AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿರುತ್ತಾ, ಇದಕ್ಕೆ ಕಾರಣ ತಿಳಿಯಲು ಈ ಸ್ಟೋರಿ ಓದಿ

ಕೆಲವರು ಬೆಳಿಗ್ಗೆ ಎದ್ದ ತಕ್ಷಣ ಮುಖ ನೋಡಿಕೊಂಡರೆ ಅದು ಊದಿಕೊಂಡಿರುತ್ತದೆ. ಸಾಮಾನ್ಯವಾಗಿ ಇದನ್ನು ಎಲ್ಲರೂ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಸಣ್ಣ ಸಮಸ್ಯೆಯಲ್ಲ ಇದಕ್ಕೆ ಕಾರಣ ಬೇರೆಯೇ ಇದೆ. ನಿಮ್ಮ ಕೆಲವು ಅನಾರೋಗ್ಯಕರ ಅಭ್ಯಾಸಗಳು ಈ ರೀತಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದರೆ ಇದನ್ನು ನೀವಾಗಿಯೇ ಕಡಿಮೆ ಮಾಡಿಕೊಳ್ಳಬಹುದು. ಆದರೆ ಈ ರೀತಿಯಾಗುವುದಕ್ಕೆ ನಿಖರವಾದ ಕಾರಣವೇನು, ಕಳೆದ ಕೆಲವು ವರ್ಷಗಳಿಂದ ಈ ರೀತಿ ಸಮಸ್ಯೆ ಕಂಡುಬರುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದಾಗ ಮುಖ ಊದಿಕೊಂಡಿರುತ್ತಾ, ಇದಕ್ಕೆ ಕಾರಣ ತಿಳಿಯಲು ಈ ಸ್ಟೋರಿ ಓದಿ
Morning Face Swelling
ಪ್ರೀತಿ ಭಟ್​, ಗುಣವಂತೆ
|

Updated on: Oct 06, 2025 | 5:16 PM

Share

ಇತ್ತೀಚಿಗೆ ಆರೋಗ್ಯ (Health) ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲಾಗಿದೆ. ಒಂದಿಲ್ಲೊಂದು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಲೇ ಇರುತ್ತದೆ. ಕೆಲವು ಗಂಭೀರ ಸಮಸ್ಯೆಗಳಾಗಿದ್ದರೆ ಇನ್ನು ಕೆಲವು ಬಗೆಹರಿಸಿಕೊಳ್ಳಬಹುದಾಗಿರುತ್ತದೆ. ಅಂತವುಗಳಲ್ಲಿ ಈ ಮುಖ (Face) ಊದಿಕೊಳ್ಳುವ ಸಮಸ್ಯೆಯೂ ಒಂದು. ಅನೇಕರು ಬೆಳಿಗ್ಗೆ ಎದ್ದು ಮುಖವನ್ನು ಕನ್ನಡಿಯಲ್ಲಿ ನೋಡಿಕೊಂಡರೆ ಮುಖ ಸ್ವಲ್ಪ ಊದಿಕೊಂಡಂತೆ (Face Swelling) ಕಾಣುವುದನ್ನು ಗಮನಿಸಿರುತ್ತಾರೆ. ಸ್ನಾನ, ಚಹಾ ಅಥವಾ ಕಾಫಿ ಕುಡಿದ ನಂತರವೂ ಮುಖದ ಮೇಲಿನ ಊತವು ಕಡಿಮೆ ಆಗುವುದಿಲ್ಲ. ಆದರೆ ಈ ರೀತಿಯಾಗುವುದಕ್ಕೆ ನಿಖರವಾದ ಕಾರಣವೇನು, ಕಳೆದ ಕೆಲವು ವರ್ಷಗಳಿಂದ ಈ ರೀತಿ ಸಮಸ್ಯೆ ಕಂಡುಬರುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬೆಳಿಗ್ಗೆ ಎದ್ದ ತಕ್ಷಣ ಅನೇಕರಲ್ಲಿ ಮುಖದ ಊತ ಕಾಣಿಸಿಕೊಳ್ಳುತ್ತದೆ. ಕಳೆದ ಕೆಲವು ವರ್ಷಗಳಿಂದ, ಮುಖದ ಊತದ ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿದೆ. ಇದು ಸಂಭವಿಸಲು ಕಾರಣ, ಊಟಕ್ಕೆ ಕುಳಿತಾಗ ಅಗತ್ಯಕ್ಕಿಂತ ಹೆಚ್ಚಾಗಿ ಉಪ್ಪನ್ನು ಸೇವನೆ ಮಾಡುವುದಾಗಿದೆ. ಈ ರೀತಿ ಹೆಚ್ಚಿನ ಪ್ರಮಾಣದಲ್ಲಿ ಉಪ್ಪನ್ನು ಸೇವನೆ ಮಾಡಿದಾಗ ಮುಖದ ಊತ ಉಂಟಾಗುತ್ತದೆ. ಆದ್ದರಿಂದ, ಊಟ ಮಾಡುವಾಗ ಉಪ್ಪನ್ನು ಕಡಿಮೆ ಸೇವನೆ ಮಾಡುವುದು ಅವಶ್ಯಕ. ಉಪ್ಪು ದೇಹದಲ್ಲಿ ಸೋಡಿಯಂ ಮಟ್ಟವನ್ನು ಹೆಚ್ಚಿಸುತ್ತದೆ, ಮಾತ್ರವಲ್ಲ ಮುಖ ಊದಿಕೊಂಡ ಹಾಗೆ ಕಾಣುವಂತೆ ಮಾಡುತ್ತದೆ.

ಇದನ್ನೂ ಓದಿ: ಬಾಳೆಹಣ್ಣಿನ ಸಿಪ್ಪೆಗೆ ಈ 2 ವಸ್ತುಗಳನ್ನು ಬೆರೆಸಿ ಮುಖಕ್ಕೆ ಹಚ್ಚಿದ್ರೆ ಮುಖ ಹೊಳೆಯುವುದು ಖಂಡಿತ

ಮುಖದ ಊತವನ್ನು ಕಡಿಮೆ ಮಾಡಲು ಸಲಹೆಗಳು:

ರಾತ್ರಿ ಮಲಗುವ ಮೊದಲು ಹೆಚ್ಚು ಆಹಾರ ಸೇವನೆ ಮಾಡಬಾರದು ಜೊತೆಗೆ ಉಪ್ಪು ಕಡಿಮೆ ಇರುವಂತಹ ಆಹಾರವನ್ನು ಸೇವನೆ ಮಾಡಬೇಕು. ಈ ರೀತಿ ಮಾಡುವುದರಿಂದ ಮುಖದ ಊತವನ್ನು ಕಡಿಮೆ ಮಾಡಬಹುದಾಗಿದೆ. ಉಪ್ಪಿನ ಸೇವನೆಯ ಜೊತೆಗೆ, ನಿದ್ರೆಯ ಗುಣಮಟ್ಟವೂ ಸಹ ಇದಕ್ಕೆ ಕಾರಣವಾಗಿದೆ. ಹಾಗಾಗಿ ರಾತ್ರಿ ಸಮಯದಲ್ಲಿ ತುಂಬಾ ಕಡಿಮೆ ನಿದ್ರೆ ಮಾಡಿದರೆ ಅಥವಾ ಒಂದೇ ಬದಿಯಲ್ಲಿ ಮಲಗಿದರೆ, ಮುಖಕ್ಕೆ ರಕ್ತ ಪರಿಚಲನೆ ಸರಿಯಾಗಿ ಆಗುವುದಿಲ್ಲ. ಹಾಗಾಗಿ ಇದು ಕೂಡ ಮುಖದ ಊತಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ರಾತ್ರಿ 7 ರಿಂದ 8 ಗಂಟೆ ಚೆನ್ನಾಗಿ ನಿದ್ರಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇದು ಮುಖದ ಊತದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಇದು ನಿಮಗೆ ಚೆನ್ನಾಗಿ ನಿದ್ರೆ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ