಗಳ ಆರೋಗ್ಯ ಕಾಪಾಡುತ್ತದೆ

ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು:

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ನೆರವಾಗುತ್ತವೆ. ಇದರಿಂದ ಸಾಮಾನ್ಯ ವೈರಲ್ ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಸಾಮರ್ಥ್ಯ ಉತ್ತಮವಾಗಬಹುದು.

ರಕ್ತಹೀನತೆ ತಡೆಗಟ್ಟಲು ಸಹಕಾರಿ: ನುಗ್ಗೆ ಸೊಪ್ಪಿನಲ್ಲಿ ಕಬ್ಬಿಣದ ಅಂಶವಿದ್ದು, ಸಮತೋಲಿತ ಆಹಾರದ ಭಾಗವಾಗಿ ಸೇವಿಸಿದರೆ ಹಿಮೋಗ್ಲೋಬಿನ್ ಮಟ್ಟವನ್ನು ಕಾಪಾಡಲು ನೆರವಾಗಬಹುದು.

ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು: ಕ್ಯಾಲ್ಸಿಯಂ ಮತ್ತು ಫಾಸ್ಫರಸ್‌ನಂತಹ ಖನಿಜಾಂಶಗಳು ಮೂಳೆ ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ. ವಿಶೇಷವಾಗಿ ವಯೋವೃದ್ಧರಿಗೆ ಇದು ಪ್ರಯೋಜನಕಾರಿಯಾಗಿದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ: ಫೈಬರ್ ಹೆಚ್ಚಿರುವುದರಿಂದ ಮಲಬದ್ಧತೆ ಕಡಿಮೆಯಾಗಲು ಮತ್ತು ಜೀರ್ಣಾಂಗದ ಕಾರ್ಯ ಸುಧಾರಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಈ ತರಕಾರಿಗಳನ್ನು ತಿನ್ನುವುದನ್ನು ಆದಷ್ಟು ತಪ್ಪಿಸಿ

ಹೃದಯದ ಆರೋಗ್ಯಕ್ಕೆ ಒಳ್ಳೆಯದು: ಆಂಟಿಆಕ್ಸಿಡೆಂಟ್‌ಗಳು ಮತ್ತು ಸಸ್ಯ ಸಂಯುಕ್ತಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. ಸಮತೋಲಿತ ಆಹಾರ ಮತ್ತು ವ್ಯಾಯಾಮದೊಂದಿಗೆ ಸೇವಿಸಿದರೆ ಹೃದಯದ ಆರೋಗ್ಯಕ್ಕೆ ಒಳ್ಳೆಯದು.

ಕಣ್ಣಿನ ಆರೋಗ್ಯ ಕಾಪಾಡುತ್ತದೆ: ವಿಟಮಿನ್ಎ ಮತ್ತು ಬೇಟಾ-ಕ್ಯಾರೋಟಿನ್ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಜೊತೆಗೆ ದೃಷ್ಟಿ ಚೆನ್ನಾಗಿರುತ್ತದೆ.

ಚರ್ಮ ಮತ್ತು ಕೂದಲಿನ ಆರೈಕೆ: ವಿಟಮಿನ್ ಇ ಹಾಗೂ ಆಂಟಿಆಕ್ಸಿಡೆಂಟ್‌ಗಳು ಚರ್ಮವನ್ನು ಆರೋಗ್ಯಕರವಾಗಿಡಲು ಮತ್ತು ಕೂದಲಿನ ಬೆಳವಣಿಗೆಗೆ ಸಹಕಾರಿ.

ನುಗ್ಗೆ ಸೊಪ್ಪನ್ನು ಹೇಗೆ ಸೇವಿಸಬಹುದು?

  • ನುಗ್ಗೆ ಸೊಪ್ಪಿನ ಪಲ್ಯ
  • ಸಾಂಬಾರ್ ಅಥವಾ ಸಾರು
  • ಸೂಪ್‌ನಲ್ಲಿ
  • ಚಪಾತಿ ಹಿಟ್ಟಿಗೆ ಸೇರಿಸಿ
  • ಸ್ಮೂಥಿಯಲ್ಲಿ ಸೇರಿಸಬಹುದು

ಯಾರು ಎಚ್ಚರಿಕೆಯಿಂದ ಸೇವಿಸಬೇಕು?

  • ಗರ್ಭಿಣಿಯರು ಹೆಚ್ಚಿನ ಪ್ರಮಾಣದಲ್ಲಿ ನುಗ್ಗೆ ಸೊಪ್ಪನ್ನು ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯಬೇಕು.
  • ಮಧುಮೇಹದ ಔಷಧಿ ಸೇವಿಸುವವರು ವೈದ್ಯರ ಸಲಹೆ ಪಡೆದು ಆ ಬಳಿಕ ಸೇವಿಸುವುದು ಉತ್ತಮ.
  • ಕಡಿಮೆ ರಕ್ತದೊತ್ತಡ ಇರುವವರು ಅತಿಯಾಗಿ ಸೇವಿಸಬಾರದು.
  • ಥೈರಾಯ್ಡ್ ಅಥವಾ ದೀರ್ಘಕಾಲದ ಕಾಯಿಲೆ ಇರುವವರು ವೈದ್ಯರ ಸಲಹೆ ಪಡೆಯಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ