AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟ ಹತ್ತುವಾಗ ಉಸಿರಾಡಲು ಕಷ್ಟವಾದರೆ ಈ ಸರಳ ಕ್ರಮ ನಿಮಗೆ ಸಹಾಯ ಮಾಡಬಹುದು

ಪ್ರವಾಸ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಅದರಲ್ಲಿಯೂ ಕೆಲವರು ತಮ್ಮ ಒತ್ತಡದ ಜೀವನಕ್ಕೆ ಸ್ವಲ್ಪ ವಿರಾಮ ನೀಡಲು ಮತ್ತು ಒಳ್ಳೆಯ ಸಮಯ ಕಳೆಯಲು ಆಗಾಗ ಬೆಟ್ಟ- ಗುಡ್ಡದ ಕಡೆಗೆ ಸುತ್ತಾಡಲು ಹೋಗುತ್ತಾರೆ. ಇದು ಒಳ್ಳೆಯ ಅಭ್ಯಾಸ. ಆದರೆ ಕೆಲವರು ಎತ್ತರದ ಪ್ರದೇಶಗಳಿಗೆ ಹೋಗುತ್ತಿರುವಾಗ ಉಸಿರಾಟದ ಸಂಬಂಧಿ ತೊಂದರೆಯನ್ನು ಅನುಭವಿಸುತ್ತಾರೆ. ಅಂತಹ ಸಂದರ್ಭಗಳಲ್ಲಿ, ಸಮಯಕ್ಕೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಬೆಟ್ಟ ಹತ್ತುವಾಗ ಉಸಿರಾಡಲು ಕಷ್ಟವಾದರೆ ಈ ಸರಳ ಕ್ರಮ ನಿಮಗೆ ಸಹಾಯ ಮಾಡಬಹುದು
Safe Hill Station TravelImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 26, 2026 | 5:47 PM

Share

ಮುಖ್ಯಾಂಶಗಳು

  • ಹಿಲ್ ಸ್ಟೇಷನ್ ಪ್ರವಾಸದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಪ್ರಮುಖ ಟಿಪ್ಸ್
  • ಎತ್ತರದ ಪ್ರದೇಶಗಳಲ್ಲಿ ಸುರಕ್ಷಿತ ಪ್ರಯಾಣಕ್ಕೆ ಸಲಹೆಗಳು
  • ಪ್ರವಾಸಕ್ಕೆ ಹೋಗುವಾಗ ಮಾಡಬಾರದ ಕೆಲಸಗಳು

ಬೆಟ್ಟ ಪ್ರದೇಶಗಳಿಗೆ ಪ್ರವಾಸ (Travel) ಹೋಗುವುದು ಬಹುತೇಕರಿಗೆ ಇಷ್ಟ. ಆದರೆ ಎತ್ತರದ ಪ್ರದೇಶಗಳಿಗೆ ಹೋದ ನಂತರ ಕೆಲವರಿಗೆ ಉಸಿರಾಟದ ತೊಂದರೆ, ಆಯಾಸ, ತಲೆಸುತ್ತು ಅಥವಾ ದೌರ್ಬಲ್ಯ ಕಾಣಿಸಬಹುದು. ಎತ್ತರ ಹೆಚ್ಚಾದಂತೆ ಗಾಳಿಯಲ್ಲಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗುವುದರಿಂದ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಕೆಲವರು ಇದಕ್ಕೆ ಹೆದರಿ ಏನು ಮಾಡಬೇಕು ಎಂದು ತಿಳಿಯದೆಯೇ ಪ್ಯಾನಿಕ್ ಆಗುತ್ತಾರೆ. ಹಾಗಾಗಿ ಉಸಿರಾಟದ ತೊಂದರೆ (Breathing Problems) ಉಂಟಾದರೆ ಏನು ಮಾಡಬೇಕು, ಈ ಸಮಯದಲ್ಲಿ ಏನನ್ನು ಮಾಡಬಾರದು ಎಂಬುದನ್ನು ತಿಳಿದುಕೊಂಡಿರುವುದು ಬಹಳ ಮುಖ್ಯ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಉಸಿರಾಟದ ತೊಂದರೆ ಉಂಟಾದರೆ ಏನು ಮಾಡಬೇಕು?

ಬೆಟ್ಟ ಪ್ರದೇಶದಲ್ಲಿ ಉಸಿರಾಟದ ತೊಂದರೆ ಕಂಡುಬಂದರೆ ಮೊದಲು ಆತಂಕಪಡಬೇಡಿ. ಸ್ವಲ್ಪ ಸಮಯ ವಿಶ್ರಾಂತಿ ಪಡೆಯಿರಿ. ವೇಗವಾಗಿ ನಡೆಯುವುದು, ಓಡುವುದು ಅಥವಾ ಹೆಚ್ಚು ದೈಹಿಕ ಶ್ರಮ ಮಾಡುವುದನ್ನು ತಪ್ಪಿಸಿ. ನಿಧಾನವಾಗಿ ಮತ್ತು ಆಳವಾಗಿ ಉಸಿರಾಡಲು ಪ್ರಯತ್ನಿಸಿ. ಸಾಕಷ್ಟು ನೀರು ಕುಡಿಯುವ ಮೂಲಕ ದೇಹವನ್ನು ಹೈಡ್ರೇಟ್ ಆಗಿರಿಸಿ. ಸಾಧ್ಯವಾದರೆ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯಿರಿ.

ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಉಸಿರಾಟದ ತೊಂದರೆಯೊಂದಿಗೆ ಎದೆನೋವು, ತೀವ್ರ ಆಯಾಸ, ತುಟಿ ಅಥವಾ ಉಗುರುಗಳು ನೀಲಿ ಬಣ್ಣಕ್ಕೆ ತಿರುಗುವುದು, ತೀವ್ರ ತಲೆನೋವು, ಗೊಂದಲ, ನಿರಂತರ ತಲೆಸುತ್ತು ಅಥವಾ ನಡೆಯಲು ಕಷ್ಟವಾಗುವುದು ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯಬೇಕು. ಇವು ಗಂಭೀರ ಆರೋಗ್ಯ ಸಮಸ್ಯೆಗಳ ಸೂಚನೆಯಾಗಿರಬಹುದು.

ಇದನ್ನೂ ಓದಿ: ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯವಂತರಾಗಿ ನೂರ್ಕಾಲ ಬಾಳಿ

ಪ್ರವಾಸಕ್ಕೆ ಹೋಗುವಾಗ ಏನನ್ನು ಮಾಡಬಾರದು

ಬೆಟ್ಟ ಪ್ರದೇಶಗಳಿಗೆ ಯಾವುದೇ ಸಿದ್ಧತೆ ಇಲ್ಲದೆ ಹೋಗುವುದು, ಒಂದೇ ದಿನದಲ್ಲಿ ಹೆಚ್ಚಿನ ಎತ್ತರಕ್ಕೆ ಏರುವುದು, ಸಾಕಷ್ಟು ನೀರು ಕುಡಿಯದೇ ಇರುವುದು ಹಾಗೂ ಊಟ ಬಿಟ್ಟು ಹೋಗುವುದು ಸಮಸ್ಯೆಯನ್ನು ಹೆಚ್ಚಿಸಬಹುದು. ಮದ್ಯಪಾನ ಮತ್ತು ಧೂಮಪಾನ ಕೂಡ ದೇಹದಲ್ಲಿನ ಆಮ್ಲಜನಕದ ಲಭ್ಯತೆಯನ್ನು ಕಡಿಮೆ ಮಾಡುತ್ತವೆ.

ಸುರಕ್ಷಿತ ಪ್ರವಾಸಕ್ಕಾಗಿ ಸಲಹೆಗಳು

ಮಕ್ಕಳು, ವಯೋವೃದ್ಧರು ಹಾಗೂ ಹೃದಯ ಅಥವಾ ಶ್ವಾಸಕೋಶದ ಸಮಸ್ಯೆ ಇರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ದೇಹದ ಸೂಚನೆಗಳನ್ನು ಗಮನಿಸಿ, ಅಗತ್ಯವಿದ್ದರೆ ವಿಶ್ರಾಂತಿ ಪಡೆದು ವೈದ್ಯರ ಸಲಹೆ ಪಡೆಯುವುದು ಸುರಕ್ಷಿತ ಪ್ರಯಾಣಕ್ಕೆ ಸಹಕಾರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!