AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರಗಳ ಸಮಸ್ಯೆಯನ್ನು ಪ್ರಾರಂಭದಲ್ಲೇ ಗುರುತಿಸಲು ಶೇ.60ರಷ್ಟು ಜನರು ವಿಫಲರಾಗುತ್ತಾರೆ; ಸಮೀಕ್ಷೆ

ದೇಹಕ್ಕೆ ಬೇಕಾದ ಜೀವಸತ್ವಗಳು ಮತ್ತು ವಿಟಮಿನ್​ಗಳನ್ನು ಆಹಾರದಿಂದ ಪಡೆಯಬೇಕು. ಇದರಲ್ಲಿ ಸಮಸ್ಯೆ ಏನೆಂದರೆ ಅಗತ್ಯವಾದ ವಿಟಮಿನ್ ಬಿ12 ಅಂಶವನ್ನು ಜನರು ಕಡೆಗಣಿಸುತ್ತಾರೆ.

ನರಗಳ ಸಮಸ್ಯೆಯನ್ನು ಪ್ರಾರಂಭದಲ್ಲೇ ಗುರುತಿಸಲು ಶೇ.60ರಷ್ಟು ಜನರು ವಿಫಲರಾಗುತ್ತಾರೆ; ಸಮೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 05, 2021 | 11:07 AM

Share

ಭಾರತದಲ್ಲಿ ಶೇ. 60ರಷ್ಟು ಜನರು ನರಗಳ ಸಮಸ್ಯೆಯನ್ನು ಪ್ರಾರಂಭದಲ್ಲೇ ಗುರುತಿಸಲು ವಿಫಲರಾಗುತ್ತಿದ್ದಾರೆ ಎಂಬುದು ಗುರುವಾರ ಬಿಡುಗಡೆಗೊಂಡ ಆರೋಗ್ಯ ಸಮೀಕ್ಷೆಯಿಂದ ತಿಳಿದು ಬಂದಿದೆ. ಹೀಲ್ ಹೆಲ್ತ್ ಸಂಶೋಧನೆಯಿಂದ ತಿಳಿದು ಬಂದಂತೆ ಭಾರತದಲ್ಲಿ 12 ನಗರಗಳನ್ನು ಆಯ್ದು 1,800 ಸ್ಪಂದಕರೊಂದಿಗೆ ಸಮೀಕ್ಷೆ ನಡೆಸಲಾಯಿತು. ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ. 90ರಷ್ಟು ಆರೋಗ್ಯಕರ ನರಗಳು ಮುಖ್ಯವೆಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಕೇವಲ ಶೇ. 38ರಷ್ಟು ಜನರು ನರಗಳು ರಕ್ತನಾಳಗಳಿಗಿಂತ ಭಿನ್ನ ಎಂದು ತಿಳಿದಿದ್ದಾರೆ. ಜನರಿಗೆ ಸೀಮಿತವಾದ ಜ್ಞಾನವಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಬಿ ಜೀವಸತ್ವಗಳ ಕೊರತೆಯು ನರಗಳ ಹಾನಿಗೆ ಕಾರಣವಾಗುತ್ತದೆ ಎಂದು ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಟೈಮ್ಸ್ ನೌ ನ್ಯೂಸ್ ವರದಿ ಮಾಡಿದೆ.

ಇದರ ಜತೆಗೆ ವಿಟಮಿನ್ ಬಿ ಕೊರತೆಯಿಂದ ಜನರು ದುರ್ಬಲ ನರಗಳನ್ನು ಹೊಂದುತ್ತಿದ್ದಾರೆ. ಅಪೌಷ್ಟಿಕತೆಯಿಂದಾಗಿ ನಿಮ್ಮ ನರಗಳು ಶಕ್ತಿಯನ್ನು ಪಡೆಯುತ್ತಿಲ್ಲ. ವಿಟಮಿನ್ ಬಿ12 ಕೊರತೆಯು ಭಾರತದಲ್ಲಿ ಅತ್ಯಂತ ಸಾಮಾನ್ಯವಾಗಿದೆ. ಇತರ ಆರೋಗ್ಯ ಕೊರತೆಗಳ ಜತೆಗೆ ಅನುಚಿತ ಆಹಾರ ಮತ್ತು ಜೀವನ ಶೈಲಿಯ ಬದಲಾವಣೆಗಳಿಂದಾಗಿ ಅಪೌಷ್ಟಿಕತೆಯು ಕಾಡುತ್ತಿದೆ.

ದೇಹಕ್ಕೆ ಬೇಕಾದ ಜೀವಸತ್ವಗಳು ಮತ್ತು ವಿಟಮಿನ್​ಗಳನ್ನು ಆಹಾರದಿಂದ ಪಡೆಯಬೇಕು. ಇದರಲ್ಲಿ ಸಮಸ್ಯೆ ಏನೆಂದರೆ ಅಗತ್ಯವಾದ ವಿಟಮಿನ್ ಬಿ12 ಅಂಶವನ್ನು ಜನರು ಕಡೆಗಣಿಸುತ್ತಾರೆ. ಹಾಗಾಗಿಯೇ ಜನರಲ್ಲಿ ಈ ಅಂಶ ಕಡಿಮೆಯಾಗುತ್ತಿದೆ, ವಿಶೇಷವಾಗಿ ವಯಸ್ಸಾದವರಲ್ಲಿ ಎಂದು ಬಾಂಬೆ ಹಾಸ್ಪಿಟಲ್ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್​ನ ಹೆಚ್ಒಡಿ ಡಾ. ಸತೀಶ್ ಖಾದಿಲ್ಕರ್ ಹೇಳಿದ್ದಾರೆ.

ಶೇ. 73ರಷ್ಟು ಜನರು ತರಕಾರಿಗಳನ್ನು ಅವಲಂಬಿಸಿದ್ದಾರೆ. ಶೇ. 69ರಷ್ಟು ಜನರು ವಿಟಮಿನ್ ಬಿ12ಗಾಗಿ ಹಣ್ಣುಗಳನ್ನು ಅವಲಂಬಿಸಿದ್ದಾರೆ ಎಂಬುದು ರಾಷ್ಟ್ರೀಯ ಸಮೀಕ್ಷೆಯ ಫಲಿತಾಂಶದಿಂದ ತಿಳಿದು ಬಂದಿದೆ. ಉತ್ತಮ ಪೌಷ್ಟಿಕಾಂಶವು ಸಾಮಾನ್ಯವಾಗಿ ನರಗಳ ಆರೋಗ್ಯ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ನೀವು ಸೇವಿಸುವ ಆಹಾರವು ನಿಮ್ಮ ನರಮಂಡಲದ ಕಾರ್ಯ ಚಟುವಟಿಕೆಯನ್ನು ಸುಧಾರಿಸತ್ತದೆ ಎಂದು ಭಾರತೀಯ ವೈದ್ಯ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ. ತಿವಾಸ್ಕರ್ ಹೇಳಿದ್ದಾರೆ.

ಇದನ್ನೂ ಓದಿ:

Health Tips: ಯಕೃತ್ತು ಆರೋಗ್ಯ ಸುಧಾರಿಸಲು ಸೇವಿಸಬೇಕಾದ ಆಹಾರ ಪದಾರ್ಥಗಳು

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

(Mote Then 60 percent Indian people have poor nerve health Ignored survey)

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!